ಬೆಂಗಳೂರು: ಅಭಿನಯಾ ಅವರು ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಚಂದ್ರಾ ಲೇಔಟ್ ಪೊಲೀಸರು ಲುಕ್ಔಟ್ ನೋಟೀಸ್ ಜಾರಿ ಮಾಡಿದ್ದರು. ಆದರೆ ಈಗ ಅಭಿನಯಾಗೆ ಸುಪ್ರೀಂ ಕೋರ್ಟ್ನಿಂದ ಜಾಮೀನು ಸಿಕ್ಕಿದೆ.
ನಟಿ ಅಭಿನಯಾ ವರದಕ್ಷಿಣೆ ಕೇಸ್ನಲ್ಲಿ ಜೈಲು ಪಾಲಾಗುವ ಆತಂಕದಲ್ಲಿದ್ದ ನಟಿ ಅಭಿನಯಾ (Abhinaya) ಅವರಿಗೆ ಈಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ನಲ್ಲಿ ಅವರಿಗೆ ಜಾಮೀನು ದೊರೆತಿದೆ. ಅಭಿನಯಾ ಜೊತೆಗೆ ಅವರ ತಾಯಿ ಜಯಮ್ಮ ಮತ್ತು ಸಹೋದರ ಚೆಲುವರಾಜು ಕೂಡ ಜಾಮೀನು ಪಡೆದುಕೊಂಡಿದ್ದಾರೆ. ಸದ್ಯಕ್ಕೆ ಈ ಮೂವರು ನಿಟ್ಟುಸಿರು ಬಿಡುವಂತಾಗಿದೆ. ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣದಲ್ಲಿ (Dowry Case) ಅಭಿನಯಾ ಅವರಿಗೆ ಇತ್ತೀಚೆಗೆ ಎರಡು ವರ್ಷ ಜೈಲು ಶಿಕ್ಷೆ ಪ್ರಕಟ ಆಗಿತ್ತು. ಹೈಕೋರ್ಟ್ ನೀಡಿದ ಈ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ (Supreme Court) ಮೊರೆ ಹೋಗಿದ್ದಾರೆ. ಅಲ್ಲಿ ಅವರಿಗೆ ಜಾಮೀನು ಮಂಜೂರಾಗಿದೆ.
ತಲೆ ಮರೆಸಿಕೊಂಡಿದ್ದ ಅಭಿನಯಾ:
ಅತ್ತಿಗೆ ಮೇಲೆ ಕೌಟುಂಬಿಕ ದೌರ್ಜನ್ಯ ನಡೆಸಿದ್ದಕ್ಕಾಗಿ ಅಭಿನಯಾ ಹಾಗೂ ಅವರ ತಾಯಿ ಮತ್ತು ಸಹೋದರನಿಗೆ ಹೈಕೋರ್ಟ್ ಜೈಲು ಶಿಕ್ಷೆ ನೀಡಿತ್ತು. ಪೊಲೀಸರು ಈ ಮೂವರನ್ನೂ ಬಂಧಿಸಿ ಕೋರ್ಟ್ಗೆ ಹಾಜರು ಪಡಿಸಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಅವರು ತಲೆಮರೆಸಿಕೊಂಡರು. ಬಳಿಕ ಚಂದ್ರಾ ಲೇಔಟ್ ಪೊಲೀಸರು ಲುಕ್ಔಟ್ ನೋಟೀಸ್ ಜಾರಿ ಮಾಡಿದರು. ಅಪರಾಧಿಗಳ ಬಗ್ಗೆ ಸುಳಿವು ಸಿಕ್ಕರೆ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿಕೊಂಡಿರುವ ಕರಪತ್ರ/ಪೋಸ್ಟರ್ ವೈರಲ್ ಆಗಿದೆ. ಅದರ ಬೆನ್ನಲ್ಲೇ ಅಭಿನಯಾ ಕುಟುಂಬದವರು ಸುಪ್ರೀಂ ಕೋರ್ಟ್ ಮೊರೆ ಹೋದರು.
ಅಭಿನಯಾ ಕೇಸ್ ವಿಚಾರಣೆ ಮುಂದೂಡಿಕೆ:
ಅಭಿನಯಾ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ಅವರು 2002ರಲ್ಲಿ ವರದಕ್ಷಿಣೆ ಕೇಸ್ ದಾಖಲಿಸಿದ್ದರು. ಅದಕ್ಕೆ ಸಂಬಂಧಪಟ್ಟಂತೆ 2022ರ ಡಿಸೆಂಬರ್ನಲ್ಲಿ ಹೈಕೋರ್ಟ್ ತೀರ್ಪು ನೀಡಿತು. ಆದರೆ ಅದನ್ನು ಪ್ರಶ್ನಿಸಿ ಅಭಿನಯಾ ಕುಟುಂಬದವರು ಈಗ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…