ಚಿತ್ರ ಮಂಜರಿ

ವರದಕ್ಷಿಣೆ ಕೇಸ್​ : ನಟಿ ಅಭಿನಯಾಗೆ ಜಾಮೀನು

ಬೆಂಗಳೂರು: ಅಭಿನಯಾ ಅವರು ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಚಂದ್ರಾ ಲೇಔಟ್​ ಪೊಲೀಸರು ಲುಕ್​ಔಟ್​ ನೋಟೀಸ್​ ಜಾರಿ ಮಾಡಿದ್ದರು. ಆದರೆ ಈಗ ಅಭಿನಯಾಗೆ ಸುಪ್ರೀಂ ಕೋರ್ಟ್​ನಿಂದ ಜಾಮೀನು ಸಿಕ್ಕಿದೆ.

ನಟಿ ಅಭಿನಯಾ ವರದಕ್ಷಿಣೆ ಕೇಸ್​ನಲ್ಲಿ ಜೈಲು ಪಾಲಾಗುವ ಆತಂಕದಲ್ಲಿದ್ದ ನಟಿ ಅಭಿನಯಾ (Abhinaya) ಅವರಿಗೆ ಈಗ ತಾತ್ಕಾಲಿಕ ರಿಲೀಫ್​ ಸಿಕ್ಕಿದೆ. ಸುಪ್ರೀಂ ಕೋರ್ಟ್​ನಲ್ಲಿ ಅವರಿಗೆ ಜಾಮೀನು ದೊರೆತಿದೆ. ಅಭಿನಯಾ ಜೊತೆಗೆ ಅವರ ತಾಯಿ ಜಯಮ್ಮ ಮತ್ತು ಸಹೋದರ ಚೆಲುವರಾಜು ಕೂಡ ಜಾಮೀನು ಪಡೆದುಕೊಂಡಿದ್ದಾರೆ. ಸದ್ಯಕ್ಕೆ ಈ ಮೂವರು ನಿಟ್ಟುಸಿರು ಬಿಡುವಂತಾಗಿದೆ. ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣದಲ್ಲಿ (Dowry Case) ಅಭಿನಯಾ ಅವರಿಗೆ ಇತ್ತೀಚೆಗೆ ಎರಡು ವರ್ಷ ಜೈಲು ಶಿಕ್ಷೆ ಪ್ರಕಟ ಆಗಿತ್ತು. ಹೈಕೋರ್ಟ್​ ನೀಡಿದ ಈ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್​ (Supreme Court) ಮೊರೆ ಹೋಗಿದ್ದಾರೆ. ಅಲ್ಲಿ ಅವರಿಗೆ ಜಾಮೀನು ಮಂಜೂರಾಗಿದೆ.

ತಲೆ ಮರೆಸಿಕೊಂಡಿದ್ದ ಅಭಿನಯಾ:
ಅತ್ತಿಗೆ ಮೇಲೆ ಕೌಟುಂಬಿಕ ದೌರ್ಜನ್ಯ ನಡೆಸಿದ್ದಕ್ಕಾಗಿ ಅಭಿನಯಾ ಹಾಗೂ ಅವರ ತಾಯಿ ಮತ್ತು ಸಹೋದರನಿಗೆ ಹೈಕೋರ್ಟ್​ ಜೈಲು ಶಿಕ್ಷೆ ನೀಡಿತ್ತು. ಪೊಲೀಸರು ಈ ಮೂವರನ್ನೂ ಬಂಧಿಸಿ ಕೋರ್ಟ್​ಗೆ ಹಾಜರು ಪಡಿಸಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಅವರು ತಲೆಮರೆಸಿಕೊಂಡರು. ಬಳಿಕ ಚಂದ್ರಾ ಲೇಔಟ್​ ಪೊಲೀಸರು ಲುಕ್​ಔಟ್​ ನೋಟೀಸ್​ ಜಾರಿ ಮಾಡಿದರು. ಅಪರಾಧಿಗಳ ಬಗ್ಗೆ ಸುಳಿವು ಸಿಕ್ಕರೆ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿಕೊಂಡಿರುವ ಕರಪತ್ರ/ಪೋಸ್ಟರ್​ ವೈರಲ್​ ಆಗಿದೆ. ಅದರ ಬೆನ್ನಲ್ಲೇ ಅಭಿನಯಾ ಕುಟುಂಬದವರು ಸುಪ್ರೀಂ ಕೋರ್ಟ್​ ಮೊರೆ ಹೋದರು.

ಅಭಿನಯಾ ಕೇಸ್​ ವಿಚಾರಣೆ ಮುಂದೂಡಿಕೆ:
ಅಭಿನಯಾ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ಅವರು 2002ರಲ್ಲಿ ವರದಕ್ಷಿಣೆ ಕೇಸ್​ ದಾಖಲಿಸಿದ್ದರು. ಅದಕ್ಕೆ ಸಂಬಂಧಪಟ್ಟಂತೆ 2022ರ ಡಿಸೆಂಬರ್​ನಲ್ಲಿ ಹೈಕೋರ್ಟ್​ ತೀರ್ಪು ನೀಡಿತು. ಆದರೆ ಅದನ್ನು ಪ್ರಶ್ನಿಸಿ ಅಭಿನಯಾ ಕುಟುಂಬದವರು ಈಗ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ.

andolanait

Recent Posts

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

5 mins ago

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

10 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

14 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

14 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

15 hours ago