ಚಿತ್ರ ಮಂಜರಿ

ನಾಯಿ ಕಚ್ಚಿದ ಪ್ರಕರಣ: ನಟ ದರ್ಶನ್​ಗೆ ರಿಲೀಫ್

ನಟ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿತಾ ಜಿಂದಾಲ್​ ಎಂಬ ಮಹಿಳೆಗೆ ದೂರು ನೀಡಿದ್ದು ಸಾಕಷ್ಟು ಚರ್ಚೆಯಾಗಿತ್ತು. ಉದ್ದೇಶ ಪೂರ್ವಕವಾಗಿ ನಾಯಿಯನ್ನು ನನ್ನ ಮೇಲೆ ಛೂ ಬಿಡಲಾಗಿದೆ ಎಂದು ಮಹಿಳೆ ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಪ್ರಕರಣದಲ್ಲಿ ದರ್ಶನ್ ಪಾತ್ರ ಇಲ್ಲದೇ ಇರುವುದು ತನಿಖೆಯಲ್ಲಿ ಸಾಬೀತಾಗಿರುವ ಹಿನ್ನೆಲೆಯಲ್ಲಿ, ದೋಷಾರೋಪ ಪಟ್ಟಿಯಲ್ಲಿ ನಟನ ಹೆಸರು ಸೇರಿಸದೇ ಇರಲು ಪೊಲೀಸರು ನಿರ್ಧರಿಸಿದ್ದಾರೆ.

ದರ್ಶನ್ ಹಾಗು ಕೇರ್ ಟೇಕರ್ ವಿರುದ್ಧ ನಾಯಿ ಛೂ ಬಿಟ್ಟು ಕಚ್ಚಿಸಿದ್ದಾರೆಂದು ಅಮಿತಾ ದೂರಿನಲ್ಲಿ ಹೇಳಿದ್ದರು. A-2 ಆರೋಪಿಯಾಗಿ ದರ್ಶನ್ ಹೆಸರನ್ನು ಸಹಾ ಉಲ್ಲೇಖಿಸಿದ್ದರು. ಆದರೆ, ಘಟನೆ ನಡೆದಾಗ ನಟ ದರ್ಶನ್ ಸ್ಥಳದಲ್ಲೇ ಇರಲಿಲ್ಲ. ನಟ ದರ್ಶನ್​ಗೆ ಘಟನೆಯ ಬಗ್ಗೆ ಮಾಹಿತಿಯೇ ಇರಲಿಲ್ಲ ಎಂದು ಸಾಬೀತಾಗಿದೆ. ಈ ಹಿನ್ನಲೆಯಲ್ಲಿ ದರ್ಶನ್ ಹೆಸರು ಕೈ ಬಿಟ್ಟು ಚಾರ್ಚ್ ಶೀಟ್ ಸಲ್ಲಿಸಲು ರಾಜರಾಜೇಶ್ವರಿ ನಗರ ಪೊಲೀಸರು ಮುಂದಾಗಿದ್ದಾರೆ.

ಏನಿದು ಪ್ರಕರಣ? : ದರ್ಶನ್​ ಅವರು ಸಾಕಿದ್ದ ಶ್ವಾನಗಳು ಅಮಿತಾ ಜಿಂದಾಲ್ ಎಂಬ ಮಹಿಳೆ ಮೇಲೆ ದಾಳಿ ಮಾಡಿ ಕಚ್ಚಿತ್ತು. ಆದರೆ, ಈ ವೇಳೆ ದರ್ಶನ್ ಮನೆಯಲ್ಲಿ ಇರಲಿಲ್ಲ. ಈ ಸಂಬಂಧ ಅಮಿತಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಎಫ್​​ಐಆರ್​ ದಾಖಲು ಮಾಡಿಕೊಂಡಿದ್ದರು. ‘ಉದ್ದೇಶಪೂರ್ವಕವಾಗಿ ಈ ಕೆಲಸ ಮಾಡಲಾಗಿದೆ’ ಎಂದು ಮಹಿಳೆ ದೂರಿದ್ದರು. ದರ್ಶನ್ ಕೂಡ ವಿಚಾರಣೆಗೆ ಹಾಜರಿ ಹಾಕಿದ್ದರು. ‘ಪ್ರಕರಣ ನಡೆಯೋ ಸಂದರ್ಭದಲ್ಲಿ ನಾನು ಇರಲಿಲ್ಲ. ಇನ್ನು ಹೀಗೆ ಆಗದಂತೆ ನೋಡಿಕೊಳ್ಳುವೆ’ ಎಂದು ಅವರು ತಿಳಿಸಿದ್ದರು.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

2 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

2 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

4 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

4 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

4 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

12 hours ago