ಚಿತ್ರ ಮಂಜರಿ

ಮುದ್ದಾದ ಮಗಳಿಗೆ ಹೆಸರಿಟ್ಟ ರಣ್‌ಬೀರ್, ಆಲಿಯಾ ದಂಪತಿ

ಆಲಿಯಾ ಭಟ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮಗಳ ಆಗಮನದ ಖುಷಿಯಲ್ಲಿದ್ದಾರೆ ಕಪೂರ್ ಕುಟುಂಬ. ಇದೀಗ ಮುದ್ದು ಮಗಳಿಗೆ ಚೆಂದದ ಹೆಸರನ್ನ ಇಟ್ಟಿದ್ದಾರೆ. ರಣ್‌ಬೀರ್  ಮತ್ತು ಆಲಿಯಾ ಮಗಳಿಗೆ ನಾಮಕರಣ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ನವೆಂಬರ್ 6 ರಂದು ಆಲಿಯಾ ಭಟ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇನ್ನೂ ರಣಬೀರ್ ದಂಪತಿಯ ಮಗಳಿಗೆ ಇಡುವ ಹೆಸರೇನು ಅನ್ನೋದನ್ನ ತಿಳಿದುಕೊಳ್ಳುವ ಕುತೂಹಲವೂ ಅಭಿಮಾನಿಗಳಿಗೆ ಹೆಚ್ಚಾಗಿತ್ತು. ಈಗ ರಣಬೀರ್ ಹಾಗೂ ಆಲಿಯಾ ಮಗಳ ಹೆಸರು ಬಹಿರಂಗಪಡಿಸಲಾಗಿದೆ.

ಮಗಳ ಹೆಸರನ್ನು ಅಲಿಯಾ ಭಟ್ ಇನ್‌ಸ್ಟಾಗ್ರಾಂ ಮೂಲಕ ಬಹಿರಂಗ ಪಡಿಸಿದ್ದಾರೆ. ʻರಾಹಾʼ ಪದದ ಅರ್ಥವನ್ನು ಅಲಿಯಾ ಭಟ್ ವಿವರಿಸಿದ್ದಾರೆ. ರಾಹಾ ಹಲವು ಅರ್ಥಗಳನ್ನು ಹೊಂದಿದೆ. ರಾಹಾ ಎಂದರೆ ದೈವಿಕ ಮಾರ್ಗ ಎಂದರ್ಥ. ಸ್ವಾಹಿಲಿ ಭಾಷೆಯಲ್ಲಿ ಸಂತೋಷ. ಇನ್ನು ಸಂಸ್ಕೃತದಲ್ಲಿ ಕುಲ ಎಂದರ್ಥ.

ಬಂಗಾಳಿ ಭಾಷೆಯಲ್ಲಿ ವಿಶ್ರಾಂತಿ, ಸೌಕರ್ಯ, ಪರಿಹಾರ ಎಂದರ್ಥ, ಅರೆಬಿಕ್ ಭಾಷೆಯಲ್ಲಿ ರಾಹಾ ಎಂದರೆ ಶಾಂತಿ, ಸಂತೋಷ ಹಾಗೂ ಸ್ವಾತಂತ್ರ‍್ಯ ಎಂಬ ಅರ್ಥವಿದೆ. ನಾವು ರಾಹಾಳನ್ನು ಕೈಯಲ್ಲಿ ಹಿಡಿದ ದಿನದಿಂದ ನಾವು ಸಂತೋಷ, ಶಾಂತಿ ಅನುಭವಿಸುತ್ತಿದ್ದೇವೆ. ನಮ್ಮ ಕುಟುಂಬವನ್ನು ಸಂತೋಷವಾಗಿರಿಸಿದ ರಾಹಾಳಿಗೆ ಧನ್ಯವಾದ. ನಮ್ಮ ಜೀವನ ಈಗಷ್ಟೇ ಆರಂಭವಾದಂತಿದೆ ಎಂದು ಅಲಿಯಾ ಭಟ್ ಹೇಳಿದ್ದಾರೆ.

andolanait

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

10 hours ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

11 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

11 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

12 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

12 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

12 hours ago