ಚಿತ್ರ ಮಂಜರಿ

ಲಿಡ್ಕರ್‌ ಸಂಸ್ಥೆಗೆ ರಾಯಭಾರಿಯಾದ ಡಾಲಿ

ಬೆಂಗಳೂರು : ರಾಜ್ಯ ಸರ್ಕಾರದ ಉದ್ಯಮಗಳಲ್ಲೊಂದಾಗಿರುವ ಡಾ. ಬಾಬು ಜಗಜೀವನ್‌ ರಾಮ್‌ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮಕ್ಕೆ (ಲಿಡ್ಕರ್) ನಟ ಡಾಲಿ ಧನಂಜಯ್‌ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

ಡಾ. ಬಿ.ಆರ್‌ ಅಂಬೇಡ್ಕರ್‌ ಅವರ ಮಹಾಪರಿ ನಿರ್ವಾಣ ದಿನದ ಅಂಗವಾಗಿ ಸಿಎಂ ಸಿದ್ದರಾಮಯ್ಯನವರು ವಿಧಾನಸೌಧದ ಮುಂಭಾಗ ಇರುವ ಅಂಬೇಡ್ಕರ್‌ ಪ್ರತಿಮೆಗೆ ಗೌರವ ನಮನ ಸಲ್ಲಿಸಿ ಧನಂಜಯ್‌ ಅವರನ್ನು ಲಿಡ್ಕರ್‌ ಸಂಸ್ಥೆಯ ರಾಯಭಾರಿಯಾಗಿ ಘೋಷಣೆ ಮಾಡಿ, ಅಂಬೆಡ್ಕರ್‌ ಅವರ ಕುರಿತಾದ ಪುಸ್ತಕ ಹಾಗೂ ಲಿಡ್ಕರ್‌ ಸಂಸ್ಥೆಯಿಂದ ವಿಶೇಷವಾಗಿ ತಯಾರಿಸಿದ್ದ ಚಪ್ಪಲಿಯನ್ನು ಉಡುಗೊರೆಯಾಗಿ ನೀಡಿದರು.

ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯನವರು ನಾಡಿನ ಖ್ಯಾತ ನಟ ಡಾಲಿ ಧನಂಜಯ ಅವರನ್ನು ಲಿಡ್ಕರ್‌ ರಾಯಭಾರಿಯಾಗಿ ಆಯ್ಕೆ ಮಾಡಿದ್ದೇವೆ. ಅವರು ಉಚಿತವಾಗಿ ರಾಯಭಾರಿ ಕೆಲಸ ಮಾಡುತ್ತಿದ್ದಾರೆ. ಧನಂಜಯ್‌ ಒಬ್ಬ ಸಾಮಾಜಿಕ ಕಳಕಳಿಯುಳ್ಳ ನಟ. ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿದ್ದು ಅರ್ಥಪೂರ್ಣವಾಗಿದೆ. ಇದರಿಂದ ಚರ್ಮೋದ್ಯಮಕ್ಕೆ ಉತ್ತೇಜನ ಸಿಗಲಿದೆ ಎಂದರು.

ನಂತರ ಮಾತನಾಡಿದ ನಟ ಡಾಲಿ ಧನಂಜಯ್‌ ನಾನು ಮೊದಲ ಬಾರಿಗೆ ಒಂದು ಸಂಸ್ಥೆಗೆ ರಾಯಬಾರಿ ಆಗುತ್ತಿದ್ದೇನೆ. ಲಿಡ್ಕರ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್‌ ವಸುಂದರಾ ಅವರು ರಾಜ್ಯದಲ್ಲಿ ಚರ್ಮೋದ್ಯಮ ನಂಬಿಕೊಂಡು 50 ಸಾವಿರ ಕುಟುಂಬಗಳಿವೆ. ನಮ್ಮ ನಾಡಿನಲ್ಲಿ ಕಲ್ಯಾಣಮ್ಮ ಮತ್ತು ಹರಳಯ್ಯ ಅವರಂತಹ ಸಾವಿರಾರು ಜನ ಕುಶಲಕರ್ಮಿಗಳಿದ್ದಾರೆ. ನಮ್ಮದೇ ಆದ ಬ್ರ್ಯಾಂಡ್‌ ಗೆ ನಾವು ಬೆಂಬಲಿಸಬೇಕು ಎನ್ನುವ ಉದ್ದೇಶದಿಂದ ಇದನ್ನು ಒಪ್ಪಿಕೊಂಡಿದ್ದೇನೆ ಮೇಕ್‌ ಇನ್‌ ಇಂಡಿಯಾ ಹೇಗಿದೆಯೋ ಗಾಗೆ ಮೇಕ್‌ ಇನ್‌ ಕರ್ನಾಟಕ ಆಗಬೇಕು. ಲಿಡ್ಕರ್‌ ಸಂಸ್ಥೆಗೆ ಬೆಂಬಲ ನೀಡುವುದರಿಂದ ಅದನ್ನೇ ನಂಬಿಕೊಂಡಿರುವ ಕುಟುಂಬಗಳಿಗೆ ಸಹಾಯವಾಗಲಿದೆ. ನಮ್ಮ ರಾಜ್ಯದಲ್ಲಿ ಮೈಸೂರು ಸಿಲ್ಕ್‌ ಹೇಗಿದೆಯೋ ಹಾಗೆ ನಮ್ಮದೂ ಒಂದು ಬ್ರಾಂಡ್‌ ಇರಬೇಕು ಎಂದರು.

lokesh

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

9 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

9 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

10 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

11 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

11 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

11 hours ago