Mysore
31
clear sky

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಫೋಟೋಗಳಿಂದ ಅಷ್ಟೊಂದು ಸಮಸ್ಯೆ ಉಂಟಾಗುತ್ತದೆ ಎಂಬುದು ಗೊತ್ತಿರಲಿಲ್ಲ : ರಣವೀರ್ ಸಿಂಗ್

ರಣವೀರ್ ಸಿಂಗ್ ಅವರ ಸಿನಿಮಾಗಳು ಇತ್ತೀಚೆಗೆ ಹೇಳಿಕೊಳ್ಳುವಂತಹ ಯಶಸ್ಸು ಪಡೆದಿಲ್ಲ. ಆದರೆ, ಅವರು ವೈಯಕ್ತಿಕ ವಿಚಾರಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಅಪ್​ಲೋಡ್ ಮಾಡಿದ್ದ ಬೆತ್ತಲೆ ಫೋಟೋ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ರಣವೀರ್ ಸಿಂಗ್ ಅವರು ಮುಂಬೈ ಪೊಲೀಸರ ಎದುರು ಹೇಳಿಕೆ ನೀಡಿದ್ದಾರೆ. ಆ ಫೋಟೋಗಳಿಂದ ಅಷ್ಟೊಂದು ಸಮಸ್ಯೆ ಉಂಟಾಗುತ್ತದೆ ಎಂಬುದು ಗೊತ್ತಿರಲಿಲ್ಲ ಎಂಬ ಮಾತನ್ನು ರಣವೀರ್ ಸಿಂಗ್ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಪ್ರತಿಷ್ಠಿತ ಪೇಪರ್ ಮ್ಯಾಗಜಿನ್​ಗಾಗಿ ರಣವೀರ್ ಸಿಂಗ್ ಬೆತ್ತಲೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದರು. ಇದು ಸಾಕಷ್ಟು ಸೆನ್ಸೇಷನ್ ಕ್ರಿಯೇಟ್ ಮಾಡಿತ್ತು. ಒಂದು ವರ್ಗದ ಜನರು ರಣವೀರ್ ಸಿಂಗ್ ಅವರನ್ನು ಹೊಗಳಿದರೆ ಮತ್ತೊಂದು ವರ್ಗದವರು ರಣವೀರ್ ಸಿಂಗ್ ಅವರನ್ನು ತೆಗಳಿದ್ದರು. ಈ ಸಂಬಂಧ ಕೇಸ್ ಕೂಡ ದಾಖಲಾಗಿತ್ತು. ಆ ಬಳಿಕ ರಣವೀರ್ ಸಿಂಗ್ ಅವರಿಗೆ ನೋಟಿಸ್ ಜಾರಿ ಮಾಡಲಾಯಿತು.

ಆಗಸ್ಟ್​ 22ರಂದು ರಣವೀರ್ ಸಿಂಗ್ ಅವರು ವಿಚಾರಣೆಗೆ ಹಾಜರಿ ಹಾಕಬೇಕಿತ್ತು. ಆದರೆ, ಬೇರೆಬೇರೆ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇರುವುದರಿಂದ 10 ದಿನಗಳ ಹೆಚ್ಚಿನ ಕಾಲಾವಕಾಶ ಕೇಳಿದ್ದರು. ಸೋಮವಾರ (ಆಗಸ್ಟ್ 29) ರಣವೀರ್ ಸಿಂಗ್ ಅವರು ವಿಚಾರಣೆ ಎದುರಿಸಿದ್ದಾರೆ.

ಮುಂಜಾನೆ 7 ಗಂಟೆಗೆ ರಣವೀರ್ ಪೊಲೀಸ್ ಠಾಣೆಗೆ ತೆರಳಿದ್ದಾರೆ. 2 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ‘ನಾನು ವಿವಾದಾತ್ಮಕ ಫೋಟೋಗಳನ್ನು ಅಪ್​ಲೋಡ್ ಮಾಡಿಲ್ಲ. ಆ ಫೋಟೋಗಳು ಆ ರೀತಿಯ ಸಮಸ್ಯೆ ತರುತ್ತದೆ ಎಂದು ನಾನು ಯೋಚಿಸಿರಲಿಲ್ಲ’ ಎಂದು ರಣವೀರ್ ಸಿಂಗ್ ಅವರು ಪೊಲೀಸರ ಎದುರು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ರಣವೀರ್​ಗೆ  ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

ರಣವೀರ್ ಸಿಂಗ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ರಣವೀರ್ ಸಿಂಗ್ ‘ಸರ್ಕಸ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪೂಜಾ ಹೆಗ್ಡೆ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಈ ಚಿತ್ರಕ್ಕೆ ನಾಯಕಿಯರು. ಕರಣ್ ಜೋಹರ್ ನಿರ್ದೇಶನದ ‘ರಾಕಿ ಔರ್​ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲೂ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಆಲಿಯಾ ಭಟ್ ನಾಯಕಿ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ