ಚಿತ್ರ ಮಂಜರಿ

ದೀಪಿಕಾ ಬಿಕಿನಿ ಧರಿಸಿರೋದು ಅವರ ಸಮಸ್ಯೆಯಲ್ಲ, ಕೇಸರಿ ಬಣ್ಣ ಇರೋದು ಹಲವರ ಸಮಸ್ಯೆ :ದೀಪಿಕಾ ಪರ ನಿಂತ ನಟಿ ಆಶಾ ಪರೇಖ್

ನವದೆಹಲಿ : ಬಾದಷಾ ಶಾರುಖ್ ನಟನೆಯ `ಪಠಾಣ್’  ಮುಂದಿನ ಜನವರಿಗೆ ತೆರೆಯ ಮೇಲೆ ಅಬ್ಬರಿಸಲು ಸಜ್ಜಾಗಿದೆ. ರಿಲೀಸ್‌ಗೂ ಮುನ್ನವೇ ಸಾಕಷ್ಟು ವಿವಾದಗಳನ್ನ ಹುಟ್ಟು ಹಾಕಿದೆ. ಇನ್ನೂ ದೀಪಿಕಾ  ಕೇಸರಿ ಬಿಕಿನಿ ವಿವಾದ, ಸಿನಿಮಾ ಬ್ಯಾನ್  ವಿಷ್ಯವಾಗಿ ದಾದಾ ಫಾಲ್ಕೆ ಪುರಸ್ಕೃತ ನಟಿ ಆಶಾ ಪರೇಖ್ ಮಾತನಾಡಿದ್ದಾರೆ.

ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ದೀಪಿಕಾ ಕೇಸರಿ ಬಿಕಿನಿ ವಿವಾದ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. `ಪಠಾಣ್’ ಚಿತ್ರದ ಹಾಡಿನಲ್ಲಿ ನಟಿ ದೀಪಿಕಾ ಸಖತ್ ಹಾಟ್ ಆಗಿ ಮೈಚಳಿ ಬಿಟ್ಟು ಶಾರುಖ್‌ ಜೊತೆ ಸೊಂಟ ಬಳುಕಿಸಿದ್ದಾರೆ. ʻಬೇಷರಂ ರಂಗ್ʼ ಹಾಡಿನಲ್ಲಿ ದೀಪಿಕಾ ಧರಿಸಿರುವ ಕೇಸರಿ ಬಣ್ಣದ ಬಟ್ಟೆ ಕುರಿತಾಗಿ ಈ ಚಿತ್ರವನ್ನೇ ನಿಷೇಧಿಸಬೇಕು ಎಂಬ ಕೆಲ ಮಾತುಗಳು ಸಹ ಕೇಳಿ ಬಂದಿದ್ದವು. ಸದ್ಯ ಇದೇ ವಿಚಾರವಾಗಿ ಹಿರಿಯ ನಟಿ ಆಶಾ ಪರೇಖ್ ಮಾತನಾಡಿದ್ದಾರೆ. ಪಠಾಣ್‌ ಪರ ಹಿರಿಯ ನಟಿ ಆಶಾ ಪರೇಖ್ ಪ್ರತಿಕ್ರಿಯೆ ನೀಡಿದ್ದಾರೆ.

ನಟಿ ಆಶಾ ಪರೇಖ್ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ `ಬೇಷರಂ ರಂಗ್’ ಹಾಡಿನ ಕುರಿತಾಗಿ ಕೇಳಲಾಗಿದೆ. ಈ ಬಗ್ಗೆ ಆಶಾ ಪರೇಖ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಚಿತ್ರದ ಮೂಲ ಉದ್ದೇಶ ಮನರಂಜನೆ ನೀಡುವುದಾಗಿದೆ. ದೀಪಿಕಾ ಕೇಸರಿ ಬಣ್ಣದ ಬಟ್ಟೆ ಧರಿಸಿರುವುದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಕೇಸರಿ ಉಡುಪು ಧರಿಸಿದ್ದಕ್ಕೆ ಬ್ಯಾನ್‌ ಮಾಡಿ ಅನ್ನೋದು ಸರಿಯಲ್ಲ. ದೀಪಿಕಾ ಬಿಕಿನಿ ಧರಿಸಿರೋದು ಅವರ ಸಮಸ್ಯೆಯಲ್ಲ. ಕೇಸರಿ ಬಣ್ಣ ಇರೋದು ಹಲವರ ಸಮಸ್ಯೆ. ನಮ್ಮ ಯೋಚನೆ ಸಂಕುಚಿತ ಸ್ವಭಾವದಿಂದ ಇದೆ. ನಾವು ಯೋಚಿಸುವ ರೀತಿ ಬದಲಾಗಬೇಕಿದೆ. ಈ ಮೂಲಕ ಬಾಲಿವುಡ್‌ನ ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ನಟಿ ಆಶಾ ಮಾತನಾಡಿದ್ದಾರೆ. ಕೆಲ ಚಿತ್ರಗಳು ಹೇಳಿಕೊಳ್ಳುವಂತಹ ದಾಖಲೆ ಮಾಡುತ್ತಿಲ್ಲ. ಹಾಗಾಗಿ ಹಿಂದಿ ಚಿತ್ರರಂಗ ಸೋಲುತ್ತಿದೆ ಎಂದಿದ್ದಾರೆ.

andolanait

Recent Posts

ವೋಟ್‌ ಚೋರಿ | ಸತ್ಯದ ಬೆನ್ನಿಗೆ ನಿಂತು ಮೋದಿ, ಶಾ, ಆರ್‌ಎಸ್‌ಎಸ್‌ ಅನ್ನು ಖಾಲಿ ಮಾಡಿಸುತ್ತೇವೆ : ಕಾಂಗ್ರೆಸ್‌ ಶಪಥ

ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…

12 hours ago

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…

13 hours ago

ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…

13 hours ago

ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್‌ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್‌ ಮಾಡಿ ಬಹಳ…

13 hours ago

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ; ಸಾರ್ವಜನಿಕರಲ್ಲಿ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!

ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…

13 hours ago

ಯತ್ನಾಳ್‌, ಸಂತೋಷ್‌ ಲಾಡ್‌ ಮಧ್ಯ ಸೈದ್ಧಾಂತಿಕ ವಾರ್‌ : ಶಿವಾಜಿ ಮುಸ್ಮಿಂ ವಿರೋಧಿಗಳಲ್ಲ ; ಲಾಡ್‌

ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ‌ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…

14 hours ago