ಚಿತ್ರ ಮಂಜರಿ

ಯೋಗಿ ಅಭಿನಯದ‌ ರೋಜಿ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿ ಶುಭಕೋರಿದ ಡಾಲಿ

ಬೆಂಗಳೂರು : ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ ರೋಜಿ.ಶೀರ್ಷಿಕೆ ಅನಾವರಣ ಹಾಗೂ ಮುಹೂರ್ತ ಸಮಾರಂಭ ನವರಂಗ್ ಚಿತ್ರಮಂದಿರದಲ್ಲಿ ನಡೆಯಿತು. ಡಾಲಿ ಧನಂಜಯ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ, ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.” ಹೆಡ್ ಬುಷ್” ಚಿತ್ರದ ನಂತರ ಶೂನ್ಯ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಡಿ.ವೈ.ರಾಜೇಶ್ ಹಾಗೂ ಡಿ.ವೈ.ವಿನೋದ್ ನಿರ್ಮಾಣ ಮಾಡುತ್ತಿದ್ದಾರೆ.
ಯೋಗಿ ನನ್ನ ಆತ್ಮೀಯ ಗೆಳೆಯ. “ರೋಜಿ” ಯೋಗಿ ಅಭಿನಯದ 50ನೇ ಸಿನಿಮಾ ಎಂದು ತಿಳಿದು ಸಂತೋಷವಾಯಿತು. ಶೂನ್ಯ ಕೂಡ ನಮ್ಮ ಸಂಸ್ಥೆಯ ನಿರ್ಮಾಣದ “ಹೆಡ್ ಬುಷ್” ಚಿತ್ರ ನಿರ್ದೇಶನ ಮಾಡಿದ್ದರು. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಡಾಲಿ ಹಾರೈಸಿದರು.

ಇದು ನನ್ನ ಐವತ್ತನೇ ಚಿತ್ರ. ನಾನು ಈ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಆಗಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಹಿಂದೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರ ಎನ್ನಬಹುದು. ಶೂನ್ಯ ಕಥೆ ಚೆನ್ನಾಗಿ ಮಾಡಿಕೊಂಡಿದ್ದಾರೆ. ಶೀರ್ಷಿಕೆ ಬಿಡುಗಡೆ ಮಾಡಿ, ಶುಭ ಹಾರೈಸಿದ ಸ್ನೇಹಿತ ಡಾಲಿ ಧನಂಜಯ ಅವರಿಗೆ ಧನ್ಯವಾದ ಎಂದರು ನಾಯಕ ಯೋಗಿ.

ನನ್ನ ಮೊದಲ ನಿರ್ದೇಶನದ ಚಿತ್ರಕ್ಕೆ ಎಲ್ಲರೂ ನೀಡಿದ್ದ ಪ್ರೋತ್ಸಾಹಕ್ಕೆ ಚಿರ ಋಣಿ. ಈಗ ನನ್ನ ನಿರ್ದೇಶನದ ಎರಡನೇ ಚಿತ್ರ “ರೋಜಿ” ಗೆ ಚಾಲನೆ ಸಿಕ್ಕಿದೆ. ಚಿತ್ರದಲ್ಲಿ ಯೋಗಿ ಅವರ ಹೆಸರೆ “ರೋಜಿ”. ಚಿತ್ರರಂಗದವರಿಗೆ ಚಿತ್ರಮಂದಿರ ದೇವಸ್ಥಾನವಿದಂತೆ. ಹಾಗಾಗಿ ನಮ್ಮ ಚಿತ್ರವನ್ನು ಚಿತ್ರಮಂದಿರದಲ್ಲಿ ಆರಂಭಿಸಿದ್ದೇವೆ. ಮೇ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕ ಶೂನ್ಯ ತಿಳಿಸಿದರು.

lokesh

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

4 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

5 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

7 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

8 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

10 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

11 hours ago