ಚಿತ್ರ ಮಂಜರಿ

ಮಗಳ ಫೋಟೋ, ಹೆಸರು ರಿವಿಲ್‌ ಮಾಡಿ ರಿಷಬ್‌ ಶೆಟ್ಟಿ

ಸ್ಯಾಂಡಲ್‌ವುಡ್‌ ಡೈರೆಕ್ಟರ್ ಕಮ್ ನಟ ರಿಷಬ್ ಶೆಟ್ಟಿ ಕಾಂತಾರಾ ಸಿನಿಮಾ ಯಶಸ್ಸಿನಲ್ಲಿ ತೇಲುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣ ಮಾಡಿರುವ ಕಾಂತಾರ ಸಿನಿಮಾ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾಗಿದೆ ಆದರೆ ಚಿತ್ರಕಥೆ ಮತ್ತು ಮೇಕಿಂಗ್‌ನಿಂದ ಪರ ಭಾಷಯವರು ಕೂಡ ಸಿನಿಮಾ ನೋಡುತ್ತಿದ್ದಾರೆ. ಹೀಗಾಗಿ ಒಂದು ಶೋ ಟಿಕೆಟ್‌ ಸಿಗುವುದು ಕೂಡ ಕಷ್ಟವಾಗಿದೆ ಎನ್ನಬಹುದು. ಈ ಸಂಭ್ರಮದಲ್ಲಿರುವ ಶೆಟ್ರು ಫ್ಯಾಮಿಲಿ ಅಭಿಮಾನಿಗಳ ಜೊತೆ ಮತ್ತೊಂದು ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ.

ಹೌದು! ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಮಾರ್ಚ್ 4ರಂದು ಹೆಣ್ಣು ಮಗುವನ್ನು ಬರ ಮಾಡಿಕೊಂಡರು. ‘ಇಷ್ಟೇ ಚೆಂದದ ಮಗಳು ಹುಟ್ಟಿದ್ದಾಳೆ. ತಾಯಿ ಮಗಳು ಆರೋಗ್ಯವಾಗಿದ್ದಾರೆ’ ಎಂದು ಬರೆದುಕೊಂಡಿದ್ದರು. ಆದರೆ ಫೋಟೋ ಮತ್ತು ಹೆಸರು ರಿವೀಲ್ ಮಾಡಿರಲಿಲ್ಲ. ಕಾಂತಾರ ಯಶಸ್ಸಿನಲ್ಲಿರುವ ರಿಷಬ್ ಶೆಟ್ಟಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ರಿವೀಲ್ ಮಾಡಿದ್ದಾರೆ.

‘ಎಲ್ಲರಿಗೂ ನವರಾತ್ರಿಯ ಶುಭಾಶಯಗಳು. ನಾಡಹಬ್ಬಕ್ಕೆ ಕಾಂತಾರದ ಯಶಸ್ಸು, ನಾಡಿನ ಜನರ ಪ್ರೀತಿ ಮತ್ತಷ್ಟು ಸಂಭ್ರಮವನ್ನು ತಂದಿವೆ. ಇದಕ್ಕೆ ಕಲಶಪ್ರಾಯವಾಗಿ, ಮಗಳು ರಾಧ್ಯಾಳ ಮುಗ್ಧ ನಗುವೂ ಜೊತೆಯಾಗಿದೆ.. ನಿಮ್ಮೆಲ್ಲರ ಹಾರೈಕೆಗಳಿರಲಿ’ ಎಂದು ಬರೆದುಕೊಂಡಿದ್ದಾರೆ.

 

andolana

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

4 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago