ಚಿತ್ರ ಮಂಜರಿ

ಕಾಂತಾರ ಸಿನಿಮಾದ ಸಾಧನೆ ಗೆ ಶರಣು : ಯೋಗರಾಜ್‌ ಭಟ್‌

ಬೆಂಗಳೂರು ; ಕೆಜಿಎಫ್’ ನಿರ್ಮಾಣ ಮಾಡಿದ್ದ ಹೊಂಬಾಳೆ ಫಿಲ್ಮ್ಸ್ ಈಗ ‘ಕಾಂತಾರ’ ಮೂಲಕ ಮತ್ತೊಂದು ದಾಖಲೆ ಬರೆಯುತ್ತಿದೆ. ಈಗಾಗಲೇ ‘ಕಾಂತಾರ’ ಸಿನಿಮಾವನ್ನು ಕನ್ನಡದ ಜೊತೆಗೆ ಹಿಂದಿ, ತೆಲುಗು, ತಮಿಳು ಭಾಷೆಗೂ ಡಬ್ ಮಾಡಿ ರಿಲೀಸ್ ಮಾಡಲಾಗಿದೆ. ಇದೀಗ ಕನ್ನಡದ ಜನಪ್ರಿಯ ನಿರ್ದೇಶಕ ಯೋಗರಾಜ್ ಭಟ್ ಚಿತ್ರವನ್ನು ನೋಡಿ ಹೊಗಳಿದ್ದಾರೆ.

ನಿರ್ದೇಶಕ ರಿಷಬ್ ಶೆಟ್ಟಿ ‘ಕಾಂತಾರ’ ಮೂಲಕ ಹೊಸದೊಂದು ದಾಖಲೆ ಬರೆಯುತ್ತಿದ್ದಾರೆ. ‘ಕಾಂತಾರ’ ಸಿನಿಮಾದಿಂದ ನಟನಾಗಿ, ನಿರ್ದೇಶಕನಾಗಿ ದೊಡ್ಡ ಬ್ರೇಕ್ ಪಡೆದುಕೊಂಡಿದ್ದಾರೆ. ಬಾಕ್ಸ್ ಆಫೀಸ್‌ ಕಲೆಕ್ಷನ್‌ ಅಂತೂ ಸದ್ಯಕ್ಕೆ ತಗ್ಗುವ ಲಕ್ಷಣಗಳಿಲ್ಲ. ದಿನದಿಂದ ಕಲೆಕ್ಷನ್‌ನಲ್ಲಿ ಏರಿಕೆಯೇ ಕಂಡುಬರುತ್ತಿದೆ. ಈ ನಡುವೆ ಸಿನಿಮಾಗಳನ್ನು ಮೆಚ್ಚಿಕೊಳ್ಳುತ್ತಿರುವ ಸೆಲೆಬ್ರಿಟಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಕನ್ನಡದ ಜನಪ್ರಿಯ ನಿರ್ದೇಶಕ ಯೋಗರಾಜ್ ಭಟ್ ಅವರು ಕೂಡ ‘ಕಾಂತಾರ’ಗೆ ಮನತುಂಬಿ ಹಾರೈಸಿದ್ದಾರೆ. ‘ನಾಡು ತಿರುಗಿ ನೋಡುವಂತೆ ಮಾಡಿದ ‘ಕಾಂತಾರ’ ಸಾಧನೆಗೆ ಶರಣು ಶರಣಾರ್ಥಿ’ ಎಂದು ಯೋಗರಾಜ್ ಭಟ್ ಹೇಳಿದ್ದಾರೆ

andolana

Recent Posts

ಕೇರಳಂ | ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ

ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…

29 mins ago

ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು : ಸಿಎಂ ಸಿದ್ದರಾಮಯ್ಯ

ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…

33 mins ago

ಚೀನಾವನ್ನು ಹಾಡಿ ಹೊಗಳಿದ ಟ್ರಂಪ್‌ : ಜಿನ್‌ಪಿಂಗ್‌ ಪ್ರತಿಕ್ರಿಯೆ ಹೇಗಿತ್ತು?

ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.…

2 hours ago

ದೆಹಲಿ | ಸ್ಲೀಪರ್‌ ಬಸ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ : ಸ್ಲೀಪರ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…

3 hours ago

ಮಂಡಿ ಮಾರುಕಟ್ಟೆ : ಹೊರಗೆ ಥಳುಕು-ಒಳಗೆ ಹುಳುಕು

ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

7 hours ago