ಮಂಸೋರೆ ಕಳೆದ ವರ್ಷ ‘ದೂರ ತೀರ ಯಾನ’ ಎಂಬ ಚಿತ್ರವನ್ನು ಪ್ರಾರಂಭಿಸಿದ್ದು ನೆನಪಿರಬಹುದು. ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಜುಲೈ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ. ಮಂಸೋರೆ ಚಿತ್ರಗಳೆಂದರೆ ಏನಾದರೂ ಸಾಮಾಜಿಕ ಸಮಸ್ಯೆ, ಕಾಳಜಿ ಇರಬೇಕು ಎನ್ನುವಷ್ಟರ ಮಟ್ಟಿಗೆ ಆ ತರಹದ ಚಿತ್ರಗಳನ್ನೇ ಮಾಡುತ್ತಿದ್ದರು ಮಂಸೋರೆ. ಅದಕ್ಕೆ ಉದಾಹರಣೆಯಾಗಿ ‘ಆಕ್ಟ್ ೧೯೭೮’, ‘ಹರಿವು’, ‘೧೯.೨೦.೨೧’ ಮುಂತಾದ ಚಿತ್ರಗಳು ಸಿಗುತ್ತವೆ. ಅದೇ ತರಹದ ಚಿತ್ರಗಳನ್ನು ಮಾಡುತ್ತಿದ್ದರೆ, ಬ್ರಾಂಡ್ಆಗಿ ಬಿಡಬಹುದು ಎಂಬ ಕಾರಣಕ್ಕೆ ಅವರು ಈ ಬಾರಿ ಪ್ರೇಮ ಕಥೆಯೊಂದನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ತೀರಾ ಗಂಭೀರವಲ್ಲದ ಮತ್ತು ಲವಲವಿಕೆಯಿಂದ ಕೂಡಿರುವ ಚಿತ್ರ ಇದು ಎನ್ನುವ ಮಂಸೋರೆ, ‘ಇದೊಂದು ಪ್ರೀತಿಯ ಹುಡುಕಾಟದ ಕಥೆ. ಈಗ ಪ್ರೀತಿಯ ವ್ಯಾಖ್ಯಾನ ಬದಲಾಗಿದೆ. ಅದನ್ನು ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ಈ ಚಿತ್ರಕ್ಕಾಗಿ ಒಂದು ವರ್ಷ ರೀಸರ್ಚ್ ಮಾಡಿದ್ದೇನೆ. ಸಾಮಾಜಿಕ ಮತ್ತು ರಾಜಕೀಯ ವಿಷಯಗಳನ್ನು ಅವಲೋಕಿಸಿದ್ದೇನೆ. ಪ್ರೇಕ್ಷಕರು ಯಾವ ರೀತಿಯ ಕಥೆ ಮತ್ತು ಚಿತ್ರಗಳನ್ನು ಇಷ್ಟ ಪಡುತ್ತಾರೆ ಎಂದು ಮಾಹಿತಿ ಕಲೆ ಹಾಕಿ, ಅದೆಲ್ಲವನ್ನೂ ಇಟ್ಟುಕೊಂಡು ಕಥೆ ಮಾಡಿದ್ದೇನೆ. ಇಲ್ಲೂ ಕಥೆ ಆಳವಾಗಿದೆ. ಅದನ್ನು ಹೇಳುವ ಶೈಲಿಯನ್ನು ಮಾತ್ರ ಬದಲಾಯಿಸುತ್ತಿದ್ದೇನೆ’ ಎನ್ನುತ್ತಾರೆ.
ಇದೊಂದು ಪ್ರಯಾಣದ ಚಿತ್ರವಂತೆ. ಬೆಂಗಳೂರಿನಿಂದ ಶುರುವಾಗಿ ಗೋವಾದಲ್ಲಿ ಮುಗಿಯುತ್ತದೆ. ಮೊದಲ ೧೦ ನಿಮಿಷ ಬೆಂಗಳೂರಿನಲ್ಲಿ ನಡೆಯುತ್ತದೆ. ನಂತರ ಗೋವಾ ವರೆಗೂ ಪ್ರಯಾಣ ಮುಂದುವರಿಯುತ್ತದೆ. ಇಲ್ಲಿ ನಾಯಕ ಪಿಟೀಲು ನುಡಿಸಿದರೆ, ನಾಯಕಿ ಕೊಳಲು ನುಡಿಸುತ್ತಾಳೆ. ಅದು ಅವರಿಬ್ಬರ ಪ್ರವೃತ್ತಿ. ವೃತ್ತಿಯಲ್ಲಿ ಅವರಿಬ್ಬರೂ ಸಾಫ್ಟ್ ವೇರ್ ಇಂಜಿನಿಯರ್ಗಳು. ಅವರಿಬ್ಬರ ಪ್ರೀತಿಯ ಹುಡುಕಾಟವೇ ಈ ಚಿತ್ರದ ಕಥೆಯಂತೆ. ‘ದೂರ ತೀರಯಾನ’ ಚಿತ್ರದಲ್ಲಿ ವಿಜಯ್ ಕೃಷ್ಣ ಮತ್ತು ಪ್ರಿಯಾಂಕಾ ಕುಮಾರ್ ನಟಿಸುತ್ತಿದ್ದು, ಈ ಚಿತ್ರವನ್ನು ಡಿ ಕ್ರಿಯೇಷನ್ಸ್ ಬ್ಯಾನರ್ನಡಿ ದೇವರಾಜ್ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಶೇಖರ್ ಚಂದ್ರು ಛಾಯಾಗ್ರಹಣ ಮತ್ತು ಬಕ್ಕೇಶ್ ಸಂಗೀತ ಸಂಯೋಜನೆ ಇದೆ
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…