ಚಿತ್ರ ಮಂಜರಿ

ವರದಕ್ಷಿಣೆ ಕೇಸ್​ : ನಟಿ ಅಭಿನಯಾಗೆ ಜಾಮೀನು

ಬೆಂಗಳೂರು: ಅಭಿನಯಾ ಅವರು ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಚಂದ್ರಾ ಲೇಔಟ್​ ಪೊಲೀಸರು ಲುಕ್​ಔಟ್​ ನೋಟೀಸ್​ ಜಾರಿ ಮಾಡಿದ್ದರು. ಆದರೆ ಈಗ ಅಭಿನಯಾಗೆ ಸುಪ್ರೀಂ ಕೋರ್ಟ್​ನಿಂದ ಜಾಮೀನು ಸಿಕ್ಕಿದೆ.

ನಟಿ ಅಭಿನಯಾ ವರದಕ್ಷಿಣೆ ಕೇಸ್​ನಲ್ಲಿ ಜೈಲು ಪಾಲಾಗುವ ಆತಂಕದಲ್ಲಿದ್ದ ನಟಿ ಅಭಿನಯಾ (Abhinaya) ಅವರಿಗೆ ಈಗ ತಾತ್ಕಾಲಿಕ ರಿಲೀಫ್​ ಸಿಕ್ಕಿದೆ. ಸುಪ್ರೀಂ ಕೋರ್ಟ್​ನಲ್ಲಿ ಅವರಿಗೆ ಜಾಮೀನು ದೊರೆತಿದೆ. ಅಭಿನಯಾ ಜೊತೆಗೆ ಅವರ ತಾಯಿ ಜಯಮ್ಮ ಮತ್ತು ಸಹೋದರ ಚೆಲುವರಾಜು ಕೂಡ ಜಾಮೀನು ಪಡೆದುಕೊಂಡಿದ್ದಾರೆ. ಸದ್ಯಕ್ಕೆ ಈ ಮೂವರು ನಿಟ್ಟುಸಿರು ಬಿಡುವಂತಾಗಿದೆ. ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣದಲ್ಲಿ (Dowry Case) ಅಭಿನಯಾ ಅವರಿಗೆ ಇತ್ತೀಚೆಗೆ ಎರಡು ವರ್ಷ ಜೈಲು ಶಿಕ್ಷೆ ಪ್ರಕಟ ಆಗಿತ್ತು. ಹೈಕೋರ್ಟ್​ ನೀಡಿದ ಈ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್​ (Supreme Court) ಮೊರೆ ಹೋಗಿದ್ದಾರೆ. ಅಲ್ಲಿ ಅವರಿಗೆ ಜಾಮೀನು ಮಂಜೂರಾಗಿದೆ.

ತಲೆ ಮರೆಸಿಕೊಂಡಿದ್ದ ಅಭಿನಯಾ:
ಅತ್ತಿಗೆ ಮೇಲೆ ಕೌಟುಂಬಿಕ ದೌರ್ಜನ್ಯ ನಡೆಸಿದ್ದಕ್ಕಾಗಿ ಅಭಿನಯಾ ಹಾಗೂ ಅವರ ತಾಯಿ ಮತ್ತು ಸಹೋದರನಿಗೆ ಹೈಕೋರ್ಟ್​ ಜೈಲು ಶಿಕ್ಷೆ ನೀಡಿತ್ತು. ಪೊಲೀಸರು ಈ ಮೂವರನ್ನೂ ಬಂಧಿಸಿ ಕೋರ್ಟ್​ಗೆ ಹಾಜರು ಪಡಿಸಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಅವರು ತಲೆಮರೆಸಿಕೊಂಡರು. ಬಳಿಕ ಚಂದ್ರಾ ಲೇಔಟ್​ ಪೊಲೀಸರು ಲುಕ್​ಔಟ್​ ನೋಟೀಸ್​ ಜಾರಿ ಮಾಡಿದರು. ಅಪರಾಧಿಗಳ ಬಗ್ಗೆ ಸುಳಿವು ಸಿಕ್ಕರೆ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿಕೊಂಡಿರುವ ಕರಪತ್ರ/ಪೋಸ್ಟರ್​ ವೈರಲ್​ ಆಗಿದೆ. ಅದರ ಬೆನ್ನಲ್ಲೇ ಅಭಿನಯಾ ಕುಟುಂಬದವರು ಸುಪ್ರೀಂ ಕೋರ್ಟ್​ ಮೊರೆ ಹೋದರು.

ಅಭಿನಯಾ ಕೇಸ್​ ವಿಚಾರಣೆ ಮುಂದೂಡಿಕೆ:
ಅಭಿನಯಾ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ಅವರು 2002ರಲ್ಲಿ ವರದಕ್ಷಿಣೆ ಕೇಸ್​ ದಾಖಲಿಸಿದ್ದರು. ಅದಕ್ಕೆ ಸಂಬಂಧಪಟ್ಟಂತೆ 2022ರ ಡಿಸೆಂಬರ್​ನಲ್ಲಿ ಹೈಕೋರ್ಟ್​ ತೀರ್ಪು ನೀಡಿತು. ಆದರೆ ಅದನ್ನು ಪ್ರಶ್ನಿಸಿ ಅಭಿನಯಾ ಕುಟುಂಬದವರು ಈಗ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ.

andolanait

Recent Posts

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

9 mins ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

28 mins ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

1 hour ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

2 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

2 hours ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

2 hours ago