ಚಿತ್ರ ಮಂಜರಿ

ತಮಿಳು, ತೆಲುಗು, ಮಲಿಯಾಳಂ ಸಿನಿಮಾಗಳಿಗೆ ನಿರ್ಮಾಪಕನಾಗಲು ಮುಂದಾಗಿರುವ ದೋನಿ

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಧೋನಿ ಈಗ ಸಿನಿಮಾರಂಗದ ಕಡೆ ಮುಖ ಮಾಡಿದ್ದಾರೆ. ಧೋನಿ ನಿರ್ಮಾಪಕರಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಕ್ರಿಕೆಟ್‌ನಿಂದ ನಿವೃತ್ತಿಯಾದ ಬಳಿಕ ಧೋನಿ ಕೊಂಚ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ಸೆಕೆಂಡ್ ಇನಿಂಗ್ಸ್ ಪ್ರಾರಂಭಿಸಿದ್ದಾರೆ.  ಧೋನಿ ಎಂಟರ್‌ಟೈನ್‌ಮೆಂಟ್ ಬ್ಯಾನರ್  ಶುರು ಮಾಡುವ ಮೂಲಕ ಇನ್ಮಂದೆ ನಿರ್ಮಾಪಕರಾಗಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಎಂದರೆ ಧೋನಿ ಎಂಟರ್‌ಟೈನ್‌ಮೆಂಟ್ ಕಂಪೆನಿಯು ಆರಂಭದಲ್ಲಿ ಕೇವಲ ಮೂರು ಭಾಷೆಗಳಲ್ಲಿ ಮಾತ್ರ ಚಿತ್ರಗಳನ್ನು ನಿರ್ಮಿಸುವುದಾಗಿ ಘೋಷಿಸಿದೆ.

ಧೋನಿ ಸಿನಿಮಾ ಸಂಸಸ್ಥೆಯ ಮೊದಲ ಆದ್ಯತೆ ತಮಿಳು ಸಿನಿಮಾ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿರುವ ಧೋನಿಗೆ ತಮಿಳುನಾಡು ಹಾಗೂ ಅಲ್ಲಿನ ಜನತೆ ಮೇಲೆ ಅಪಾರ ಪ್ರೀತಿ ಗೌರವ. ಅಲ್ಲದೇ ಅಲ್ಲಿ ಧೋನಿಗೆ ಅಪಾರ ಅಭಿಮಾನಿಗಳಿದ್ದಾರೆ. ಹೀಗಾಗಿ ಕಾಲಿವುಡ್ ಮೂಲಕವೇ ಧೋನಿ ಸಿನಿಮಾ ಕೆಲಸ ಆರಂಭಿಸಲಿದ್ದಾರೆ. ಇದಲ್ಲದೆ ಈ ಸಂಸ್ಥೆ ತೆಲುಗು ಹಾಗೂ ಮಲಯಾಳಂ ಚಿತ್ರಗಳನ್ನೂ ಕೂಡ ನಿರ್ಮಿಸಲಿದೆ. ಅಂದರೆ ಆರಂಭದಲ್ಲಿ ದಕ್ಷಿಣ ಭಾರತದ ಮೂರು ಭಾಷೆಗಳಲ್ಲಿ ಸಿನಿಮಾ ನಿರ್ಮಿಸಲು ಧೋನಿ ಎಂಟರ್‌ಟೈನ್‌ಮೆಂಟ್ ಕಂಪೆನಿ ಮುಂದಾಗಿದೆ.

ಧೋನಿ ಎಂಟರ್‌ಟೈನ್‌ಮೆಂಟ್ ಪ್ರೊಡಕ್ಷನ್ ಹೌಸ್ ಎಂಎಸ್​ ಧೋನಿ ಮತ್ತು ಅವರ ಪತ್ನಿ ಸಾಕ್ಷಿ ಇಬ್ಬರ ಒಡೆತನದಲ್ಲಿದೆ. ಈ ಪ್ರೊಡಕ್ಷನ್ ಹೌಸ್ ಬೇರೆ ನಿರ್ಮಾಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ರೋರ್ ಆಫ್ ದಿ ಲಯನ್, ಬ್ಲೇಜ್ ಟು ಗ್ಲೋರಿ ಮತ್ತು ದಿ ಹಿಡನ್ ಹಿಂದೂ ವೆಬ್ ಸಿರೀಸ್​ಗಳನ್ನು ನಿರ್ಮಿಸಿದೆ. ಚಿಕ್ಕ ಬಜೆಟ್ ಸಿನಿಮಾಗಳನ್ನು ಮಾಡುತ್ತಿರುವ ಧೋನಿ ಎಂಟರ್ ಟೈನ್ ಮೆಂಟ್ ಇದೀಗ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಯಾಗಿ ದೊಡ್ಡ ಸಿನಿಮಾಗಳನ್ನು ಮಾಡಲು ಮುಂದಾಗಿದೆ.

ಕ್ರಿಕೆಟ್‌ಗೆ ಗುಡ್ ಬೈ ಹೇಳಿದ ಬಳಿಕ ಧೋನಿ ಕಡಕ್​ನಾತ್ ಕೋಳಿ ಸಾಕಾಣಿಯ ಮೂಲಕ ಗಮನ ಸೆಳೆದಿದ್ದರು. ಇದೀಗ ಬಣ್ಣದ ಲೋಕದತ್ತ ಹೆಜ್ಜೆ ಹಾಕಿದ್ದಾರೆ.  ಸದ್ಯ  ಐಪಿಎಲ್​ನಲ್ಲಿ ಮಾತ್ರ ಸಕ್ರೀಯರಾಗಿರುವ ಧೋನಿ ಕ್ರಿಕೆಟ್ ಜೊತೆಗೆ ಇತರೆ ಉದ್ಯಮ ಕ್ಷೇತ್ರದಲ್ಲೂ ತೊಡಗಿಸಿಕೊಳ್ಳುವ ಮೂಲಕ ಅನೇಕ ಯುವರಿಗೆ ಸ್ಪೂರ್ತಿಯಾಗಿದ್ದಾರೆ.

andolana

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

6 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

7 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

7 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

8 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

8 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

9 hours ago