ಚಿತ್ರ ಮಂಜರಿ

ನಮ್ಮ ಮೇಲಿನ ಅಭಿಮಾನಕ್ಕೆ ಜೀವಹಾನಿ ಮಾಡಿಕೊಳ್ಳಬೇಡಿ: ನಟ ಯಶ್‌

ಗದಗ: ರಾಕಿಂಗ್‌ ಸ್ಟಾರ್‌ ಯಶ್‌ ಹಟ್ಟು ಹಬ್ಬವನ್ನು ಸಂಭ್ರಮಿಸಲು ಬ್ಯಾನರ್‌ ಕಟ್ಟಲು ಹೋಗಿ ನಿಧನರಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದ ಯುವಕರ ಕುಟುಂಬವನ್ನು ಭೇಟಿಯಾಗಿ, ಅವರ ತಂದೆ-ತಾಯಿಗೆ ಸಾಂತ್ವಾನ ಹೇಳಿದ್ದಾರೆ.

ಇಂದು (ಸೋಮವಾರ) ಯಶ್‌ ಜನ್ಮ ದಿನವಾಗಿದ್ದು, ಅವರಿಗೆ ಶುಭ ಕೋರಲು ಸೂರಣಗಿ ಗ್ರಾಮದ ಯುವಕರು ಬ್ಯಾನರ್‌ ಕಟ್ಟುತ್ತಿದ್ದ ವೇಳೆ ವಿದ್ಯತ್‌ ಸ್ಪರ್ಶದಿಂದ ಮೃತಪಟ್ಟದ್ದರು. ಈ ಸುದ್ದಿ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ರಾಕಿಂಗ್‌ ಸ್ಟಾರ್‌ ಯಶ್‌, ಮೃತ ಕುಟುಂಬದವರಗೆ ಸಾಂತ್ವಾನ ಹೇಳಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ಯಶ್‌, ಅಭಿಮಾನವನ್ನು ಬ್ಯಾನರ್‌ ಹಾಕಿ ಈ ರೀತಿ ವ್ಯಕ್ತಪಡಿಸಬೇಕು ಎಂಬುದನ್ನು ನಾವು ಯಾರು ಇಷ್ಟ ಪಡುವುದಿಲ್ಲ. ಪ್ರತೀ ವರ್ಷ ಹುಟ್ಟು ಹಬ್ಬ ಬಂದಾಗೆಲ್ಲಾ ಒಂದಿಲ್ಲೊಂದು ಘಟನೆಗಳು ನಡೆಯುತ್ತಲೇ ಇರುತ್ತವೆ. ನಮಗೆ ಬರ್ತ್‌ಡೇ ಎಂದರೆ ಭಯವಾಗುತ್ತಿದೆ. ನನ್ನ ಬಗ್ಗೆ ನನಗೆ ಅಸಹ್ಯವಾಗಿದೆ. ಏನಿಕ್ಕೆ ಇದು. ಅಭಿಮಾನಿಗಳು ಎಲ್ಲಿದ್ದರೂ ಅಲ್ಲಿಂದಲೇ ಅರಸಿದರೇ ಅದುವೇ ನಮಗೆ ಸಾಕು. ಅದುವೇ ನಿಜವಾದ ಬರ್ತ್‌ಡೇ ಎಂದು ರಾಕಿಂಗ್‌ ಸ್ಟಾರ್‌ ಯಶ್‌ ಅವರು ಹೇಳಿದ್ದಾರೆ.

ಅಭಿಮಾನವನ್ನು ಬ್ಯಾನರ್‌ ಕಟ್ಟುವುದು, ಬೈಕ್‌ ನಲ್ಲಿ ಚೇಸ್‌ ಮಾಡುವುದನ್ನು ಬಿಟ್ಟುಬಿಡಿ. ನನ್ನ ಬರ್ತ್‌ಡೇಯಿಂದ ಯಾರಿಗೂ ತೊಂದರೆಯಾಗಬಾರದು ಎಂದು ಈ ವರ್ಷ ಆಚರಣೆ ಮಾಡಬಾರದು ಎಂದು ನಿರ್ಧರಿಸಿದ್ದೆ. ಬೇಡ ಎಂದರೂ ಅಭಿಮಾನಿಗಳು ಬೇಜಾರ್‌ ಮಾಡಿಕೊಳ್ಳುತ್ತಾರೆ. ಈಗನ್ನು ಚಿಕ್ಕ ವಯಸ್ಸಿನ ಹುಡುಗರು? ಅವರ ಮನೆಗೆ ಯಾರು ಬೇಕಾದರೂ ಸಹಾಯ ಮಾಡಬಹುದು. ಆದರೆ ಮಗ ಮನೆಗೆ ಬರುತ್ತನಾ? ನಮ್ಮ ಮನೆಗಳಲ್ಲಿಯೂ ಸಾವಾದರು ಹಾಗೆಯೇ ಅಲ್ಲವೇ? ಎಂದು ಯಶ್‌ ವಿಷಾಧ ವ್ಯಕ್ತಪಡಿಸಿದ್ದಾರೆ.

ಅಭಿಮಾನಿಗಳು ನಿಜವಾಗಿಯೂ ಪ್ರೀತಿ ತೋರಿಸಬೇಕು ಎಂದರೆ, ಒಳ್ಳೆಯ ಕೆಲಸಗಳನ್ನು ಮಾಡಿ ನಿಮ್ಮ ಜೀವನದಲ್ಲಿ ಖುಷಿಯಾಗಿರಿ ಅದುವೇ ಸಾಕು. ಪ್ರತಿಯೊಬ್ಬ ಅಭಿಮಾನಿಯೂ ಅವರವರ ಬದುಕಿನಲ್ಲಿ ಬೆಳೆದರೆ ಅದುವೇ ಅವರು ನಮಗೆ ಅಭಿಮಾನ ತೋರಿಸಿದಂತೆ ಎಂದಿದ್ದಾರೆ ಯಶ್‌.

ಈ ಘಟನೆ ಬಳಿಕ ಪರಿಹಾರ ಘೋಷಣೆ ಮಾಡುವುದು ದೊಡ್ಡ ವಿಷಯವಲ್ಲ. ಮೃತರ ಕುಟುಂಬಕ್ಕೆ ಏನು ಅವಶ್ಯಕತೆಯಿದೆ ಅದನ್ನು ಮಾಡೋಣ. ನಾವು ಬಂದು ನೋಡುತ್ತಿರುವುದು ತಂದೆ-ತಾಯಿ ಮೇಲಿರುವ ಗೌರವಕ್ಕೆ. ಈ ಘಟನೆ ಗೊತ್ತಿದ್ದೋ ಗೊತ್ತಿಲ್ಲದೆಯೋ ನಡೆದಿದೆ. ನಮ್ಮ ಮೇಲೆ ಪ್ರೀತಿಯಿದ್ದರೆ ಜವಾಬ್ದಾರಿಂದ ನಡೆದುಕೊಳ್ಳಿ. ನಮ್ಮ ಮೇಲಿನ ಅಭಿಮಾನಕ್ಕೆ ಜೀವಹಾನಿ ಮಾಡಿಕೊಳ್ಳಬೇಡಿ ಎಂದು ರಾಕಿಂಗ್‌ ಸ್ಟಾರ್‌ ಯಶ್‌ ಮನವಿ ಮಾಡಿದ್ದಾರೆ.

andolanait

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

4 mins ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago