ನವದೆಹಲಿ : ಬಾದಷಾ ಶಾರುಖ್ ನಟನೆಯ `ಪಠಾಣ್’ ಮುಂದಿನ ಜನವರಿಗೆ ತೆರೆಯ ಮೇಲೆ ಅಬ್ಬರಿಸಲು ಸಜ್ಜಾಗಿದೆ. ರಿಲೀಸ್ಗೂ ಮುನ್ನವೇ ಸಾಕಷ್ಟು ವಿವಾದಗಳನ್ನ ಹುಟ್ಟು ಹಾಕಿದೆ. ಇನ್ನೂ ದೀಪಿಕಾ ಕೇಸರಿ ಬಿಕಿನಿ ವಿವಾದ, ಸಿನಿಮಾ ಬ್ಯಾನ್ ವಿಷ್ಯವಾಗಿ ದಾದಾ ಫಾಲ್ಕೆ ಪುರಸ್ಕೃತ ನಟಿ ಆಶಾ ಪರೇಖ್ ಮಾತನಾಡಿದ್ದಾರೆ.
ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ದೀಪಿಕಾ ಕೇಸರಿ ಬಿಕಿನಿ ವಿವಾದ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. `ಪಠಾಣ್’ ಚಿತ್ರದ ಹಾಡಿನಲ್ಲಿ ನಟಿ ದೀಪಿಕಾ ಸಖತ್ ಹಾಟ್ ಆಗಿ ಮೈಚಳಿ ಬಿಟ್ಟು ಶಾರುಖ್ ಜೊತೆ ಸೊಂಟ ಬಳುಕಿಸಿದ್ದಾರೆ. ʻಬೇಷರಂ ರಂಗ್ʼ ಹಾಡಿನಲ್ಲಿ ದೀಪಿಕಾ ಧರಿಸಿರುವ ಕೇಸರಿ ಬಣ್ಣದ ಬಟ್ಟೆ ಕುರಿತಾಗಿ ಈ ಚಿತ್ರವನ್ನೇ ನಿಷೇಧಿಸಬೇಕು ಎಂಬ ಕೆಲ ಮಾತುಗಳು ಸಹ ಕೇಳಿ ಬಂದಿದ್ದವು. ಸದ್ಯ ಇದೇ ವಿಚಾರವಾಗಿ ಹಿರಿಯ ನಟಿ ಆಶಾ ಪರೇಖ್ ಮಾತನಾಡಿದ್ದಾರೆ. ಪಠಾಣ್ ಪರ ಹಿರಿಯ ನಟಿ ಆಶಾ ಪರೇಖ್ ಪ್ರತಿಕ್ರಿಯೆ ನೀಡಿದ್ದಾರೆ.
ನಟಿ ಆಶಾ ಪರೇಖ್ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ `ಬೇಷರಂ ರಂಗ್’ ಹಾಡಿನ ಕುರಿತಾಗಿ ಕೇಳಲಾಗಿದೆ. ಈ ಬಗ್ಗೆ ಆಶಾ ಪರೇಖ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಚಿತ್ರದ ಮೂಲ ಉದ್ದೇಶ ಮನರಂಜನೆ ನೀಡುವುದಾಗಿದೆ. ದೀಪಿಕಾ ಕೇಸರಿ ಬಣ್ಣದ ಬಟ್ಟೆ ಧರಿಸಿರುವುದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಕೇಸರಿ ಉಡುಪು ಧರಿಸಿದ್ದಕ್ಕೆ ಬ್ಯಾನ್ ಮಾಡಿ ಅನ್ನೋದು ಸರಿಯಲ್ಲ. ದೀಪಿಕಾ ಬಿಕಿನಿ ಧರಿಸಿರೋದು ಅವರ ಸಮಸ್ಯೆಯಲ್ಲ. ಕೇಸರಿ ಬಣ್ಣ ಇರೋದು ಹಲವರ ಸಮಸ್ಯೆ. ನಮ್ಮ ಯೋಚನೆ ಸಂಕುಚಿತ ಸ್ವಭಾವದಿಂದ ಇದೆ. ನಾವು ಯೋಚಿಸುವ ರೀತಿ ಬದಲಾಗಬೇಕಿದೆ. ಈ ಮೂಲಕ ಬಾಲಿವುಡ್ನ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ನಟಿ ಆಶಾ ಮಾತನಾಡಿದ್ದಾರೆ. ಕೆಲ ಚಿತ್ರಗಳು ಹೇಳಿಕೊಳ್ಳುವಂತಹ ದಾಖಲೆ ಮಾಡುತ್ತಿಲ್ಲ. ಹಾಗಾಗಿ ಹಿಂದಿ ಚಿತ್ರರಂಗ ಸೋಲುತ್ತಿದೆ ಎಂದಿದ್ದಾರೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…