ಚಿತ್ರ ಮಂಜರಿ

ನಾಯಿ ಕಚ್ಚಿದ ಪ್ರಕರಣ: ನಟ ದರ್ಶನ್‌ಗೆ ನೋಟಿಸ್‌ ಜಾರಿ

ಬೆಂಗಳೂರು : ಮಹಿಳೆಗೆ ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಆರ್‌ಆರ್‌ ನಗರ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ನೋಟಿಸ್‌ನಲ್ಲಿ ಮೂರ ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ.

ಪ್ರಕರಣ ಸಂಬಂಧ ನಾಯಿ ಕೇರ್‌ ಟೇಕರ್‌ ಹೇಮಂತ್‌ ಅವರನ್ನು ವಿಚಾರಣೆಗೆ ಒಳಪಡಿಸಿದ ನಂತರ ನಟ ದರ್ಶನ್‌ಗೆ ನೋಟಿಸ್‌ ನೀಡಿದ್ದಾರೆ.

ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.

ದೂರುದಾರ ಅಮಿತಾ ಜಿಂದಾಲ್ ಅವರು, ಕಳೆದ ಅಕ್ಟೋಬರ್ 28 ರಂದು ಕಾರ್ಯಕ್ರಮವೊಂದಕ್ಕೆ ತೆರಳುವ ವೇಳೆ ನಟ ದರ್ಶನ್ ಅವರ ಮನೆಯ ಎದುರಿನ ಖಾಲಿ ಸ್ಥಳದಲ್ಲಿದ್ದ ತಮ್ಮ ಕಾರು ನಿಲ್ಲಿಸಿ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಕಾರು ತೆಗೆಯಲು ಬಂದಾಗ ಮೂರು ನಾಯಿಗಳ ಪೈಕಿ ಒಂದು ನಾಯಿ ಎರಗಿತ್ತು, ಎರಡನ್ನು ಕಟ್ಟಲಾಗಿತ್ತು ಎಂದು ದೂರು ನೀಡಿದ್ದರು.

andolanait

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

6 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

6 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

6 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

7 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

7 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

7 hours ago