ಚಿತ್ರ ಮಂಜರಿ

ರಶ್ಮಿಕಾ ಮಂದಣ್ಣ ಡೀಪ್‌ಫೇಕ್‌ ವಿಡಿಯೊ ಪ್ರಕರಣ: ನಾಲ್ವರನ್ನು ಬಂಧಿಸಿದ ಪೊಲೀಸರು

ಕಳೆದ ತಿಂಗಳು ನಟಿ ರಶ್ಮಿಕಾ ಮಂದಣ್ಣ ಅವರ ಎಡಿಟೆಡ್‌ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿ ಸದ್ದು ಮಾಡಿತ್ತು. ಜಾರಾ ಪಾಟೀಲ್‌ ಎಂಬಾಕೆಯ ವಿಡಿಯೊದಲ್ಲಿ ರಶ್ಮಿಕಾ ಮಂದಣ್ಣ ಮುಖವನ್ನು ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣಕ್ಕೆ ಕಿಡಿಗೇಡಿಗಳು ಹರಿಬಿಟ್ಟಿದ್ರು.

ಅರೆಬೆತ್ತಲೆ ಪ್ರದರ್ಶನವಿದ್ದ ಈ ವಿಡಿಯೊ ನೋಡಿದ್ದ ಹಲವರು ಇದು ರಶ್ಮಿಕಾ ಮಂದಣ್ಣ ಅವರದ್ದೇ ಎಂದು ನಂಬಿಬಿಟ್ಟಿದ್ದರು. ಆದರೆ ಹಲವಾರು ಸೆಲೆಬ್ರಿಟಿಗಳು ಸೇರಿದಂತೆ ಸ್ವತಃ ರಶ್ಮಿಕಾ ಮಂದಣ್ಣ ಸಹ ಈ ಕುರಿತು ಪ್ರತಿಕ್ರಿಯಿಸಿ ಖಂಡಿಸಿದ್ದರು. ಈ ವಿಡಿಯೊ ನೋಡಿ ನಿಜವಾಗಿಯೂ ನೋವಾಗಿದೆ, ಭಯವಾಗಿದೆ ಎಂದು ರಶ್ಮಿಕಾ ಮಂದಣ್ಣ ಡೀಪ್‌ಫೇಕ್‌ ಎಐ ತಂತ್ರಜ್ಞಾನದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಇದಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಸರ್ಕಾರ ಈ ಪ್ರಕರಣದ ಮೇಲೆ ನಿಗಾ ವಹಿಸಿತ್ತು. ಇದೀಗ ವಿಡಿಯೊ ಬಿಡುಗಡೆಯಾಗಿ ವೈರಲ್‌ ಆದ ತಿಂಗಳ ಬಳಿಕ ಪೊಲೀಸರು ನಾಲ್ವರು ಶಂಕಿತರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ದೆಹಲಿ ಮಹಿಳಾ ಆಯೋಗ ನಗರ ಪೊಲೀಸರಿಗೆ ನೋಟಿಸ್‌ ಕಳುಹಿಸಿದ ಬೆನ್ನಲ್ಲೇ ದೆಹಲಿ ಗುಪ್ತಚರ ಫ್ಯೂಷನ್‌ ಹಾಗೂ ಸ್ಟ್ರಾಟೆಜಿಕ್‌ ಆಪರೇಷನ್‌ ನವೆಂಬರ್‌ 11ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿತ್ತು.

ಸದ್ಯ ಸಾಮಾಜಿಕ ಜಾಲತಾಣಕ್ಕೆ ಅಪ್‌ಲೋಡ್‌ ಮಾಡಲಾಗಿದ್ದ ಡಿವೈಸ್‌ಗಳ ಐಪಿ ಅಡ್ರೆಸ್‌ ಬಳಸಿ ನಾಲ್ವರು ಸಂಕಿತರನ್ನು ಬಂಧಿಸಲಾಗಿದ್ದು ವಿಡಿಯೊ ರಚಿಸಿದವರು ಯಾರು ಎಂಬ ವಿಷಯ ತನಿಖೆಯಿಂದ ಹೊರಬೀಳುತ್ತಾ ಕಾದು ನೋಡಬೇಕಿದೆ.

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago