ಚಿತ್ರ ಮಂಜರಿ

ನಮ್ಮ ಮೇಲಿನ ಅಭಿಮಾನಕ್ಕೆ ಜೀವಹಾನಿ ಮಾಡಿಕೊಳ್ಳಬೇಡಿ: ನಟ ಯಶ್‌

ಗದಗ: ರಾಕಿಂಗ್‌ ಸ್ಟಾರ್‌ ಯಶ್‌ ಹಟ್ಟು ಹಬ್ಬವನ್ನು ಸಂಭ್ರಮಿಸಲು ಬ್ಯಾನರ್‌ ಕಟ್ಟಲು ಹೋಗಿ ನಿಧನರಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದ ಯುವಕರ ಕುಟುಂಬವನ್ನು ಭೇಟಿಯಾಗಿ, ಅವರ ತಂದೆ-ತಾಯಿಗೆ ಸಾಂತ್ವಾನ ಹೇಳಿದ್ದಾರೆ.

ಇಂದು (ಸೋಮವಾರ) ಯಶ್‌ ಜನ್ಮ ದಿನವಾಗಿದ್ದು, ಅವರಿಗೆ ಶುಭ ಕೋರಲು ಸೂರಣಗಿ ಗ್ರಾಮದ ಯುವಕರು ಬ್ಯಾನರ್‌ ಕಟ್ಟುತ್ತಿದ್ದ ವೇಳೆ ವಿದ್ಯತ್‌ ಸ್ಪರ್ಶದಿಂದ ಮೃತಪಟ್ಟದ್ದರು. ಈ ಸುದ್ದಿ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ರಾಕಿಂಗ್‌ ಸ್ಟಾರ್‌ ಯಶ್‌, ಮೃತ ಕುಟುಂಬದವರಗೆ ಸಾಂತ್ವಾನ ಹೇಳಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ಯಶ್‌, ಅಭಿಮಾನವನ್ನು ಬ್ಯಾನರ್‌ ಹಾಕಿ ಈ ರೀತಿ ವ್ಯಕ್ತಪಡಿಸಬೇಕು ಎಂಬುದನ್ನು ನಾವು ಯಾರು ಇಷ್ಟ ಪಡುವುದಿಲ್ಲ. ಪ್ರತೀ ವರ್ಷ ಹುಟ್ಟು ಹಬ್ಬ ಬಂದಾಗೆಲ್ಲಾ ಒಂದಿಲ್ಲೊಂದು ಘಟನೆಗಳು ನಡೆಯುತ್ತಲೇ ಇರುತ್ತವೆ. ನಮಗೆ ಬರ್ತ್‌ಡೇ ಎಂದರೆ ಭಯವಾಗುತ್ತಿದೆ. ನನ್ನ ಬಗ್ಗೆ ನನಗೆ ಅಸಹ್ಯವಾಗಿದೆ. ಏನಿಕ್ಕೆ ಇದು. ಅಭಿಮಾನಿಗಳು ಎಲ್ಲಿದ್ದರೂ ಅಲ್ಲಿಂದಲೇ ಅರಸಿದರೇ ಅದುವೇ ನಮಗೆ ಸಾಕು. ಅದುವೇ ನಿಜವಾದ ಬರ್ತ್‌ಡೇ ಎಂದು ರಾಕಿಂಗ್‌ ಸ್ಟಾರ್‌ ಯಶ್‌ ಅವರು ಹೇಳಿದ್ದಾರೆ.

ಅಭಿಮಾನವನ್ನು ಬ್ಯಾನರ್‌ ಕಟ್ಟುವುದು, ಬೈಕ್‌ ನಲ್ಲಿ ಚೇಸ್‌ ಮಾಡುವುದನ್ನು ಬಿಟ್ಟುಬಿಡಿ. ನನ್ನ ಬರ್ತ್‌ಡೇಯಿಂದ ಯಾರಿಗೂ ತೊಂದರೆಯಾಗಬಾರದು ಎಂದು ಈ ವರ್ಷ ಆಚರಣೆ ಮಾಡಬಾರದು ಎಂದು ನಿರ್ಧರಿಸಿದ್ದೆ. ಬೇಡ ಎಂದರೂ ಅಭಿಮಾನಿಗಳು ಬೇಜಾರ್‌ ಮಾಡಿಕೊಳ್ಳುತ್ತಾರೆ. ಈಗನ್ನು ಚಿಕ್ಕ ವಯಸ್ಸಿನ ಹುಡುಗರು? ಅವರ ಮನೆಗೆ ಯಾರು ಬೇಕಾದರೂ ಸಹಾಯ ಮಾಡಬಹುದು. ಆದರೆ ಮಗ ಮನೆಗೆ ಬರುತ್ತನಾ? ನಮ್ಮ ಮನೆಗಳಲ್ಲಿಯೂ ಸಾವಾದರು ಹಾಗೆಯೇ ಅಲ್ಲವೇ? ಎಂದು ಯಶ್‌ ವಿಷಾಧ ವ್ಯಕ್ತಪಡಿಸಿದ್ದಾರೆ.

ಅಭಿಮಾನಿಗಳು ನಿಜವಾಗಿಯೂ ಪ್ರೀತಿ ತೋರಿಸಬೇಕು ಎಂದರೆ, ಒಳ್ಳೆಯ ಕೆಲಸಗಳನ್ನು ಮಾಡಿ ನಿಮ್ಮ ಜೀವನದಲ್ಲಿ ಖುಷಿಯಾಗಿರಿ ಅದುವೇ ಸಾಕು. ಪ್ರತಿಯೊಬ್ಬ ಅಭಿಮಾನಿಯೂ ಅವರವರ ಬದುಕಿನಲ್ಲಿ ಬೆಳೆದರೆ ಅದುವೇ ಅವರು ನಮಗೆ ಅಭಿಮಾನ ತೋರಿಸಿದಂತೆ ಎಂದಿದ್ದಾರೆ ಯಶ್‌.

ಈ ಘಟನೆ ಬಳಿಕ ಪರಿಹಾರ ಘೋಷಣೆ ಮಾಡುವುದು ದೊಡ್ಡ ವಿಷಯವಲ್ಲ. ಮೃತರ ಕುಟುಂಬಕ್ಕೆ ಏನು ಅವಶ್ಯಕತೆಯಿದೆ ಅದನ್ನು ಮಾಡೋಣ. ನಾವು ಬಂದು ನೋಡುತ್ತಿರುವುದು ತಂದೆ-ತಾಯಿ ಮೇಲಿರುವ ಗೌರವಕ್ಕೆ. ಈ ಘಟನೆ ಗೊತ್ತಿದ್ದೋ ಗೊತ್ತಿಲ್ಲದೆಯೋ ನಡೆದಿದೆ. ನಮ್ಮ ಮೇಲೆ ಪ್ರೀತಿಯಿದ್ದರೆ ಜವಾಬ್ದಾರಿಂದ ನಡೆದುಕೊಳ್ಳಿ. ನಮ್ಮ ಮೇಲಿನ ಅಭಿಮಾನಕ್ಕೆ ಜೀವಹಾನಿ ಮಾಡಿಕೊಳ್ಳಬೇಡಿ ಎಂದು ರಾಕಿಂಗ್‌ ಸ್ಟಾರ್‌ ಯಶ್‌ ಮನವಿ ಮಾಡಿದ್ದಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

5 mins ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

14 mins ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

1 hour ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

3 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

6 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

6 hours ago