ಗದಗ: ಇಂದು (ಜನವರಿ ೮) ನಟ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ದಿನವಾಗಿದೆ. ಯಶ್ ಹುಟ್ಟು ಹಬ್ಬದ ಪ್ರಯುಕ್ತ ಗದಗ ಜಿಲ್ಲೆಯ ಸೂರಣಗಿ ಗ್ರಾಮದ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಸಾವಿಗೀಡಾಗಿದ್ದು, ಯಶ್ ಜನ್ಮದಿನದಂದೇ ಆ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.
ಈ ಯುವಕರ ಅಂತಿಮ ಸಂಸ್ಕಾರದಲ್ಲಿ ಇಡೀ ಸೂರಣಗಿ ಗ್ರಾಮವಲ್ಲದೆ ಸುತ್ತಮುತ್ತಲಿನ ಊರುಗಳ ಜನರು ಸಹ ಭಾಗಿಯಾಗಿದ್ದರು. ವಿದ್ಯುತ್ ಪ್ರವಹಿಸಿ ಸಾವಿಗೀಡಾದ ಹಣಮಂತ ಹರಿಜನ, ಮುರಳಿ ನಡುವಿನಮನಿ ಮತ್ತು ನವೀನ್ ಅವರ ಅಂತ್ಯಸಂಸ್ಕಾರವನ್ನು ಅವರ ಗ್ರಾಮದಲ್ಲಿ ಸಾಮೂಹಿಕವಾಗಿ ನೆರವೇರಿಸಲಾಯಿತು.
ಮೃತರ ಕುಟುಂಬದವರು ಬಡವರಾಗಿದ್ದು, ಕೂಲಿಯಿಂದ ಜೀವನ ಸಾಗಿಸುತ್ತಿದ್ದರು. ಈ ಬಗ್ಗೆ ವಿಷಾಧ ವ್ಯಕ್ತಪಡಿಸಿರುವ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಷ್.ಕೆ ಪಾಟೀಲ್ ಅವರು ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರವನ್ನು ಮತ್ತು ಗಾಯಾಳುಗಳಿಗೆ ತಲಾ ಐವತ್ತು ಸಾವಿರ ರೂಪಾಯಿ ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…