ಚಿತ್ರ ಮಂಜರಿ

ತಮಿಳು, ತೆಲುಗು, ಮಲಿಯಾಳಂ ಸಿನಿಮಾಗಳಿಗೆ ನಿರ್ಮಾಪಕನಾಗಲು ಮುಂದಾಗಿರುವ ದೋನಿ

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಧೋನಿ ಈಗ ಸಿನಿಮಾರಂಗದ ಕಡೆ ಮುಖ ಮಾಡಿದ್ದಾರೆ. ಧೋನಿ ನಿರ್ಮಾಪಕರಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಕ್ರಿಕೆಟ್‌ನಿಂದ ನಿವೃತ್ತಿಯಾದ ಬಳಿಕ ಧೋನಿ ಕೊಂಚ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ಸೆಕೆಂಡ್ ಇನಿಂಗ್ಸ್ ಪ್ರಾರಂಭಿಸಿದ್ದಾರೆ.  ಧೋನಿ ಎಂಟರ್‌ಟೈನ್‌ಮೆಂಟ್ ಬ್ಯಾನರ್  ಶುರು ಮಾಡುವ ಮೂಲಕ ಇನ್ಮಂದೆ ನಿರ್ಮಾಪಕರಾಗಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಎಂದರೆ ಧೋನಿ ಎಂಟರ್‌ಟೈನ್‌ಮೆಂಟ್ ಕಂಪೆನಿಯು ಆರಂಭದಲ್ಲಿ ಕೇವಲ ಮೂರು ಭಾಷೆಗಳಲ್ಲಿ ಮಾತ್ರ ಚಿತ್ರಗಳನ್ನು ನಿರ್ಮಿಸುವುದಾಗಿ ಘೋಷಿಸಿದೆ.

ಧೋನಿ ಸಿನಿಮಾ ಸಂಸಸ್ಥೆಯ ಮೊದಲ ಆದ್ಯತೆ ತಮಿಳು ಸಿನಿಮಾ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿರುವ ಧೋನಿಗೆ ತಮಿಳುನಾಡು ಹಾಗೂ ಅಲ್ಲಿನ ಜನತೆ ಮೇಲೆ ಅಪಾರ ಪ್ರೀತಿ ಗೌರವ. ಅಲ್ಲದೇ ಅಲ್ಲಿ ಧೋನಿಗೆ ಅಪಾರ ಅಭಿಮಾನಿಗಳಿದ್ದಾರೆ. ಹೀಗಾಗಿ ಕಾಲಿವುಡ್ ಮೂಲಕವೇ ಧೋನಿ ಸಿನಿಮಾ ಕೆಲಸ ಆರಂಭಿಸಲಿದ್ದಾರೆ. ಇದಲ್ಲದೆ ಈ ಸಂಸ್ಥೆ ತೆಲುಗು ಹಾಗೂ ಮಲಯಾಳಂ ಚಿತ್ರಗಳನ್ನೂ ಕೂಡ ನಿರ್ಮಿಸಲಿದೆ. ಅಂದರೆ ಆರಂಭದಲ್ಲಿ ದಕ್ಷಿಣ ಭಾರತದ ಮೂರು ಭಾಷೆಗಳಲ್ಲಿ ಸಿನಿಮಾ ನಿರ್ಮಿಸಲು ಧೋನಿ ಎಂಟರ್‌ಟೈನ್‌ಮೆಂಟ್ ಕಂಪೆನಿ ಮುಂದಾಗಿದೆ.

ಧೋನಿ ಎಂಟರ್‌ಟೈನ್‌ಮೆಂಟ್ ಪ್ರೊಡಕ್ಷನ್ ಹೌಸ್ ಎಂಎಸ್​ ಧೋನಿ ಮತ್ತು ಅವರ ಪತ್ನಿ ಸಾಕ್ಷಿ ಇಬ್ಬರ ಒಡೆತನದಲ್ಲಿದೆ. ಈ ಪ್ರೊಡಕ್ಷನ್ ಹೌಸ್ ಬೇರೆ ನಿರ್ಮಾಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ರೋರ್ ಆಫ್ ದಿ ಲಯನ್, ಬ್ಲೇಜ್ ಟು ಗ್ಲೋರಿ ಮತ್ತು ದಿ ಹಿಡನ್ ಹಿಂದೂ ವೆಬ್ ಸಿರೀಸ್​ಗಳನ್ನು ನಿರ್ಮಿಸಿದೆ. ಚಿಕ್ಕ ಬಜೆಟ್ ಸಿನಿಮಾಗಳನ್ನು ಮಾಡುತ್ತಿರುವ ಧೋನಿ ಎಂಟರ್ ಟೈನ್ ಮೆಂಟ್ ಇದೀಗ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಯಾಗಿ ದೊಡ್ಡ ಸಿನಿಮಾಗಳನ್ನು ಮಾಡಲು ಮುಂದಾಗಿದೆ.

ಕ್ರಿಕೆಟ್‌ಗೆ ಗುಡ್ ಬೈ ಹೇಳಿದ ಬಳಿಕ ಧೋನಿ ಕಡಕ್​ನಾತ್ ಕೋಳಿ ಸಾಕಾಣಿಯ ಮೂಲಕ ಗಮನ ಸೆಳೆದಿದ್ದರು. ಇದೀಗ ಬಣ್ಣದ ಲೋಕದತ್ತ ಹೆಜ್ಜೆ ಹಾಕಿದ್ದಾರೆ.  ಸದ್ಯ  ಐಪಿಎಲ್​ನಲ್ಲಿ ಮಾತ್ರ ಸಕ್ರೀಯರಾಗಿರುವ ಧೋನಿ ಕ್ರಿಕೆಟ್ ಜೊತೆಗೆ ಇತರೆ ಉದ್ಯಮ ಕ್ಷೇತ್ರದಲ್ಲೂ ತೊಡಗಿಸಿಕೊಳ್ಳುವ ಮೂಲಕ ಅನೇಕ ಯುವರಿಗೆ ಸ್ಪೂರ್ತಿಯಾಗಿದ್ದಾರೆ.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

11 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

13 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago