ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ, ಎರಡು ಭಾಷೆಗಳಲ್ಲಿ ನಿರ್ಮಾಣ ಆಗುತ್ತಿರುವ “ಅಮರಾವತಿ ಪೊಲೀಸ್ ಸ್ಟೇಷನ್’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. 800ಕ್ಕೂ ಹೆಚ್ಚು ಚಿತ್ರಗಳಿಗೆ ಪ್ರಚಾರ ಕಾರ್ಯ ನಿರ್ವಹಿಸಿರುವ ಕನ್ನಡ ಚಿತ್ರರಂಗದ ಹಿರಿಯ ಪ್ರಚಾರಕರ್ತರಾದ ನಾಗೇಂದ್ರ ಅವರು ಟೀಸರ್ ಲೋಕಾರ್ಪಣೆ ಮಾಡಿ ಚಿತ್ರ ತಂಡಕ್ಕೆ ಶುಭ ಹಾರೈಸಿದರು.
ಧರ್ಮ ಕೀರ್ತಿರಾಜ್ ಈ ಚಿತ್ರದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ನಟಿಸಿದ್ದು, ಗುರುರಾಜ್ ಜಗ್ಗೇಶ ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೇದ್ವಿಕ ಚಿತ್ರದ ನಾಯಕಿ. ಒಂದು ಊರಲ್ಲಿ ನಿಗೂಢವಾಗಿ ಕಣ್ಮರೆಯಾಗುವವನ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ. ಚಿತ್ರದ ಕುರಿತು ಮಾತನಾಡುವ ಧರ್ಮ, “ಈ ಚಿತ್ರದಲ್ಲಿ ನಾನು ಮಸ್ತಿಯಲ್ಲಿರುವ ಪೊಲೀಸ್ ಪಾತ್ರ ಮಾಡಿದ್ದೇನೆ. ಸಿನಿಮಾದಲ್ಲಿ ಆಕ್ಷನ್ ತುಂಬಾ ವಿಶೇಷವಾಗಿದೆ ಎಂದರು.
ನಿರ್ದೇಶಕ ಪುನೀತ್, ‘ಈಗಾಗಲೇ 36 ದಿನಗಳ ಕಾಲ ನಮ್ಮ ಚಿತ್ರದ ಶೇ.90 ಭಾಗದ ಚಿತ್ರೀಕರಣ ನಡೆಸಲಾಗಿದೆ. ಕೈಮ್ಯಾಕ್ಸ್ ಹಾಗೂ ಹಾಡೊಂದರ ಶೂಟಿಂಗ್ ಮಾತ್ರವೇ ಬಾಕಿಯಿದೆ. ಅದನ್ನು ಗೋವಾ ಹಾಗೂ ಹಿಂದೂಪುರದಲ್ಲಿ ಚಿತ್ರೀಕರಿಸುವ ಯೋಜನೆ ಇದೆ. ಅಲ್ಲದೇ ಮಾರ್ಚ್.17ರಂದು ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನ ನಮ್ಮ ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡುತ್ತಿದ್ದೇವೆ. ಮಾರ್ಚ್ ಕೊನೆಗೆ ಅಥವಾ ಏಪ್ರಿಲ್ ವೇಳೆಗೆ ಸಿನಿಮಾ ಬಿಡುಗಡೆ ಮಾಡುವ ಯೋಚನೆಯಿದೆ’ ಎಂದರು.
ಪಿ.ಪಿ.ಪವರ್ ಪಿಕ್ಚರ್ ಲಾಂಛನದಲ್ಲಿ ಕೆ.ಆರ್.ಪ್ರದೀಪ್ ಕಮಲಪುರ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಹಿರಿಯ ನಟಿ ಭವ್ಯ, ಧರ್ಮ, ಸಾಧು ಕೋಕಿಲ, ಕಾಕ್ರೋಚ್ ಸುಧಿ, ನಾಗೇಂದ್ರ ಪ್ರಸಾದ್, ಧರ್ಮಣ್ಣ ಕಡೂರು ಮುಂತಾದವರು ನಟಿಸಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ರೋಣದ ಬಕ್ಮೇಶ ಸಂಗೀತ ಸಂಯೋಜನೆ, ಗೌತಮ್ಮಟ್ಟಿ ಛಾಯಾಗ್ರಹಣವಿದೆ.
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…