ಚಿತ್ರ ಮಂಜರಿ

ತಮಿಳು, ತೆಲುಗು, ಮಲಿಯಾಳಂ ಸಿನಿಮಾಗಳಿಗೆ ನಿರ್ಮಾಪಕನಾಗಲು ಮುಂದಾಗಿರುವ ದೋನಿ

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಧೋನಿ ಈಗ ಸಿನಿಮಾರಂಗದ ಕಡೆ ಮುಖ ಮಾಡಿದ್ದಾರೆ. ಧೋನಿ ನಿರ್ಮಾಪಕರಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಕ್ರಿಕೆಟ್‌ನಿಂದ ನಿವೃತ್ತಿಯಾದ ಬಳಿಕ ಧೋನಿ ಕೊಂಚ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ಸೆಕೆಂಡ್ ಇನಿಂಗ್ಸ್ ಪ್ರಾರಂಭಿಸಿದ್ದಾರೆ.  ಧೋನಿ ಎಂಟರ್‌ಟೈನ್‌ಮೆಂಟ್ ಬ್ಯಾನರ್  ಶುರು ಮಾಡುವ ಮೂಲಕ ಇನ್ಮಂದೆ ನಿರ್ಮಾಪಕರಾಗಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಎಂದರೆ ಧೋನಿ ಎಂಟರ್‌ಟೈನ್‌ಮೆಂಟ್ ಕಂಪೆನಿಯು ಆರಂಭದಲ್ಲಿ ಕೇವಲ ಮೂರು ಭಾಷೆಗಳಲ್ಲಿ ಮಾತ್ರ ಚಿತ್ರಗಳನ್ನು ನಿರ್ಮಿಸುವುದಾಗಿ ಘೋಷಿಸಿದೆ.

ಧೋನಿ ಸಿನಿಮಾ ಸಂಸಸ್ಥೆಯ ಮೊದಲ ಆದ್ಯತೆ ತಮಿಳು ಸಿನಿಮಾ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿರುವ ಧೋನಿಗೆ ತಮಿಳುನಾಡು ಹಾಗೂ ಅಲ್ಲಿನ ಜನತೆ ಮೇಲೆ ಅಪಾರ ಪ್ರೀತಿ ಗೌರವ. ಅಲ್ಲದೇ ಅಲ್ಲಿ ಧೋನಿಗೆ ಅಪಾರ ಅಭಿಮಾನಿಗಳಿದ್ದಾರೆ. ಹೀಗಾಗಿ ಕಾಲಿವುಡ್ ಮೂಲಕವೇ ಧೋನಿ ಸಿನಿಮಾ ಕೆಲಸ ಆರಂಭಿಸಲಿದ್ದಾರೆ. ಇದಲ್ಲದೆ ಈ ಸಂಸ್ಥೆ ತೆಲುಗು ಹಾಗೂ ಮಲಯಾಳಂ ಚಿತ್ರಗಳನ್ನೂ ಕೂಡ ನಿರ್ಮಿಸಲಿದೆ. ಅಂದರೆ ಆರಂಭದಲ್ಲಿ ದಕ್ಷಿಣ ಭಾರತದ ಮೂರು ಭಾಷೆಗಳಲ್ಲಿ ಸಿನಿಮಾ ನಿರ್ಮಿಸಲು ಧೋನಿ ಎಂಟರ್‌ಟೈನ್‌ಮೆಂಟ್ ಕಂಪೆನಿ ಮುಂದಾಗಿದೆ.

ಧೋನಿ ಎಂಟರ್‌ಟೈನ್‌ಮೆಂಟ್ ಪ್ರೊಡಕ್ಷನ್ ಹೌಸ್ ಎಂಎಸ್​ ಧೋನಿ ಮತ್ತು ಅವರ ಪತ್ನಿ ಸಾಕ್ಷಿ ಇಬ್ಬರ ಒಡೆತನದಲ್ಲಿದೆ. ಈ ಪ್ರೊಡಕ್ಷನ್ ಹೌಸ್ ಬೇರೆ ನಿರ್ಮಾಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ರೋರ್ ಆಫ್ ದಿ ಲಯನ್, ಬ್ಲೇಜ್ ಟು ಗ್ಲೋರಿ ಮತ್ತು ದಿ ಹಿಡನ್ ಹಿಂದೂ ವೆಬ್ ಸಿರೀಸ್​ಗಳನ್ನು ನಿರ್ಮಿಸಿದೆ. ಚಿಕ್ಕ ಬಜೆಟ್ ಸಿನಿಮಾಗಳನ್ನು ಮಾಡುತ್ತಿರುವ ಧೋನಿ ಎಂಟರ್ ಟೈನ್ ಮೆಂಟ್ ಇದೀಗ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಯಾಗಿ ದೊಡ್ಡ ಸಿನಿಮಾಗಳನ್ನು ಮಾಡಲು ಮುಂದಾಗಿದೆ.

ಕ್ರಿಕೆಟ್‌ಗೆ ಗುಡ್ ಬೈ ಹೇಳಿದ ಬಳಿಕ ಧೋನಿ ಕಡಕ್​ನಾತ್ ಕೋಳಿ ಸಾಕಾಣಿಯ ಮೂಲಕ ಗಮನ ಸೆಳೆದಿದ್ದರು. ಇದೀಗ ಬಣ್ಣದ ಲೋಕದತ್ತ ಹೆಜ್ಜೆ ಹಾಕಿದ್ದಾರೆ.  ಸದ್ಯ  ಐಪಿಎಲ್​ನಲ್ಲಿ ಮಾತ್ರ ಸಕ್ರೀಯರಾಗಿರುವ ಧೋನಿ ಕ್ರಿಕೆಟ್ ಜೊತೆಗೆ ಇತರೆ ಉದ್ಯಮ ಕ್ಷೇತ್ರದಲ್ಲೂ ತೊಡಗಿಸಿಕೊಳ್ಳುವ ಮೂಲಕ ಅನೇಕ ಯುವರಿಗೆ ಸ್ಪೂರ್ತಿಯಾಗಿದ್ದಾರೆ.

andolana

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

10 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

11 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

13 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

16 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

18 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

23 hours ago