ಚಿತ್ರ ಮಂಜರಿ

ಶಿವಣ್ಣನಿಗೆ ರಾಜಕೀಯಕ್ಕೆ ಬರುವಂತೆ ಆಹ್ವಾನ ಕೊಟ್ಟ ಡಿಕೆಶಿ

ಬೆಂಗಳೂರು : ಸೆಂಚುರಿ ಸ್ಟಾರ್‌ ಶಿವರಾಜ್‌ ಕುಮಾರ್‌ ಅವರಿಗೆ ರಾಜಕೀಯಕ್ಕೆ ಬರುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆಹ್ವಾನ ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ನಡೆದ ಆರ್ಯ ಈಡಿಗ ಸಮಾವೇಶದಲ್ಲಿ ಪಕ್ಕದಲ್ಲಿಯೇ ಕುಳಿತಿದ್ದ ನಟ ಶಿವರಾಜ್‌ಕುಮಾರ್‌ ಅವರೊಂದಿಗೆ ಚರ್ಚಿಸಿರುವ ಡಿ.ಕೆ ಶಿವಕುಮಾರ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಾಗುವಂತೆ ಸಲಹೆ ನೀಡಿದ್ದಾರೆ.

ಆರ್ಯ ಈಡಿಗ ಸಮಾವೇಶದಲ್ಲಿ ಭಾಷಣ ಮಾಡುವ ವೇಳೆ ಈ ವಿಷಯವನ್ನು ಪ್ರಸ್ತಾಪಿಸಿರುವ ಡಿ.ಕೆ ಶಿವಕುಮಾರ್‌ ಅವರು, ಮಿತ್ರ ಶಿವರಾಜ್‌ ಕುಮಾರ್‌ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಾಗುವಂತೆ ಸಲಹೆ ನೀಡಿದ್ದೇನೆ. ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೂ ಅವರಿಗೆ ಟಿಕೆಟ್‌ ನೀಡುತ್ತೇನೆ. ಆದರೆ ಈಗಾಗಲೇ ಐದಾರು ಸಿನಿಮಾಗಳನ್ನು ಒಪ್ಪಿಕೊಂಡಿದ್ದೇನೆ. ಅವುಗಳ ಚಿತ್ರೀಕರಣ ಮುಗಿಯಬೇಕು ಎನ್ನುತ್ತಿದ್ದಾರೆ. ಸಿನಿಮಾ ಚಿತ್ರೀಕರಣವನ್ನು ಯಾವಾಗ ಬೇಕಾದರೂ ಮುಗಿಸಬಹುದು ಆದರೆ ಲೋಕಸಭೆ ಚುನಾವಣೆ ವರ್ಷಕ್ಕೊಮ್ಮೆ ಮಾತ್ರ ಬರುತ್ತದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಹೇಳಿದ್ದೇನೆ ಎಂದರು.

ಇನ್ನು ಆರ್ಯ ಈಡಿಗ ಸಮುದಾಯವನ್ನು ಕುರಿತು ಮಾತನಾಡಿದ ಡಿಕೆಶಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲು ಆರ್ಯ ಈಡಿಗ ಸಮುದಾಯದ ಕೊಡುಗೆ ಬಹಳಾ ಇದೆ. ನಾವು ನಿಮ್ಮ ಉಪಕಾರವನ್ನು ಎಂದಿಗೂ ಮರೆಯುವುದಿಲ್ಲ. ನಿಮ್ಮ ಎಲ್ಲಾ ಬೇಡಿಕೆಗಳಿಗೂ ಸಕಾರಾತ್ಮಕವಾಗಿ ಸ್ಪಂದಿಸುತ್ತೇವೆ. ಆರ್ಯ ಈಡಿಗ ಅಭಿವೃದ್ಧಿ ನಿಗಮಕ್ಕೆ ಅನುದಾನ ಸೇರಿಸದಂತೆ ಎಲ್ಲಾ ಮನವಿಗಳೂ ಕೂಡ ನಮ್ಮ ಗಮನದಲ್ಲಿವೆ. ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಯಾವುದೇ ಅನುದಾನ ಘೋಷಣೆ ಮಾಡುವಂತಿಲ್ಲ. ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಭರವಸೆ ನೀಡಿದರು.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

15 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

16 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

16 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

16 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

16 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

16 hours ago