ಬೆಂಗಳೂರು: ಅಭಿನಯಾ ಅವರು ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಚಂದ್ರಾ ಲೇಔಟ್ ಪೊಲೀಸರು ಲುಕ್ಔಟ್ ನೋಟೀಸ್ ಜಾರಿ ಮಾಡಿದ್ದರು. ಆದರೆ ಈಗ ಅಭಿನಯಾಗೆ ಸುಪ್ರೀಂ ಕೋರ್ಟ್ನಿಂದ ಜಾಮೀನು ಸಿಕ್ಕಿದೆ.
ನಟಿ ಅಭಿನಯಾ ವರದಕ್ಷಿಣೆ ಕೇಸ್ನಲ್ಲಿ ಜೈಲು ಪಾಲಾಗುವ ಆತಂಕದಲ್ಲಿದ್ದ ನಟಿ ಅಭಿನಯಾ (Abhinaya) ಅವರಿಗೆ ಈಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ನಲ್ಲಿ ಅವರಿಗೆ ಜಾಮೀನು ದೊರೆತಿದೆ. ಅಭಿನಯಾ ಜೊತೆಗೆ ಅವರ ತಾಯಿ ಜಯಮ್ಮ ಮತ್ತು ಸಹೋದರ ಚೆಲುವರಾಜು ಕೂಡ ಜಾಮೀನು ಪಡೆದುಕೊಂಡಿದ್ದಾರೆ. ಸದ್ಯಕ್ಕೆ ಈ ಮೂವರು ನಿಟ್ಟುಸಿರು ಬಿಡುವಂತಾಗಿದೆ. ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣದಲ್ಲಿ (Dowry Case) ಅಭಿನಯಾ ಅವರಿಗೆ ಇತ್ತೀಚೆಗೆ ಎರಡು ವರ್ಷ ಜೈಲು ಶಿಕ್ಷೆ ಪ್ರಕಟ ಆಗಿತ್ತು. ಹೈಕೋರ್ಟ್ ನೀಡಿದ ಈ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ (Supreme Court) ಮೊರೆ ಹೋಗಿದ್ದಾರೆ. ಅಲ್ಲಿ ಅವರಿಗೆ ಜಾಮೀನು ಮಂಜೂರಾಗಿದೆ.
ತಲೆ ಮರೆಸಿಕೊಂಡಿದ್ದ ಅಭಿನಯಾ:
ಅತ್ತಿಗೆ ಮೇಲೆ ಕೌಟುಂಬಿಕ ದೌರ್ಜನ್ಯ ನಡೆಸಿದ್ದಕ್ಕಾಗಿ ಅಭಿನಯಾ ಹಾಗೂ ಅವರ ತಾಯಿ ಮತ್ತು ಸಹೋದರನಿಗೆ ಹೈಕೋರ್ಟ್ ಜೈಲು ಶಿಕ್ಷೆ ನೀಡಿತ್ತು. ಪೊಲೀಸರು ಈ ಮೂವರನ್ನೂ ಬಂಧಿಸಿ ಕೋರ್ಟ್ಗೆ ಹಾಜರು ಪಡಿಸಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಅವರು ತಲೆಮರೆಸಿಕೊಂಡರು. ಬಳಿಕ ಚಂದ್ರಾ ಲೇಔಟ್ ಪೊಲೀಸರು ಲುಕ್ಔಟ್ ನೋಟೀಸ್ ಜಾರಿ ಮಾಡಿದರು. ಅಪರಾಧಿಗಳ ಬಗ್ಗೆ ಸುಳಿವು ಸಿಕ್ಕರೆ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿಕೊಂಡಿರುವ ಕರಪತ್ರ/ಪೋಸ್ಟರ್ ವೈರಲ್ ಆಗಿದೆ. ಅದರ ಬೆನ್ನಲ್ಲೇ ಅಭಿನಯಾ ಕುಟುಂಬದವರು ಸುಪ್ರೀಂ ಕೋರ್ಟ್ ಮೊರೆ ಹೋದರು.
ಅಭಿನಯಾ ಕೇಸ್ ವಿಚಾರಣೆ ಮುಂದೂಡಿಕೆ:
ಅಭಿನಯಾ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ಅವರು 2002ರಲ್ಲಿ ವರದಕ್ಷಿಣೆ ಕೇಸ್ ದಾಖಲಿಸಿದ್ದರು. ಅದಕ್ಕೆ ಸಂಬಂಧಪಟ್ಟಂತೆ 2022ರ ಡಿಸೆಂಬರ್ನಲ್ಲಿ ಹೈಕೋರ್ಟ್ ತೀರ್ಪು ನೀಡಿತು. ಆದರೆ ಅದನ್ನು ಪ್ರಶ್ನಿಸಿ ಅಭಿನಯಾ ಕುಟುಂಬದವರು ಈಗ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…