ಚಿತ್ರ ಮಂಜರಿ

ನೈಜ ಘಟನೆಗೆ ಸಿನಿಮೀಯ ಸ್ಪರ್ಶ ‘ತಲ್ವಾರ್’ ಹಿಡಿದ ಧರ್ಮ ಕೀರ್ತಿರಾಜ್

ಕೆಲವು ವರ್ಷಗಳ ಹಿಂದೆ ಧರ್ಮ ಕೀರ್ತಿರಾಜ್ ಅಭಿನಯದಲ್ಲಿ ‘ಮಮ್ತಾಜ್’ ಎಂಬ ಪ್ರೇಮಕಥೆಯನ್ನು ನಿರ್ದೇಶಿಸಿದ್ದರು ಮುರಳಿ. ಈಗ ಅವರು ಧರ್ಮ ಕೈಗೆ ‘ತಲ್ವಾರ್’ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಬರೀ ಮೆದುವಾದ ಪಾತ್ರಗಳನ್ನೇ  ಮಾಡುತ್ತಿದ್ದ ಧರ್ಮ ಅವರನ್ನು ಭೂಗತಲೋಕಕ್ಕೆ ಕಳಿಸಿದ್ದಾರೆ. ಮೊದಲನೇ ಬಾರಿಗೆ ರೌಡಿ ಪಾತ್ರವನ್ನು ಮಾಡಿಸಿದ್ದಾರೆ. ಈ ಚಿತ್ರ ಸುಮಾರು ಐದು ವರ್ಷಗಳ ಹಿಂದೆಯೇ ಪ್ರಾರಂಭವಾಗಿದ್ದರೂ, ಕಾರಣಾಂತರಗಳಿಂದ ಬಿಡುಗಡೆಯಾಗಿರಲಿಲ್ಲ. ಈಗ ಚಿತ್ರಕ್ಕೆ ಕೊನೆಗೂ ಬಿಡುಗಡೆಯ ಭಾಗ್ಯ ಸಿಕ್ಕಿದ್ದು, ಈ ವರ್ಷದ ಆರಂಭದಲ್ಲಿ ಬಿಡುಗಡೆ ಆಗಲಿದೆ.

ನಿರ್ದೇಶಕ ಮುರಳಿ ಅವರೇ ಈ ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನೂ ರಚಿಸಿದ್ದಾರೆ. ಕೆಲವು ವರ್ಷಗಳ ಹಿಂದೆ ತಾವು ನೋಡಿದ ಘಟನೆಯೇ ಅವರಿಗೆ ಈ ಚಿತ್ರಕ್ಕೆ ಸ್ಛೂರ್ತಿ. ‘ಇದೊಂದು ರೌಡಿಸಂ ಹಾಗೂ ಸಂಬಂಧಗಳ ಸುತ್ತ ನಡೆಯುವ ಕಥೆ. ನಾನು ಓದುವ ಸಂದರ್ಭದಲ್ಲಿ ನಮ್ಮ ಹಾಸ್ಟೆಲ್ ಬಳಿ ನನ್ನ ಕಣ್ಣೆದುರೇ ನಡೆದಂತಹ ನೈಜ ಘಟನೆ ಇಟ್ಟುಕೊಂಡು ಈ ಕಥೆ ಮಾಡಿದ್ದೇನೆ. ನಾಲ್ಕು ಸಾಹಸ ಸನ್ನಿವೇಶಗಳು ಈ ಚಿತ್ರದ ವಿಶೇಷತೆ.

ಈ ಚಿತ್ರದಲ್ಲಿ ನಟ ಧರ್ಮ ಅವರು ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ’ ಎನ್ನುತ್ತಾರೆ ಅವರು. ಈ ಚಿತ್ರದ ಕುರಿತಂತೆ ವಿವರಿಸುವ ಧರ್ಮ ಕೀರ್ತಿರಾಜ್, ‘ಇದೊಂದು ಆಕ್ಷನ್ ಹಾಗೂ ತಾಯಿ ಸೆಂಟಿಮೆಂಟ್ ಕಥೆ ಇರುವ ಚಿತ್ರ. ಚಿತ್ರದಲ್ಲಿ ಸಾಕಷ್ಟು ಮಾಸ್ ಅಂಶಗಳಿವೆ. ನನ್ನ ಪಾಲಿಗೆ ಇದು ವಿಶೇಷ ಚಿತ್ರ. ದುಡ್ಡಿಗಾಗಿ ಏನನ್ನಾದರೂ ಮಾಡಲು ಸಿದ್ದವಾಗಿರೋ ಯುವಕನ ಪಾತ್ರ ನನ್ನದು. ಆನಂತರ ಆತನಿಗೆ ಪಶ್ಚಾತ್ತಾಪವಾಗಿ ಏನು ಮಾಡುತ್ತಾನೆ ಎಂಬುದನ್ನು ‘ತಲ್ವಾರ್’ ಚಿತ್ರದ ಮೂಲಕ ಹೇಳಿದ್ದೇವೆ’ ಎನ್ನುತ್ತಾರೆ. ಕನ್ನಡ ಚಿತ್ರರಂಗದಲ್ಲಿ ಛಾಯಾಗ್ರಾಹಕರಾಗಿ ಹೆಸರು ಮಾಡಿರುವ ಸುರೇಶ್ ಬೈರಸಂದ್ರ, ಸ್ಟೋನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ‘ತಲ್ವಾರ್’ ಚಿತ್ರವನ್ನು ನಿರ್ಮಿಸಿದ್ದು, ಚಿತ್ರದಲ್ಲಿ ಧರ್ಮ ಕೀರ್ತಿರಾಜ್ ಜೊತೆಗೆ ಅದಿತಿ ರಾವ್, ಜೆಕೆ, ಅವಿನಾಶ್ (ಜ್ಯೂನಿಯರ್ ದರ್ಶನ್), ಶರತ್ ಲೋಹಿತಾಶ್ವ ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

2 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

2 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

2 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

3 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

3 hours ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

3 hours ago