ಚಿತ್ರ ಮಂಜರಿ

ಫೋಟೋಗಳಿಂದ ಅಷ್ಟೊಂದು ಸಮಸ್ಯೆ ಉಂಟಾಗುತ್ತದೆ ಎಂಬುದು ಗೊತ್ತಿರಲಿಲ್ಲ : ರಣವೀರ್ ಸಿಂಗ್

ರಣವೀರ್ ಸಿಂಗ್ ಅವರ ಸಿನಿಮಾಗಳು ಇತ್ತೀಚೆಗೆ ಹೇಳಿಕೊಳ್ಳುವಂತಹ ಯಶಸ್ಸು ಪಡೆದಿಲ್ಲ. ಆದರೆ, ಅವರು ವೈಯಕ್ತಿಕ ವಿಚಾರಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಅಪ್​ಲೋಡ್ ಮಾಡಿದ್ದ ಬೆತ್ತಲೆ ಫೋಟೋ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ರಣವೀರ್ ಸಿಂಗ್ ಅವರು ಮುಂಬೈ ಪೊಲೀಸರ ಎದುರು ಹೇಳಿಕೆ ನೀಡಿದ್ದಾರೆ. ಆ ಫೋಟೋಗಳಿಂದ ಅಷ್ಟೊಂದು ಸಮಸ್ಯೆ ಉಂಟಾಗುತ್ತದೆ ಎಂಬುದು ಗೊತ್ತಿರಲಿಲ್ಲ ಎಂಬ ಮಾತನ್ನು ರಣವೀರ್ ಸಿಂಗ್ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಪ್ರತಿಷ್ಠಿತ ಪೇಪರ್ ಮ್ಯಾಗಜಿನ್​ಗಾಗಿ ರಣವೀರ್ ಸಿಂಗ್ ಬೆತ್ತಲೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದರು. ಇದು ಸಾಕಷ್ಟು ಸೆನ್ಸೇಷನ್ ಕ್ರಿಯೇಟ್ ಮಾಡಿತ್ತು. ಒಂದು ವರ್ಗದ ಜನರು ರಣವೀರ್ ಸಿಂಗ್ ಅವರನ್ನು ಹೊಗಳಿದರೆ ಮತ್ತೊಂದು ವರ್ಗದವರು ರಣವೀರ್ ಸಿಂಗ್ ಅವರನ್ನು ತೆಗಳಿದ್ದರು. ಈ ಸಂಬಂಧ ಕೇಸ್ ಕೂಡ ದಾಖಲಾಗಿತ್ತು. ಆ ಬಳಿಕ ರಣವೀರ್ ಸಿಂಗ್ ಅವರಿಗೆ ನೋಟಿಸ್ ಜಾರಿ ಮಾಡಲಾಯಿತು.

ಆಗಸ್ಟ್​ 22ರಂದು ರಣವೀರ್ ಸಿಂಗ್ ಅವರು ವಿಚಾರಣೆಗೆ ಹಾಜರಿ ಹಾಕಬೇಕಿತ್ತು. ಆದರೆ, ಬೇರೆಬೇರೆ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇರುವುದರಿಂದ 10 ದಿನಗಳ ಹೆಚ್ಚಿನ ಕಾಲಾವಕಾಶ ಕೇಳಿದ್ದರು. ಸೋಮವಾರ (ಆಗಸ್ಟ್ 29) ರಣವೀರ್ ಸಿಂಗ್ ಅವರು ವಿಚಾರಣೆ ಎದುರಿಸಿದ್ದಾರೆ.

ಮುಂಜಾನೆ 7 ಗಂಟೆಗೆ ರಣವೀರ್ ಪೊಲೀಸ್ ಠಾಣೆಗೆ ತೆರಳಿದ್ದಾರೆ. 2 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ‘ನಾನು ವಿವಾದಾತ್ಮಕ ಫೋಟೋಗಳನ್ನು ಅಪ್​ಲೋಡ್ ಮಾಡಿಲ್ಲ. ಆ ಫೋಟೋಗಳು ಆ ರೀತಿಯ ಸಮಸ್ಯೆ ತರುತ್ತದೆ ಎಂದು ನಾನು ಯೋಚಿಸಿರಲಿಲ್ಲ’ ಎಂದು ರಣವೀರ್ ಸಿಂಗ್ ಅವರು ಪೊಲೀಸರ ಎದುರು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ರಣವೀರ್​ಗೆ  ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

ರಣವೀರ್ ಸಿಂಗ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ರಣವೀರ್ ಸಿಂಗ್ ‘ಸರ್ಕಸ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪೂಜಾ ಹೆಗ್ಡೆ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಈ ಚಿತ್ರಕ್ಕೆ ನಾಯಕಿಯರು. ಕರಣ್ ಜೋಹರ್ ನಿರ್ದೇಶನದ ‘ರಾಕಿ ಔರ್​ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲೂ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಆಲಿಯಾ ಭಟ್ ನಾಯಕಿ.

andolana

Recent Posts

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

1 hour ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

2 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

3 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

4 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

5 hours ago

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

5 hours ago