ಚಿತ್ರ ಮಂಜರಿ

ಯೋಗಿ ಅಭಿನಯದ‌ ರೋಜಿ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿ ಶುಭಕೋರಿದ ಡಾಲಿ

ಬೆಂಗಳೂರು : ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ ರೋಜಿ.ಶೀರ್ಷಿಕೆ ಅನಾವರಣ ಹಾಗೂ ಮುಹೂರ್ತ ಸಮಾರಂಭ ನವರಂಗ್ ಚಿತ್ರಮಂದಿರದಲ್ಲಿ ನಡೆಯಿತು. ಡಾಲಿ ಧನಂಜಯ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ, ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.” ಹೆಡ್ ಬುಷ್” ಚಿತ್ರದ ನಂತರ ಶೂನ್ಯ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಡಿ.ವೈ.ರಾಜೇಶ್ ಹಾಗೂ ಡಿ.ವೈ.ವಿನೋದ್ ನಿರ್ಮಾಣ ಮಾಡುತ್ತಿದ್ದಾರೆ.
ಯೋಗಿ ನನ್ನ ಆತ್ಮೀಯ ಗೆಳೆಯ. “ರೋಜಿ” ಯೋಗಿ ಅಭಿನಯದ 50ನೇ ಸಿನಿಮಾ ಎಂದು ತಿಳಿದು ಸಂತೋಷವಾಯಿತು. ಶೂನ್ಯ ಕೂಡ ನಮ್ಮ ಸಂಸ್ಥೆಯ ನಿರ್ಮಾಣದ “ಹೆಡ್ ಬುಷ್” ಚಿತ್ರ ನಿರ್ದೇಶನ ಮಾಡಿದ್ದರು. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಡಾಲಿ ಹಾರೈಸಿದರು.

ಇದು ನನ್ನ ಐವತ್ತನೇ ಚಿತ್ರ. ನಾನು ಈ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಆಗಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಹಿಂದೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರ ಎನ್ನಬಹುದು. ಶೂನ್ಯ ಕಥೆ ಚೆನ್ನಾಗಿ ಮಾಡಿಕೊಂಡಿದ್ದಾರೆ. ಶೀರ್ಷಿಕೆ ಬಿಡುಗಡೆ ಮಾಡಿ, ಶುಭ ಹಾರೈಸಿದ ಸ್ನೇಹಿತ ಡಾಲಿ ಧನಂಜಯ ಅವರಿಗೆ ಧನ್ಯವಾದ ಎಂದರು ನಾಯಕ ಯೋಗಿ.

ನನ್ನ ಮೊದಲ ನಿರ್ದೇಶನದ ಚಿತ್ರಕ್ಕೆ ಎಲ್ಲರೂ ನೀಡಿದ್ದ ಪ್ರೋತ್ಸಾಹಕ್ಕೆ ಚಿರ ಋಣಿ. ಈಗ ನನ್ನ ನಿರ್ದೇಶನದ ಎರಡನೇ ಚಿತ್ರ “ರೋಜಿ” ಗೆ ಚಾಲನೆ ಸಿಕ್ಕಿದೆ. ಚಿತ್ರದಲ್ಲಿ ಯೋಗಿ ಅವರ ಹೆಸರೆ “ರೋಜಿ”. ಚಿತ್ರರಂಗದವರಿಗೆ ಚಿತ್ರಮಂದಿರ ದೇವಸ್ಥಾನವಿದಂತೆ. ಹಾಗಾಗಿ ನಮ್ಮ ಚಿತ್ರವನ್ನು ಚಿತ್ರಮಂದಿರದಲ್ಲಿ ಆರಂಭಿಸಿದ್ದೇವೆ. ಮೇ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕ ಶೂನ್ಯ ತಿಳಿಸಿದರು.

lokesh

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

22 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

22 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

22 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

22 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

22 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

22 hours ago