ನಟ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿತಾ ಜಿಂದಾಲ್ ಎಂಬ ಮಹಿಳೆಗೆ ದೂರು ನೀಡಿದ್ದು ಸಾಕಷ್ಟು ಚರ್ಚೆಯಾಗಿತ್ತು. ಉದ್ದೇಶ ಪೂರ್ವಕವಾಗಿ ನಾಯಿಯನ್ನು ನನ್ನ ಮೇಲೆ ಛೂ ಬಿಡಲಾಗಿದೆ ಎಂದು ಮಹಿಳೆ ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಪ್ರಕರಣದಲ್ಲಿ ದರ್ಶನ್ ಪಾತ್ರ ಇಲ್ಲದೇ ಇರುವುದು ತನಿಖೆಯಲ್ಲಿ ಸಾಬೀತಾಗಿರುವ ಹಿನ್ನೆಲೆಯಲ್ಲಿ, ದೋಷಾರೋಪ ಪಟ್ಟಿಯಲ್ಲಿ ನಟನ ಹೆಸರು ಸೇರಿಸದೇ ಇರಲು ಪೊಲೀಸರು ನಿರ್ಧರಿಸಿದ್ದಾರೆ.
ದರ್ಶನ್ ಹಾಗು ಕೇರ್ ಟೇಕರ್ ವಿರುದ್ಧ ನಾಯಿ ಛೂ ಬಿಟ್ಟು ಕಚ್ಚಿಸಿದ್ದಾರೆಂದು ಅಮಿತಾ ದೂರಿನಲ್ಲಿ ಹೇಳಿದ್ದರು. A-2 ಆರೋಪಿಯಾಗಿ ದರ್ಶನ್ ಹೆಸರನ್ನು ಸಹಾ ಉಲ್ಲೇಖಿಸಿದ್ದರು. ಆದರೆ, ಘಟನೆ ನಡೆದಾಗ ನಟ ದರ್ಶನ್ ಸ್ಥಳದಲ್ಲೇ ಇರಲಿಲ್ಲ. ನಟ ದರ್ಶನ್ಗೆ ಘಟನೆಯ ಬಗ್ಗೆ ಮಾಹಿತಿಯೇ ಇರಲಿಲ್ಲ ಎಂದು ಸಾಬೀತಾಗಿದೆ. ಈ ಹಿನ್ನಲೆಯಲ್ಲಿ ದರ್ಶನ್ ಹೆಸರು ಕೈ ಬಿಟ್ಟು ಚಾರ್ಚ್ ಶೀಟ್ ಸಲ್ಲಿಸಲು ರಾಜರಾಜೇಶ್ವರಿ ನಗರ ಪೊಲೀಸರು ಮುಂದಾಗಿದ್ದಾರೆ.
ಏನಿದು ಪ್ರಕರಣ? : ದರ್ಶನ್ ಅವರು ಸಾಕಿದ್ದ ಶ್ವಾನಗಳು ಅಮಿತಾ ಜಿಂದಾಲ್ ಎಂಬ ಮಹಿಳೆ ಮೇಲೆ ದಾಳಿ ಮಾಡಿ ಕಚ್ಚಿತ್ತು. ಆದರೆ, ಈ ವೇಳೆ ದರ್ಶನ್ ಮನೆಯಲ್ಲಿ ಇರಲಿಲ್ಲ. ಈ ಸಂಬಂಧ ಅಮಿತಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದರು. ‘ಉದ್ದೇಶಪೂರ್ವಕವಾಗಿ ಈ ಕೆಲಸ ಮಾಡಲಾಗಿದೆ’ ಎಂದು ಮಹಿಳೆ ದೂರಿದ್ದರು. ದರ್ಶನ್ ಕೂಡ ವಿಚಾರಣೆಗೆ ಹಾಜರಿ ಹಾಕಿದ್ದರು. ‘ಪ್ರಕರಣ ನಡೆಯೋ ಸಂದರ್ಭದಲ್ಲಿ ನಾನು ಇರಲಿಲ್ಲ. ಇನ್ನು ಹೀಗೆ ಆಗದಂತೆ ನೋಡಿಕೊಳ್ಳುವೆ’ ಎಂದು ಅವರು ತಿಳಿಸಿದ್ದರು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…