ಚಿತ್ರ ಮಂಜರಿ

ಮುದ್ದಾದ ಮಗಳಿಗೆ ಹೆಸರಿಟ್ಟ ರಣ್‌ಬೀರ್, ಆಲಿಯಾ ದಂಪತಿ

ಆಲಿಯಾ ಭಟ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮಗಳ ಆಗಮನದ ಖುಷಿಯಲ್ಲಿದ್ದಾರೆ ಕಪೂರ್ ಕುಟುಂಬ. ಇದೀಗ ಮುದ್ದು ಮಗಳಿಗೆ ಚೆಂದದ ಹೆಸರನ್ನ ಇಟ್ಟಿದ್ದಾರೆ. ರಣ್‌ಬೀರ್  ಮತ್ತು ಆಲಿಯಾ ಮಗಳಿಗೆ ನಾಮಕರಣ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ನವೆಂಬರ್ 6 ರಂದು ಆಲಿಯಾ ಭಟ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇನ್ನೂ ರಣಬೀರ್ ದಂಪತಿಯ ಮಗಳಿಗೆ ಇಡುವ ಹೆಸರೇನು ಅನ್ನೋದನ್ನ ತಿಳಿದುಕೊಳ್ಳುವ ಕುತೂಹಲವೂ ಅಭಿಮಾನಿಗಳಿಗೆ ಹೆಚ್ಚಾಗಿತ್ತು. ಈಗ ರಣಬೀರ್ ಹಾಗೂ ಆಲಿಯಾ ಮಗಳ ಹೆಸರು ಬಹಿರಂಗಪಡಿಸಲಾಗಿದೆ.

ಮಗಳ ಹೆಸರನ್ನು ಅಲಿಯಾ ಭಟ್ ಇನ್‌ಸ್ಟಾಗ್ರಾಂ ಮೂಲಕ ಬಹಿರಂಗ ಪಡಿಸಿದ್ದಾರೆ. ʻರಾಹಾʼ ಪದದ ಅರ್ಥವನ್ನು ಅಲಿಯಾ ಭಟ್ ವಿವರಿಸಿದ್ದಾರೆ. ರಾಹಾ ಹಲವು ಅರ್ಥಗಳನ್ನು ಹೊಂದಿದೆ. ರಾಹಾ ಎಂದರೆ ದೈವಿಕ ಮಾರ್ಗ ಎಂದರ್ಥ. ಸ್ವಾಹಿಲಿ ಭಾಷೆಯಲ್ಲಿ ಸಂತೋಷ. ಇನ್ನು ಸಂಸ್ಕೃತದಲ್ಲಿ ಕುಲ ಎಂದರ್ಥ.

ಬಂಗಾಳಿ ಭಾಷೆಯಲ್ಲಿ ವಿಶ್ರಾಂತಿ, ಸೌಕರ್ಯ, ಪರಿಹಾರ ಎಂದರ್ಥ, ಅರೆಬಿಕ್ ಭಾಷೆಯಲ್ಲಿ ರಾಹಾ ಎಂದರೆ ಶಾಂತಿ, ಸಂತೋಷ ಹಾಗೂ ಸ್ವಾತಂತ್ರ‍್ಯ ಎಂಬ ಅರ್ಥವಿದೆ. ನಾವು ರಾಹಾಳನ್ನು ಕೈಯಲ್ಲಿ ಹಿಡಿದ ದಿನದಿಂದ ನಾವು ಸಂತೋಷ, ಶಾಂತಿ ಅನುಭವಿಸುತ್ತಿದ್ದೇವೆ. ನಮ್ಮ ಕುಟುಂಬವನ್ನು ಸಂತೋಷವಾಗಿರಿಸಿದ ರಾಹಾಳಿಗೆ ಧನ್ಯವಾದ. ನಮ್ಮ ಜೀವನ ಈಗಷ್ಟೇ ಆರಂಭವಾದಂತಿದೆ ಎಂದು ಅಲಿಯಾ ಭಟ್ ಹೇಳಿದ್ದಾರೆ.

andolanait

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

5 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

5 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

5 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

5 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

5 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

5 hours ago