ಚಿತ್ರ ಮಂಜರಿ

ಡಿಸೆಂಬರ್ 9ಕ್ಕೆ ಹಿಂದಿ ವರ್ಷನ್ ಒಟಿಟಿಯಲ್ಲಿ `ಕಾಂತಾರ’

ಚಿತ್ರರಂಗದಲ್ಲಿ ಹಿಸ್ಟರಿ ಕ್ರಿಯೆಟ್ ಮಾಡಿರುವ ಸಿನಿಮಾ `ಕಾಂತಾರ’ ಇದೀಗ ಹಿಂದಿ ವರ್ಷನ್ ಒಟಿಟಿಯಲ್ಲಿ ತೆರೆಗೆ ಅಪ್ಪಳಿಸಲು ರೆಡಿಯಾಗಿದೆ. ಬಾಲಿವುಡ್‌ನ ಗೆಲ್ಲಾಪೆಟ್ಟಿಗೆಯಲ್ಲಿ ಗೆದ್ದಿರುವ ಸಿನಿಮಾ, ಒಟಿಟಿಯ ಹಿಂದಿ ವರ್ಷನ್‌ನಲ್ಲಿ `ಕಾಂತಾರ’ ಬರಲಿದೆ.

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ `ಕಾಂತಾರ’ ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಿಸಿದ ಬಳಿಕ ಒಟಿಟಿಗೆ ಎಂಟ್ರಿ ಕೊಟ್ಟಿದೆ. ಕನ್ನಡದ ಜೊತೆಗೆ ತಮಿಳು, ತೆಲುಗು ಮತ್ತು ಮಲಯಾಳಂ ವರ್ಷನ್‌ನಲ್ಲಿ `ಕಾಂತಾರ’ ಅಮೆಜಾನ್ ಪ್ರೈಮ್‌ನಲ್ಲಿ ಈಗಾಗಲೇ ರಿಲೀಸ್ ಆಗಿದೆ. ಚಿತ್ರಮಂದಿರದ ಬಳಿಕ ಒಟಿಟಿಯಲ್ಲೂ `ಕಾಂತಾರ’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಹಿಂದಿ ವರ್ಷನ್ ಒಟಿಟಿಗೆ ರಿಲೀಸ್ ಯಾವಾಗ ಎಂದು ಹಿಂದಿ ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದರು. ಅದಕ್ಕೀಗ ಉತ್ತರ ಸಿಕ್ಕಿದೆ.

ಇದೀಗ ರಿಷಬ್ ಶೆಟ್ಟಿ ಹಿಂದಿ ವರ್ಷನ್ ರಿಲೀಸ್ ಡೇಟ್ ಮತ್ತು ಯಾವ ಒಟಿಟಿ ಪ್ಲಾಟ್‌ಪಾರ್ಮ್ ಎಂದು ಬಹಿರಂಗ ಪಡಿಸಿದರು. ಅಂದಹಾಗೆ ಹಿಂದಿ ವರ್ಷನ್ ʻಕಾಂತಾರʼ ಒಟಿಟಿಗಳ ದೈತ್ಯ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ನೆಟ್‌ಫ್ಲಿಕ್ಸ್ `ಕಾಂತಾರ’ ಸ್ಟ್ರೀಮಿಂಗ್ ಬಗ್ಗೆ ರಿಷಬ್ ಶೆಟ್ಟಿ ದಿನಾಂಕ ಬಹಿರಂಗಪಡಿಸಿದರು. `ಕಾಂತಾರ’ ಹಿಂದಿ ವರ್ಷನ್ ಒಟಿಟಿಯಲ್ಲಿ ಡಿಸೆಂಬರ್ 9ಕ್ಕೆ ತೆರೆಗೆ ಬರಲಿದೆ.

ಈಗಾಗಲೇ ಕೋಟಿ ಕೋಟಿ ಲೂಟಿ ಮಾಡಿರುವ ʻಕಾಂತಾರʼ ಸಿನಿಮಾ ಹಿಂದಿ ವರ್ಷನ್‌ನಲ್ಲಿ ಗೆಲ್ಲಲು ಬರುತ್ತಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

3 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

4 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

9 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

9 hours ago