ಚಿತ್ರ ಮಂಜರಿ

ರಶ್ಮಿಕಾ ಮಂದಣ್ಣ ಡೀಪ್‌ಫೇಕ್‌ ವಿಡಿಯೊ ಪ್ರಕರಣ: ನಾಲ್ವರನ್ನು ಬಂಧಿಸಿದ ಪೊಲೀಸರು

ಕಳೆದ ತಿಂಗಳು ನಟಿ ರಶ್ಮಿಕಾ ಮಂದಣ್ಣ ಅವರ ಎಡಿಟೆಡ್‌ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿ ಸದ್ದು ಮಾಡಿತ್ತು. ಜಾರಾ ಪಾಟೀಲ್‌ ಎಂಬಾಕೆಯ ವಿಡಿಯೊದಲ್ಲಿ ರಶ್ಮಿಕಾ ಮಂದಣ್ಣ ಮುಖವನ್ನು ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣಕ್ಕೆ ಕಿಡಿಗೇಡಿಗಳು ಹರಿಬಿಟ್ಟಿದ್ರು.

ಅರೆಬೆತ್ತಲೆ ಪ್ರದರ್ಶನವಿದ್ದ ಈ ವಿಡಿಯೊ ನೋಡಿದ್ದ ಹಲವರು ಇದು ರಶ್ಮಿಕಾ ಮಂದಣ್ಣ ಅವರದ್ದೇ ಎಂದು ನಂಬಿಬಿಟ್ಟಿದ್ದರು. ಆದರೆ ಹಲವಾರು ಸೆಲೆಬ್ರಿಟಿಗಳು ಸೇರಿದಂತೆ ಸ್ವತಃ ರಶ್ಮಿಕಾ ಮಂದಣ್ಣ ಸಹ ಈ ಕುರಿತು ಪ್ರತಿಕ್ರಿಯಿಸಿ ಖಂಡಿಸಿದ್ದರು. ಈ ವಿಡಿಯೊ ನೋಡಿ ನಿಜವಾಗಿಯೂ ನೋವಾಗಿದೆ, ಭಯವಾಗಿದೆ ಎಂದು ರಶ್ಮಿಕಾ ಮಂದಣ್ಣ ಡೀಪ್‌ಫೇಕ್‌ ಎಐ ತಂತ್ರಜ್ಞಾನದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಇದಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಸರ್ಕಾರ ಈ ಪ್ರಕರಣದ ಮೇಲೆ ನಿಗಾ ವಹಿಸಿತ್ತು. ಇದೀಗ ವಿಡಿಯೊ ಬಿಡುಗಡೆಯಾಗಿ ವೈರಲ್‌ ಆದ ತಿಂಗಳ ಬಳಿಕ ಪೊಲೀಸರು ನಾಲ್ವರು ಶಂಕಿತರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ದೆಹಲಿ ಮಹಿಳಾ ಆಯೋಗ ನಗರ ಪೊಲೀಸರಿಗೆ ನೋಟಿಸ್‌ ಕಳುಹಿಸಿದ ಬೆನ್ನಲ್ಲೇ ದೆಹಲಿ ಗುಪ್ತಚರ ಫ್ಯೂಷನ್‌ ಹಾಗೂ ಸ್ಟ್ರಾಟೆಜಿಕ್‌ ಆಪರೇಷನ್‌ ನವೆಂಬರ್‌ 11ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿತ್ತು.

ಸದ್ಯ ಸಾಮಾಜಿಕ ಜಾಲತಾಣಕ್ಕೆ ಅಪ್‌ಲೋಡ್‌ ಮಾಡಲಾಗಿದ್ದ ಡಿವೈಸ್‌ಗಳ ಐಪಿ ಅಡ್ರೆಸ್‌ ಬಳಸಿ ನಾಲ್ವರು ಸಂಕಿತರನ್ನು ಬಂಧಿಸಲಾಗಿದ್ದು ವಿಡಿಯೊ ರಚಿಸಿದವರು ಯಾರು ಎಂಬ ವಿಷಯ ತನಿಖೆಯಿಂದ ಹೊರಬೀಳುತ್ತಾ ಕಾದು ನೋಡಬೇಕಿದೆ.

andolana

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

11 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

13 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

14 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

15 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

17 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

17 hours ago