ಚಿತ್ರ ಮಂಜರಿ

ಹೆಬ್ಬುಲಿ ಕೇಶ ವಿನ್ಯಾಸ ಮಕ್ಕಳಿಗೆ ಬೇಡ: ಕ್ಷೌರಿಕರಿಗೆ ಪತ್ರ ಬರೆದ ಶಿಕ್ಷಕ

ಕೊಳ್ಳೇಗಾಲ : ಹೆಬ್ಬುಲಿ ಸಿನೆಮಾದಲ್ಲಿ ನಟ ಸುದೀಪ್‌ ಅವರು ಮಾಡಿಸಿಕೊಂಡಿದ್ದ ಕೇಶ ವಿನ್ಯಾಸವನ್ನು ಶಾಲಾ ಮಕ್ಕಳಿಗೆ ಮಾಡಬೇಡಿ ಎಂದು ಶಿಕ್ಷಕರೊಬ್ಬರು ಮನವಿ ಮಾಡಿಕೊಂಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ ಎಂ.ಶಾಂತರಾಜು ಅವರು ತಾಲೂಕಿನ ಸವಿತಾ ಸಮಾಜದ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ʼʼತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ತಮ್ಮ ಸಂಘದ ಸದಸ್ಯರ ಕಟಿಂಗ್‌ ಶಾಪ್‌ಗಳಲ್ಲಿ ಶಾಲಾ ಮಕ್ಕಳು ಹೆಬ್ಬುಲಿ ಕಟಿಂಗ್‌ ಮಾಡಿಸಲು ಕೇಳಿದರೆ ದಯವಿಟ್ಟು ಮಾಡಬೇಡಿ. ನಾವು ತರಗತಿಯಲ್ಲಿ ಈ ರೀತಿ ಕಟಿಂಗ್‌ ಮಾಡಿಸಬೇಡಿ ಎಂದು ತಿಳಿಸಿದ್ದರೂ, ಅಲ್ಲದೇ ಪೋಷಕರಿಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ.

ವಿದ್ಯಾರ್ಥಿಗಳು ಈ ರೀತಿ ಕಟಿಂಗ್‌ ಮಾಡಿಸಿಕೊಂಡು ಬರುವುದು ನಮ್ಮನ್ನು ಅಪಹಾಸ್ಯ ಮಾಡುವಂತಿದೆ. ಅಣಕಿಸುವಂತಿದೆ. ಆದ್ದರಿಂದ ಈ ಬಗ್ಗೆ ತಮ್ಮ ಸಂಘದ ಸದಸ್ಯರು ಹೆಬ್ಬುಲಿ ಕಟಿಂಗ್‌ ಮಾಡಬಾರದಾಗಿ ಆದೇಶ ನೀಡವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆʼʼ ಎಂದು ಪತ್ರದಲ್ಲಿ ಮನವಿ ತಿಳಿಸಿದ್ದಾರೆ.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

8 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

9 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

9 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

10 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

11 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

15 hours ago