ಚಿತ್ರ ಮಂಜರಿ

ಯೋಗಿ ಅಭಿನಯದ‌ ರೋಜಿ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿ ಶುಭಕೋರಿದ ಡಾಲಿ

ಬೆಂಗಳೂರು : ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ ರೋಜಿ.ಶೀರ್ಷಿಕೆ ಅನಾವರಣ ಹಾಗೂ ಮುಹೂರ್ತ ಸಮಾರಂಭ ನವರಂಗ್ ಚಿತ್ರಮಂದಿರದಲ್ಲಿ ನಡೆಯಿತು. ಡಾಲಿ ಧನಂಜಯ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ, ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.” ಹೆಡ್ ಬುಷ್” ಚಿತ್ರದ ನಂತರ ಶೂನ್ಯ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಡಿ.ವೈ.ರಾಜೇಶ್ ಹಾಗೂ ಡಿ.ವೈ.ವಿನೋದ್ ನಿರ್ಮಾಣ ಮಾಡುತ್ತಿದ್ದಾರೆ.
ಯೋಗಿ ನನ್ನ ಆತ್ಮೀಯ ಗೆಳೆಯ. “ರೋಜಿ” ಯೋಗಿ ಅಭಿನಯದ 50ನೇ ಸಿನಿಮಾ ಎಂದು ತಿಳಿದು ಸಂತೋಷವಾಯಿತು. ಶೂನ್ಯ ಕೂಡ ನಮ್ಮ ಸಂಸ್ಥೆಯ ನಿರ್ಮಾಣದ “ಹೆಡ್ ಬುಷ್” ಚಿತ್ರ ನಿರ್ದೇಶನ ಮಾಡಿದ್ದರು. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಡಾಲಿ ಹಾರೈಸಿದರು.

ಇದು ನನ್ನ ಐವತ್ತನೇ ಚಿತ್ರ. ನಾನು ಈ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಆಗಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಹಿಂದೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರ ಎನ್ನಬಹುದು. ಶೂನ್ಯ ಕಥೆ ಚೆನ್ನಾಗಿ ಮಾಡಿಕೊಂಡಿದ್ದಾರೆ. ಶೀರ್ಷಿಕೆ ಬಿಡುಗಡೆ ಮಾಡಿ, ಶುಭ ಹಾರೈಸಿದ ಸ್ನೇಹಿತ ಡಾಲಿ ಧನಂಜಯ ಅವರಿಗೆ ಧನ್ಯವಾದ ಎಂದರು ನಾಯಕ ಯೋಗಿ.

ನನ್ನ ಮೊದಲ ನಿರ್ದೇಶನದ ಚಿತ್ರಕ್ಕೆ ಎಲ್ಲರೂ ನೀಡಿದ್ದ ಪ್ರೋತ್ಸಾಹಕ್ಕೆ ಚಿರ ಋಣಿ. ಈಗ ನನ್ನ ನಿರ್ದೇಶನದ ಎರಡನೇ ಚಿತ್ರ “ರೋಜಿ” ಗೆ ಚಾಲನೆ ಸಿಕ್ಕಿದೆ. ಚಿತ್ರದಲ್ಲಿ ಯೋಗಿ ಅವರ ಹೆಸರೆ “ರೋಜಿ”. ಚಿತ್ರರಂಗದವರಿಗೆ ಚಿತ್ರಮಂದಿರ ದೇವಸ್ಥಾನವಿದಂತೆ. ಹಾಗಾಗಿ ನಮ್ಮ ಚಿತ್ರವನ್ನು ಚಿತ್ರಮಂದಿರದಲ್ಲಿ ಆರಂಭಿಸಿದ್ದೇವೆ. ಮೇ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕ ಶೂನ್ಯ ತಿಳಿಸಿದರು.

lokesh

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

6 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

8 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

11 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

13 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

14 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

15 hours ago