ಬೆಂಗಳೂರು : ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರಿಗೆ ರಾಜಕೀಯಕ್ಕೆ ಬರುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಹ್ವಾನ ನೀಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಡೆದ ಆರ್ಯ ಈಡಿಗ ಸಮಾವೇಶದಲ್ಲಿ ಪಕ್ಕದಲ್ಲಿಯೇ ಕುಳಿತಿದ್ದ ನಟ ಶಿವರಾಜ್ಕುಮಾರ್ ಅವರೊಂದಿಗೆ ಚರ್ಚಿಸಿರುವ ಡಿ.ಕೆ ಶಿವಕುಮಾರ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಾಗುವಂತೆ ಸಲಹೆ ನೀಡಿದ್ದಾರೆ.
ಆರ್ಯ ಈಡಿಗ ಸಮಾವೇಶದಲ್ಲಿ ಭಾಷಣ ಮಾಡುವ ವೇಳೆ ಈ ವಿಷಯವನ್ನು ಪ್ರಸ್ತಾಪಿಸಿರುವ ಡಿ.ಕೆ ಶಿವಕುಮಾರ್ ಅವರು, ಮಿತ್ರ ಶಿವರಾಜ್ ಕುಮಾರ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಾಗುವಂತೆ ಸಲಹೆ ನೀಡಿದ್ದೇನೆ. ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೂ ಅವರಿಗೆ ಟಿಕೆಟ್ ನೀಡುತ್ತೇನೆ. ಆದರೆ ಈಗಾಗಲೇ ಐದಾರು ಸಿನಿಮಾಗಳನ್ನು ಒಪ್ಪಿಕೊಂಡಿದ್ದೇನೆ. ಅವುಗಳ ಚಿತ್ರೀಕರಣ ಮುಗಿಯಬೇಕು ಎನ್ನುತ್ತಿದ್ದಾರೆ. ಸಿನಿಮಾ ಚಿತ್ರೀಕರಣವನ್ನು ಯಾವಾಗ ಬೇಕಾದರೂ ಮುಗಿಸಬಹುದು ಆದರೆ ಲೋಕಸಭೆ ಚುನಾವಣೆ ವರ್ಷಕ್ಕೊಮ್ಮೆ ಮಾತ್ರ ಬರುತ್ತದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಹೇಳಿದ್ದೇನೆ ಎಂದರು.
ಇನ್ನು ಆರ್ಯ ಈಡಿಗ ಸಮುದಾಯವನ್ನು ಕುರಿತು ಮಾತನಾಡಿದ ಡಿಕೆಶಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಆರ್ಯ ಈಡಿಗ ಸಮುದಾಯದ ಕೊಡುಗೆ ಬಹಳಾ ಇದೆ. ನಾವು ನಿಮ್ಮ ಉಪಕಾರವನ್ನು ಎಂದಿಗೂ ಮರೆಯುವುದಿಲ್ಲ. ನಿಮ್ಮ ಎಲ್ಲಾ ಬೇಡಿಕೆಗಳಿಗೂ ಸಕಾರಾತ್ಮಕವಾಗಿ ಸ್ಪಂದಿಸುತ್ತೇವೆ. ಆರ್ಯ ಈಡಿಗ ಅಭಿವೃದ್ಧಿ ನಿಗಮಕ್ಕೆ ಅನುದಾನ ಸೇರಿಸದಂತೆ ಎಲ್ಲಾ ಮನವಿಗಳೂ ಕೂಡ ನಮ್ಮ ಗಮನದಲ್ಲಿವೆ. ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಯಾವುದೇ ಅನುದಾನ ಘೋಷಣೆ ಮಾಡುವಂತಿಲ್ಲ. ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಭರವಸೆ ನೀಡಿದರು.
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…
ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು…
ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…