ಚಿತ್ರ ಮಂಜರಿ

ನಮ್ಮ ಮೇಲಿನ ಅಭಿಮಾನಕ್ಕೆ ಜೀವಹಾನಿ ಮಾಡಿಕೊಳ್ಳಬೇಡಿ: ನಟ ಯಶ್‌

ಗದಗ: ರಾಕಿಂಗ್‌ ಸ್ಟಾರ್‌ ಯಶ್‌ ಹಟ್ಟು ಹಬ್ಬವನ್ನು ಸಂಭ್ರಮಿಸಲು ಬ್ಯಾನರ್‌ ಕಟ್ಟಲು ಹೋಗಿ ನಿಧನರಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದ ಯುವಕರ ಕುಟುಂಬವನ್ನು ಭೇಟಿಯಾಗಿ, ಅವರ ತಂದೆ-ತಾಯಿಗೆ ಸಾಂತ್ವಾನ ಹೇಳಿದ್ದಾರೆ.

ಇಂದು (ಸೋಮವಾರ) ಯಶ್‌ ಜನ್ಮ ದಿನವಾಗಿದ್ದು, ಅವರಿಗೆ ಶುಭ ಕೋರಲು ಸೂರಣಗಿ ಗ್ರಾಮದ ಯುವಕರು ಬ್ಯಾನರ್‌ ಕಟ್ಟುತ್ತಿದ್ದ ವೇಳೆ ವಿದ್ಯತ್‌ ಸ್ಪರ್ಶದಿಂದ ಮೃತಪಟ್ಟದ್ದರು. ಈ ಸುದ್ದಿ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ರಾಕಿಂಗ್‌ ಸ್ಟಾರ್‌ ಯಶ್‌, ಮೃತ ಕುಟುಂಬದವರಗೆ ಸಾಂತ್ವಾನ ಹೇಳಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ಯಶ್‌, ಅಭಿಮಾನವನ್ನು ಬ್ಯಾನರ್‌ ಹಾಕಿ ಈ ರೀತಿ ವ್ಯಕ್ತಪಡಿಸಬೇಕು ಎಂಬುದನ್ನು ನಾವು ಯಾರು ಇಷ್ಟ ಪಡುವುದಿಲ್ಲ. ಪ್ರತೀ ವರ್ಷ ಹುಟ್ಟು ಹಬ್ಬ ಬಂದಾಗೆಲ್ಲಾ ಒಂದಿಲ್ಲೊಂದು ಘಟನೆಗಳು ನಡೆಯುತ್ತಲೇ ಇರುತ್ತವೆ. ನಮಗೆ ಬರ್ತ್‌ಡೇ ಎಂದರೆ ಭಯವಾಗುತ್ತಿದೆ. ನನ್ನ ಬಗ್ಗೆ ನನಗೆ ಅಸಹ್ಯವಾಗಿದೆ. ಏನಿಕ್ಕೆ ಇದು. ಅಭಿಮಾನಿಗಳು ಎಲ್ಲಿದ್ದರೂ ಅಲ್ಲಿಂದಲೇ ಅರಸಿದರೇ ಅದುವೇ ನಮಗೆ ಸಾಕು. ಅದುವೇ ನಿಜವಾದ ಬರ್ತ್‌ಡೇ ಎಂದು ರಾಕಿಂಗ್‌ ಸ್ಟಾರ್‌ ಯಶ್‌ ಅವರು ಹೇಳಿದ್ದಾರೆ.

ಅಭಿಮಾನವನ್ನು ಬ್ಯಾನರ್‌ ಕಟ್ಟುವುದು, ಬೈಕ್‌ ನಲ್ಲಿ ಚೇಸ್‌ ಮಾಡುವುದನ್ನು ಬಿಟ್ಟುಬಿಡಿ. ನನ್ನ ಬರ್ತ್‌ಡೇಯಿಂದ ಯಾರಿಗೂ ತೊಂದರೆಯಾಗಬಾರದು ಎಂದು ಈ ವರ್ಷ ಆಚರಣೆ ಮಾಡಬಾರದು ಎಂದು ನಿರ್ಧರಿಸಿದ್ದೆ. ಬೇಡ ಎಂದರೂ ಅಭಿಮಾನಿಗಳು ಬೇಜಾರ್‌ ಮಾಡಿಕೊಳ್ಳುತ್ತಾರೆ. ಈಗನ್ನು ಚಿಕ್ಕ ವಯಸ್ಸಿನ ಹುಡುಗರು? ಅವರ ಮನೆಗೆ ಯಾರು ಬೇಕಾದರೂ ಸಹಾಯ ಮಾಡಬಹುದು. ಆದರೆ ಮಗ ಮನೆಗೆ ಬರುತ್ತನಾ? ನಮ್ಮ ಮನೆಗಳಲ್ಲಿಯೂ ಸಾವಾದರು ಹಾಗೆಯೇ ಅಲ್ಲವೇ? ಎಂದು ಯಶ್‌ ವಿಷಾಧ ವ್ಯಕ್ತಪಡಿಸಿದ್ದಾರೆ.

ಅಭಿಮಾನಿಗಳು ನಿಜವಾಗಿಯೂ ಪ್ರೀತಿ ತೋರಿಸಬೇಕು ಎಂದರೆ, ಒಳ್ಳೆಯ ಕೆಲಸಗಳನ್ನು ಮಾಡಿ ನಿಮ್ಮ ಜೀವನದಲ್ಲಿ ಖುಷಿಯಾಗಿರಿ ಅದುವೇ ಸಾಕು. ಪ್ರತಿಯೊಬ್ಬ ಅಭಿಮಾನಿಯೂ ಅವರವರ ಬದುಕಿನಲ್ಲಿ ಬೆಳೆದರೆ ಅದುವೇ ಅವರು ನಮಗೆ ಅಭಿಮಾನ ತೋರಿಸಿದಂತೆ ಎಂದಿದ್ದಾರೆ ಯಶ್‌.

ಈ ಘಟನೆ ಬಳಿಕ ಪರಿಹಾರ ಘೋಷಣೆ ಮಾಡುವುದು ದೊಡ್ಡ ವಿಷಯವಲ್ಲ. ಮೃತರ ಕುಟುಂಬಕ್ಕೆ ಏನು ಅವಶ್ಯಕತೆಯಿದೆ ಅದನ್ನು ಮಾಡೋಣ. ನಾವು ಬಂದು ನೋಡುತ್ತಿರುವುದು ತಂದೆ-ತಾಯಿ ಮೇಲಿರುವ ಗೌರವಕ್ಕೆ. ಈ ಘಟನೆ ಗೊತ್ತಿದ್ದೋ ಗೊತ್ತಿಲ್ಲದೆಯೋ ನಡೆದಿದೆ. ನಮ್ಮ ಮೇಲೆ ಪ್ರೀತಿಯಿದ್ದರೆ ಜವಾಬ್ದಾರಿಂದ ನಡೆದುಕೊಳ್ಳಿ. ನಮ್ಮ ಮೇಲಿನ ಅಭಿಮಾನಕ್ಕೆ ಜೀವಹಾನಿ ಮಾಡಿಕೊಳ್ಳಬೇಡಿ ಎಂದು ರಾಕಿಂಗ್‌ ಸ್ಟಾರ್‌ ಯಶ್‌ ಮನವಿ ಮಾಡಿದ್ದಾರೆ.

andolanait

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

5 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

6 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

6 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

6 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

7 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

8 hours ago