ಚಿತ್ರ ಮಂಜರಿ

ನಾಯಿ ಕಚ್ಚಿದ ಪ್ರಕರಣ: ನಟ ದರ್ಶನ್​ಗೆ ರಿಲೀಫ್

ನಟ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿತಾ ಜಿಂದಾಲ್​ ಎಂಬ ಮಹಿಳೆಗೆ ದೂರು ನೀಡಿದ್ದು ಸಾಕಷ್ಟು ಚರ್ಚೆಯಾಗಿತ್ತು. ಉದ್ದೇಶ ಪೂರ್ವಕವಾಗಿ ನಾಯಿಯನ್ನು ನನ್ನ ಮೇಲೆ ಛೂ ಬಿಡಲಾಗಿದೆ ಎಂದು ಮಹಿಳೆ ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಪ್ರಕರಣದಲ್ಲಿ ದರ್ಶನ್ ಪಾತ್ರ ಇಲ್ಲದೇ ಇರುವುದು ತನಿಖೆಯಲ್ಲಿ ಸಾಬೀತಾಗಿರುವ ಹಿನ್ನೆಲೆಯಲ್ಲಿ, ದೋಷಾರೋಪ ಪಟ್ಟಿಯಲ್ಲಿ ನಟನ ಹೆಸರು ಸೇರಿಸದೇ ಇರಲು ಪೊಲೀಸರು ನಿರ್ಧರಿಸಿದ್ದಾರೆ.

ದರ್ಶನ್ ಹಾಗು ಕೇರ್ ಟೇಕರ್ ವಿರುದ್ಧ ನಾಯಿ ಛೂ ಬಿಟ್ಟು ಕಚ್ಚಿಸಿದ್ದಾರೆಂದು ಅಮಿತಾ ದೂರಿನಲ್ಲಿ ಹೇಳಿದ್ದರು. A-2 ಆರೋಪಿಯಾಗಿ ದರ್ಶನ್ ಹೆಸರನ್ನು ಸಹಾ ಉಲ್ಲೇಖಿಸಿದ್ದರು. ಆದರೆ, ಘಟನೆ ನಡೆದಾಗ ನಟ ದರ್ಶನ್ ಸ್ಥಳದಲ್ಲೇ ಇರಲಿಲ್ಲ. ನಟ ದರ್ಶನ್​ಗೆ ಘಟನೆಯ ಬಗ್ಗೆ ಮಾಹಿತಿಯೇ ಇರಲಿಲ್ಲ ಎಂದು ಸಾಬೀತಾಗಿದೆ. ಈ ಹಿನ್ನಲೆಯಲ್ಲಿ ದರ್ಶನ್ ಹೆಸರು ಕೈ ಬಿಟ್ಟು ಚಾರ್ಚ್ ಶೀಟ್ ಸಲ್ಲಿಸಲು ರಾಜರಾಜೇಶ್ವರಿ ನಗರ ಪೊಲೀಸರು ಮುಂದಾಗಿದ್ದಾರೆ.

ಏನಿದು ಪ್ರಕರಣ? : ದರ್ಶನ್​ ಅವರು ಸಾಕಿದ್ದ ಶ್ವಾನಗಳು ಅಮಿತಾ ಜಿಂದಾಲ್ ಎಂಬ ಮಹಿಳೆ ಮೇಲೆ ದಾಳಿ ಮಾಡಿ ಕಚ್ಚಿತ್ತು. ಆದರೆ, ಈ ವೇಳೆ ದರ್ಶನ್ ಮನೆಯಲ್ಲಿ ಇರಲಿಲ್ಲ. ಈ ಸಂಬಂಧ ಅಮಿತಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಎಫ್​​ಐಆರ್​ ದಾಖಲು ಮಾಡಿಕೊಂಡಿದ್ದರು. ‘ಉದ್ದೇಶಪೂರ್ವಕವಾಗಿ ಈ ಕೆಲಸ ಮಾಡಲಾಗಿದೆ’ ಎಂದು ಮಹಿಳೆ ದೂರಿದ್ದರು. ದರ್ಶನ್ ಕೂಡ ವಿಚಾರಣೆಗೆ ಹಾಜರಿ ಹಾಕಿದ್ದರು. ‘ಪ್ರಕರಣ ನಡೆಯೋ ಸಂದರ್ಭದಲ್ಲಿ ನಾನು ಇರಲಿಲ್ಲ. ಇನ್ನು ಹೀಗೆ ಆಗದಂತೆ ನೋಡಿಕೊಳ್ಳುವೆ’ ಎಂದು ಅವರು ತಿಳಿಸಿದ್ದರು.

andolanait

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

9 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

11 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

14 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

18 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

22 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

22 hours ago