ಚಿತ್ರ ಮಂಜರಿ

ಮುದ್ದಾದ ಮಗಳಿಗೆ ಹೆಸರಿಟ್ಟ ರಣ್‌ಬೀರ್, ಆಲಿಯಾ ದಂಪತಿ

ಆಲಿಯಾ ಭಟ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮಗಳ ಆಗಮನದ ಖುಷಿಯಲ್ಲಿದ್ದಾರೆ ಕಪೂರ್ ಕುಟುಂಬ. ಇದೀಗ ಮುದ್ದು ಮಗಳಿಗೆ ಚೆಂದದ ಹೆಸರನ್ನ ಇಟ್ಟಿದ್ದಾರೆ. ರಣ್‌ಬೀರ್  ಮತ್ತು ಆಲಿಯಾ ಮಗಳಿಗೆ ನಾಮಕರಣ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ನವೆಂಬರ್ 6 ರಂದು ಆಲಿಯಾ ಭಟ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇನ್ನೂ ರಣಬೀರ್ ದಂಪತಿಯ ಮಗಳಿಗೆ ಇಡುವ ಹೆಸರೇನು ಅನ್ನೋದನ್ನ ತಿಳಿದುಕೊಳ್ಳುವ ಕುತೂಹಲವೂ ಅಭಿಮಾನಿಗಳಿಗೆ ಹೆಚ್ಚಾಗಿತ್ತು. ಈಗ ರಣಬೀರ್ ಹಾಗೂ ಆಲಿಯಾ ಮಗಳ ಹೆಸರು ಬಹಿರಂಗಪಡಿಸಲಾಗಿದೆ.

ಮಗಳ ಹೆಸರನ್ನು ಅಲಿಯಾ ಭಟ್ ಇನ್‌ಸ್ಟಾಗ್ರಾಂ ಮೂಲಕ ಬಹಿರಂಗ ಪಡಿಸಿದ್ದಾರೆ. ʻರಾಹಾʼ ಪದದ ಅರ್ಥವನ್ನು ಅಲಿಯಾ ಭಟ್ ವಿವರಿಸಿದ್ದಾರೆ. ರಾಹಾ ಹಲವು ಅರ್ಥಗಳನ್ನು ಹೊಂದಿದೆ. ರಾಹಾ ಎಂದರೆ ದೈವಿಕ ಮಾರ್ಗ ಎಂದರ್ಥ. ಸ್ವಾಹಿಲಿ ಭಾಷೆಯಲ್ಲಿ ಸಂತೋಷ. ಇನ್ನು ಸಂಸ್ಕೃತದಲ್ಲಿ ಕುಲ ಎಂದರ್ಥ.

ಬಂಗಾಳಿ ಭಾಷೆಯಲ್ಲಿ ವಿಶ್ರಾಂತಿ, ಸೌಕರ್ಯ, ಪರಿಹಾರ ಎಂದರ್ಥ, ಅರೆಬಿಕ್ ಭಾಷೆಯಲ್ಲಿ ರಾಹಾ ಎಂದರೆ ಶಾಂತಿ, ಸಂತೋಷ ಹಾಗೂ ಸ್ವಾತಂತ್ರ‍್ಯ ಎಂಬ ಅರ್ಥವಿದೆ. ನಾವು ರಾಹಾಳನ್ನು ಕೈಯಲ್ಲಿ ಹಿಡಿದ ದಿನದಿಂದ ನಾವು ಸಂತೋಷ, ಶಾಂತಿ ಅನುಭವಿಸುತ್ತಿದ್ದೇವೆ. ನಮ್ಮ ಕುಟುಂಬವನ್ನು ಸಂತೋಷವಾಗಿರಿಸಿದ ರಾಹಾಳಿಗೆ ಧನ್ಯವಾದ. ನಮ್ಮ ಜೀವನ ಈಗಷ್ಟೇ ಆರಂಭವಾದಂತಿದೆ ಎಂದು ಅಲಿಯಾ ಭಟ್ ಹೇಳಿದ್ದಾರೆ.

andolanait

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

3 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

3 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

8 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

8 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

8 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

8 hours ago