ಚಿತ್ರ ಮಂಜರಿ

ದೀಪಿಕಾ ಬಿಕಿನಿ ಧರಿಸಿರೋದು ಅವರ ಸಮಸ್ಯೆಯಲ್ಲ, ಕೇಸರಿ ಬಣ್ಣ ಇರೋದು ಹಲವರ ಸಮಸ್ಯೆ :ದೀಪಿಕಾ ಪರ ನಿಂತ ನಟಿ ಆಶಾ ಪರೇಖ್

ನವದೆಹಲಿ : ಬಾದಷಾ ಶಾರುಖ್ ನಟನೆಯ `ಪಠಾಣ್’  ಮುಂದಿನ ಜನವರಿಗೆ ತೆರೆಯ ಮೇಲೆ ಅಬ್ಬರಿಸಲು ಸಜ್ಜಾಗಿದೆ. ರಿಲೀಸ್‌ಗೂ ಮುನ್ನವೇ ಸಾಕಷ್ಟು ವಿವಾದಗಳನ್ನ ಹುಟ್ಟು ಹಾಕಿದೆ. ಇನ್ನೂ ದೀಪಿಕಾ  ಕೇಸರಿ ಬಿಕಿನಿ ವಿವಾದ, ಸಿನಿಮಾ ಬ್ಯಾನ್  ವಿಷ್ಯವಾಗಿ ದಾದಾ ಫಾಲ್ಕೆ ಪುರಸ್ಕೃತ ನಟಿ ಆಶಾ ಪರೇಖ್ ಮಾತನಾಡಿದ್ದಾರೆ.

ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ದೀಪಿಕಾ ಕೇಸರಿ ಬಿಕಿನಿ ವಿವಾದ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. `ಪಠಾಣ್’ ಚಿತ್ರದ ಹಾಡಿನಲ್ಲಿ ನಟಿ ದೀಪಿಕಾ ಸಖತ್ ಹಾಟ್ ಆಗಿ ಮೈಚಳಿ ಬಿಟ್ಟು ಶಾರುಖ್‌ ಜೊತೆ ಸೊಂಟ ಬಳುಕಿಸಿದ್ದಾರೆ. ʻಬೇಷರಂ ರಂಗ್ʼ ಹಾಡಿನಲ್ಲಿ ದೀಪಿಕಾ ಧರಿಸಿರುವ ಕೇಸರಿ ಬಣ್ಣದ ಬಟ್ಟೆ ಕುರಿತಾಗಿ ಈ ಚಿತ್ರವನ್ನೇ ನಿಷೇಧಿಸಬೇಕು ಎಂಬ ಕೆಲ ಮಾತುಗಳು ಸಹ ಕೇಳಿ ಬಂದಿದ್ದವು. ಸದ್ಯ ಇದೇ ವಿಚಾರವಾಗಿ ಹಿರಿಯ ನಟಿ ಆಶಾ ಪರೇಖ್ ಮಾತನಾಡಿದ್ದಾರೆ. ಪಠಾಣ್‌ ಪರ ಹಿರಿಯ ನಟಿ ಆಶಾ ಪರೇಖ್ ಪ್ರತಿಕ್ರಿಯೆ ನೀಡಿದ್ದಾರೆ.

ನಟಿ ಆಶಾ ಪರೇಖ್ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ `ಬೇಷರಂ ರಂಗ್’ ಹಾಡಿನ ಕುರಿತಾಗಿ ಕೇಳಲಾಗಿದೆ. ಈ ಬಗ್ಗೆ ಆಶಾ ಪರೇಖ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಚಿತ್ರದ ಮೂಲ ಉದ್ದೇಶ ಮನರಂಜನೆ ನೀಡುವುದಾಗಿದೆ. ದೀಪಿಕಾ ಕೇಸರಿ ಬಣ್ಣದ ಬಟ್ಟೆ ಧರಿಸಿರುವುದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಕೇಸರಿ ಉಡುಪು ಧರಿಸಿದ್ದಕ್ಕೆ ಬ್ಯಾನ್‌ ಮಾಡಿ ಅನ್ನೋದು ಸರಿಯಲ್ಲ. ದೀಪಿಕಾ ಬಿಕಿನಿ ಧರಿಸಿರೋದು ಅವರ ಸಮಸ್ಯೆಯಲ್ಲ. ಕೇಸರಿ ಬಣ್ಣ ಇರೋದು ಹಲವರ ಸಮಸ್ಯೆ. ನಮ್ಮ ಯೋಚನೆ ಸಂಕುಚಿತ ಸ್ವಭಾವದಿಂದ ಇದೆ. ನಾವು ಯೋಚಿಸುವ ರೀತಿ ಬದಲಾಗಬೇಕಿದೆ. ಈ ಮೂಲಕ ಬಾಲಿವುಡ್‌ನ ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ನಟಿ ಆಶಾ ಮಾತನಾಡಿದ್ದಾರೆ. ಕೆಲ ಚಿತ್ರಗಳು ಹೇಳಿಕೊಳ್ಳುವಂತಹ ದಾಖಲೆ ಮಾಡುತ್ತಿಲ್ಲ. ಹಾಗಾಗಿ ಹಿಂದಿ ಚಿತ್ರರಂಗ ಸೋಲುತ್ತಿದೆ ಎಂದಿದ್ದಾರೆ.

andolanait

Recent Posts

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

15 mins ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

1 hour ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

3 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

4 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

4 hours ago

ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…

5 hours ago