ಚಿತ್ರ ಮಂಜರಿ

ವರದಕ್ಷಿಣೆ ಕೇಸ್​ : ನಟಿ ಅಭಿನಯಾಗೆ ಜಾಮೀನು

ಬೆಂಗಳೂರು: ಅಭಿನಯಾ ಅವರು ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಚಂದ್ರಾ ಲೇಔಟ್​ ಪೊಲೀಸರು ಲುಕ್​ಔಟ್​ ನೋಟೀಸ್​ ಜಾರಿ ಮಾಡಿದ್ದರು. ಆದರೆ ಈಗ ಅಭಿನಯಾಗೆ ಸುಪ್ರೀಂ ಕೋರ್ಟ್​ನಿಂದ ಜಾಮೀನು ಸಿಕ್ಕಿದೆ.

ನಟಿ ಅಭಿನಯಾ ವರದಕ್ಷಿಣೆ ಕೇಸ್​ನಲ್ಲಿ ಜೈಲು ಪಾಲಾಗುವ ಆತಂಕದಲ್ಲಿದ್ದ ನಟಿ ಅಭಿನಯಾ (Abhinaya) ಅವರಿಗೆ ಈಗ ತಾತ್ಕಾಲಿಕ ರಿಲೀಫ್​ ಸಿಕ್ಕಿದೆ. ಸುಪ್ರೀಂ ಕೋರ್ಟ್​ನಲ್ಲಿ ಅವರಿಗೆ ಜಾಮೀನು ದೊರೆತಿದೆ. ಅಭಿನಯಾ ಜೊತೆಗೆ ಅವರ ತಾಯಿ ಜಯಮ್ಮ ಮತ್ತು ಸಹೋದರ ಚೆಲುವರಾಜು ಕೂಡ ಜಾಮೀನು ಪಡೆದುಕೊಂಡಿದ್ದಾರೆ. ಸದ್ಯಕ್ಕೆ ಈ ಮೂವರು ನಿಟ್ಟುಸಿರು ಬಿಡುವಂತಾಗಿದೆ. ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣದಲ್ಲಿ (Dowry Case) ಅಭಿನಯಾ ಅವರಿಗೆ ಇತ್ತೀಚೆಗೆ ಎರಡು ವರ್ಷ ಜೈಲು ಶಿಕ್ಷೆ ಪ್ರಕಟ ಆಗಿತ್ತು. ಹೈಕೋರ್ಟ್​ ನೀಡಿದ ಈ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್​ (Supreme Court) ಮೊರೆ ಹೋಗಿದ್ದಾರೆ. ಅಲ್ಲಿ ಅವರಿಗೆ ಜಾಮೀನು ಮಂಜೂರಾಗಿದೆ.

ತಲೆ ಮರೆಸಿಕೊಂಡಿದ್ದ ಅಭಿನಯಾ:
ಅತ್ತಿಗೆ ಮೇಲೆ ಕೌಟುಂಬಿಕ ದೌರ್ಜನ್ಯ ನಡೆಸಿದ್ದಕ್ಕಾಗಿ ಅಭಿನಯಾ ಹಾಗೂ ಅವರ ತಾಯಿ ಮತ್ತು ಸಹೋದರನಿಗೆ ಹೈಕೋರ್ಟ್​ ಜೈಲು ಶಿಕ್ಷೆ ನೀಡಿತ್ತು. ಪೊಲೀಸರು ಈ ಮೂವರನ್ನೂ ಬಂಧಿಸಿ ಕೋರ್ಟ್​ಗೆ ಹಾಜರು ಪಡಿಸಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಅವರು ತಲೆಮರೆಸಿಕೊಂಡರು. ಬಳಿಕ ಚಂದ್ರಾ ಲೇಔಟ್​ ಪೊಲೀಸರು ಲುಕ್​ಔಟ್​ ನೋಟೀಸ್​ ಜಾರಿ ಮಾಡಿದರು. ಅಪರಾಧಿಗಳ ಬಗ್ಗೆ ಸುಳಿವು ಸಿಕ್ಕರೆ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿಕೊಂಡಿರುವ ಕರಪತ್ರ/ಪೋಸ್ಟರ್​ ವೈರಲ್​ ಆಗಿದೆ. ಅದರ ಬೆನ್ನಲ್ಲೇ ಅಭಿನಯಾ ಕುಟುಂಬದವರು ಸುಪ್ರೀಂ ಕೋರ್ಟ್​ ಮೊರೆ ಹೋದರು.

ಅಭಿನಯಾ ಕೇಸ್​ ವಿಚಾರಣೆ ಮುಂದೂಡಿಕೆ:
ಅಭಿನಯಾ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ಅವರು 2002ರಲ್ಲಿ ವರದಕ್ಷಿಣೆ ಕೇಸ್​ ದಾಖಲಿಸಿದ್ದರು. ಅದಕ್ಕೆ ಸಂಬಂಧಪಟ್ಟಂತೆ 2022ರ ಡಿಸೆಂಬರ್​ನಲ್ಲಿ ಹೈಕೋರ್ಟ್​ ತೀರ್ಪು ನೀಡಿತು. ಆದರೆ ಅದನ್ನು ಪ್ರಶ್ನಿಸಿ ಅಭಿನಯಾ ಕುಟುಂಬದವರು ಈಗ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ.

andolanait

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

4 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

5 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

5 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

5 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

5 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

6 hours ago