ಬೆಂಗಳೂರು: ಚಂದನವನದ ನವರಸ ನಾಯಕ, ನಟ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರು. ಆಗಾಗ ಯಾವುದಾದರೂ ಒಂದು ವಿಷಯದ ಬಗ್ಗೆ, ತಮ್ಮ ಜೀವನದ ಅಪ್ಡೇಟ್ಸ್ ಬಗ್ಗೆ ಟ್ವಿಟರ್-ಫೇಸ್ಬುಕ್ಗಳಲ್ಲಿ ಮಾಹಿತಿ ಹಂಚಿಕೊಳ್ಳುತ್ತಿರುತ್ತಾರೆ. ಅದೇ ರೀತಿ ಅವರು ಇತ್ತೀಚೆಗೆ ತಮ್ಮ ಕಾಲಿಗೆ ಪೆಟ್ಟಾದ ಬಗ್ಗೆಯೂ ಹೇಳಿಕೊಂಡಿದ್ದರು.
ವೈದ್ಯರ ಬಳಿಗೆ ತೆರಳಿ ಚಿಕಿತ್ಸೆ ಪಡೆದ ಬಳಿಕ ಕಾಲಿನ ಫೋಟೋ ತೆಗೆದು ಸೋಷಿಯಲ್ ಮೀಡಿಯಾಗೆ ಪೋಸ್ಟ್ ಮಾಡಿ ತಮ್ಮ ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದರು. ‘ಸಣ್ಣ ಅಚಾತುರ್ಯ ನಡಿಗೆಯಿಂದ ಪಾದದ ಮೂಳೆ ಮುರಿತ! 6 ವಾರದ ದಿಘ್ಭಂಧನ ನಡಿಗೆಗೆ?’ ಎಂಬುದಾಗಿ ಆ ಫೋಟೋ ಜತೆ ಕ್ಯಾಪ್ಷನ್ ಹಾಕಿಕೊಂಡಿದ್ದರು.
ಜಗ್ಗೇಶ್ ಅವರ ಈ ಪೋಸ್ಟ್ನಲ್ಲಿನ ತಪ್ಪನ್ನು ಗಮನಕ್ಕೆ ತರುವ ನಿಟ್ಟಿನಲ್ಲಿ ಕನ್ನಡ ಚಿತ್ರರಂಗದಲ್ಲಿ ಮೇಷ್ಟ್ರು ಎಂದೇ ಕರೆಯಲಾಗುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಕಮೆಂಟ್ ಮಾಡಿದ್ದಾರೆ. ‘ದಿಘ್ಭಂದನ ಅಲ್ಲ -ದಿಗ್ಬಂಧನ. ಅನಗತ್ಯವಾಗಿ ಮಹಾಪ್ರಾಣ ಪ್ರಯೋಗಿಸಬೇಡಿ. ಮೂಳೆ ಮುರಿತ ಬೇಗ ಗುಣವಾಗಲಿ. ಸಕ್ಕರೆ ರೋಗವಿದ್ದಲ್ಲಿ ಹೆಚ್ಚು ಜೋಪಾನ ವಹಿಸಿ. ಶುಭವಾಗಲಿ. ಪ್ರೀತಿಯಿಂದ- ನಾಗತಿಹಳ್ಳಿ ಚಂದ್ರಶೇಖರ’ ಎಂಬುದಾಗಿ ಅವರು ಮಾಡಿರುವ ರಿಪ್ಲೈಗೆ ಬಹಳಷ್ಟು ಪ್ರತಿಕ್ರಿಯೆಗಳು ಬರಲಾರಂಭಿಸಿವೆ.
ಚಿತ್ರರಂಗದಲ್ಲಿ ಮೇಷ್ಟ್ರು ಎಂದೇ ಕರೆಯಲ್ಪಡುವ ನಾಗತಿಹಳ್ಳಿ ಚಂದ್ರಶೇಖರ್ ಅವರು, ಈ ಮೂಲಕ ನಿಜವಾಗಿಯೂ ಮೇಷ್ಟ್ರ ರೀತಿಯಲ್ಲಿ ಕನ್ನಡ ವ್ಯಾಕರಣದ ಕುರಿತು ಅರಿವು ಮೂಡಿಸುವ ಕೆಲಸ ಮಾಡಿದ್ದಕ್ಕೆ ಹಲವರು ಮೆಚ್ಚುಗೆ ಸೂಚಿಸಿದ್ದಾರೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…