ಬೆಂಗಳೂರು: ಚಂದನವನದ ನವರಸ ನಾಯಕ, ನಟ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರು. ಆಗಾಗ ಯಾವುದಾದರೂ ಒಂದು ವಿಷಯದ ಬಗ್ಗೆ, ತಮ್ಮ ಜೀವನದ ಅಪ್ಡೇಟ್ಸ್ ಬಗ್ಗೆ ಟ್ವಿಟರ್-ಫೇಸ್ಬುಕ್ಗಳಲ್ಲಿ ಮಾಹಿತಿ ಹಂಚಿಕೊಳ್ಳುತ್ತಿರುತ್ತಾರೆ. ಅದೇ ರೀತಿ ಅವರು ಇತ್ತೀಚೆಗೆ ತಮ್ಮ ಕಾಲಿಗೆ ಪೆಟ್ಟಾದ ಬಗ್ಗೆಯೂ ಹೇಳಿಕೊಂಡಿದ್ದರು.
ವೈದ್ಯರ ಬಳಿಗೆ ತೆರಳಿ ಚಿಕಿತ್ಸೆ ಪಡೆದ ಬಳಿಕ ಕಾಲಿನ ಫೋಟೋ ತೆಗೆದು ಸೋಷಿಯಲ್ ಮೀಡಿಯಾಗೆ ಪೋಸ್ಟ್ ಮಾಡಿ ತಮ್ಮ ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದರು. ‘ಸಣ್ಣ ಅಚಾತುರ್ಯ ನಡಿಗೆಯಿಂದ ಪಾದದ ಮೂಳೆ ಮುರಿತ! 6 ವಾರದ ದಿಘ್ಭಂಧನ ನಡಿಗೆಗೆ?’ ಎಂಬುದಾಗಿ ಆ ಫೋಟೋ ಜತೆ ಕ್ಯಾಪ್ಷನ್ ಹಾಕಿಕೊಂಡಿದ್ದರು.
ಜಗ್ಗೇಶ್ ಅವರ ಈ ಪೋಸ್ಟ್ನಲ್ಲಿನ ತಪ್ಪನ್ನು ಗಮನಕ್ಕೆ ತರುವ ನಿಟ್ಟಿನಲ್ಲಿ ಕನ್ನಡ ಚಿತ್ರರಂಗದಲ್ಲಿ ಮೇಷ್ಟ್ರು ಎಂದೇ ಕರೆಯಲಾಗುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಕಮೆಂಟ್ ಮಾಡಿದ್ದಾರೆ. ‘ದಿಘ್ಭಂದನ ಅಲ್ಲ -ದಿಗ್ಬಂಧನ. ಅನಗತ್ಯವಾಗಿ ಮಹಾಪ್ರಾಣ ಪ್ರಯೋಗಿಸಬೇಡಿ. ಮೂಳೆ ಮುರಿತ ಬೇಗ ಗುಣವಾಗಲಿ. ಸಕ್ಕರೆ ರೋಗವಿದ್ದಲ್ಲಿ ಹೆಚ್ಚು ಜೋಪಾನ ವಹಿಸಿ. ಶುಭವಾಗಲಿ. ಪ್ರೀತಿಯಿಂದ- ನಾಗತಿಹಳ್ಳಿ ಚಂದ್ರಶೇಖರ’ ಎಂಬುದಾಗಿ ಅವರು ಮಾಡಿರುವ ರಿಪ್ಲೈಗೆ ಬಹಳಷ್ಟು ಪ್ರತಿಕ್ರಿಯೆಗಳು ಬರಲಾರಂಭಿಸಿವೆ.
ಚಿತ್ರರಂಗದಲ್ಲಿ ಮೇಷ್ಟ್ರು ಎಂದೇ ಕರೆಯಲ್ಪಡುವ ನಾಗತಿಹಳ್ಳಿ ಚಂದ್ರಶೇಖರ್ ಅವರು, ಈ ಮೂಲಕ ನಿಜವಾಗಿಯೂ ಮೇಷ್ಟ್ರ ರೀತಿಯಲ್ಲಿ ಕನ್ನಡ ವ್ಯಾಕರಣದ ಕುರಿತು ಅರಿವು ಮೂಡಿಸುವ ಕೆಲಸ ಮಾಡಿದ್ದಕ್ಕೆ ಹಲವರು ಮೆಚ್ಚುಗೆ ಸೂಚಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…