ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ನಡುವಿನ ನಿಶ್ಚಿತಾರ್ಥ ಇದೇ ಫೆಬ್ರವರಿಯಲ್ಲಿ ನಡೆಯಲಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಇದೀಗ ಈ ಬಗ್ಗೆ ಸ್ವತಃ ನಟ ವಿಜಯ್ ದೇವರಕೊಂಡ ಮೌನ ಮುರಿದಿದ್ದಾರೆ.
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ವಾಸವಿದ್ದಾರೆ, ಒಟ್ಟಿಗೆ ಸುತ್ತಾಡುತ್ತಿದ್ದಾರೆ ಎಂಬುದಕ್ಕೆ ಹಲವು ಸಾಕ್ಷಿಗಳು ಸಿಕ್ಕಿವೆ. ಆದರೆ, ಇದನ್ನು ಒಪ್ಪಿಕೊಳ್ಳೋಕೆ ಅವರು ರೆಡಿ ಇಲ್ಲ. ‘ನಾವು ಬೆಸ್ಟ್ ಫ್ರೆಂಡ್ಸ್’ ಎಂದೇ ಹೇಳುತ್ತಾ ಬರುತ್ತಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇವರಿಬ್ಬರ ಮದುವೆ ಬಗ್ಗೆ ಹಲವಾರು ಊಹಾಪೋಹಗಳು ಹರಿದಾಡುತ್ತಿದ್ದು, ಈ ಬಗ್ಗೆ ನಟ ಮೌನ ಮುರಿದು ಮಾತನಾಡಿದ್ದಾರೆ.
‘ನಾನು ಫೆಬ್ರವರಿಯಲ್ಲಿ ನಿಶ್ಚಿತಾರ್ಥವಾಗಲೀ, ಮದುವೆ ಆಗಲೀ ಆಗುತ್ತಿಲ್ಲ. ಮಾಧ್ಯಮದವರು ಎರಡು ವರ್ಷಕ್ಕೊಮ್ಮೆ ನನಗೆ ಮದುವೆ ಮಾಡಲು ಬಯಸುತ್ತಾರೆ ಅನಿಸುತ್ತಿದೆ. ಪ್ರತಿ ವರ್ಷ ಈ ವದಂತಿ ಕೇಳುತ್ತೇನೆ. ಅವರು ನನಗೆ ಮದುವೆ ಮಾಡಿಸಲು ಕಾಯುತ್ತಿರುತ್ತಾರೆ’ ಎಂದು ಹೇಳುವ ಮೂಲಕ ವಿಜಯ್ ದೇವರಕೊಂಡ ಎಲ್ಲಾ ವದಂತಿಗೆ ಬ್ರೇಕ್ ಹಾಕಿದ್ದಾರೆ.
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ದೇವರಕೊಂಡ ನಟಿಸುತ್ತಿರುವ ‘ಫ್ಯಾಮಿಲಿ ಸ್ಟಾರ್’ ಸಿನಿಮಾದಲ್ಲಿ ರಶ್ಮಿಕಾ ವಿಶೇಷ ಸಾಂಗ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…