ಚಿತ್ರ ಮಂಜರಿ

ಫೆಬ್ರವರಿಯಲ್ಲಿ ರಶ್ಮಿಕಾರೊಂದಿಗೆ ನಿಶ್ಚಿತಾರ್ಥ ವಿಚಾರ: ಕೊನೆಗೂ ಮೌನ ಮುರಿದ ದೇವರಕೊಂಡ

ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ನಡುವಿನ ನಿಶ್ಚಿತಾರ್ಥ ಇದೇ ಫೆಬ್ರವರಿಯಲ್ಲಿ ನಡೆಯಲಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಇದೀಗ ಈ ಬಗ್ಗೆ ಸ್ವತಃ ನಟ ವಿಜಯ್‌ ದೇವರಕೊಂಡ ಮೌನ ಮುರಿದಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ವಾಸವಿದ್ದಾರೆ, ಒಟ್ಟಿಗೆ ಸುತ್ತಾಡುತ್ತಿದ್ದಾರೆ ಎಂಬುದಕ್ಕೆ ಹಲವು ಸಾಕ್ಷಿಗಳು ಸಿಕ್ಕಿವೆ. ಆದರೆ, ಇದನ್ನು ಒಪ್ಪಿಕೊಳ್ಳೋಕೆ ಅವರು ರೆಡಿ ಇಲ್ಲ. ‘ನಾವು ಬೆಸ್ಟ್ ಫ್ರೆಂಡ್ಸ್’ ಎಂದೇ ಹೇಳುತ್ತಾ ಬರುತ್ತಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇವರಿಬ್ಬರ ಮದುವೆ ಬಗ್ಗೆ ಹಲವಾರು ಊಹಾಪೋಹಗಳು ಹರಿದಾಡುತ್ತಿದ್ದು, ಈ ಬಗ್ಗೆ ನಟ ಮೌನ ಮುರಿದು ಮಾತನಾಡಿದ್ದಾರೆ.

‘ನಾನು ಫೆಬ್ರವರಿಯಲ್ಲಿ ನಿಶ್ಚಿತಾರ್ಥವಾಗಲೀ, ಮದುವೆ ಆಗಲೀ ಆಗುತ್ತಿಲ್ಲ. ಮಾಧ್ಯಮದವರು ಎರಡು ವರ್ಷಕ್ಕೊಮ್ಮೆ ನನಗೆ ಮದುವೆ ಮಾಡಲು ಬಯಸುತ್ತಾರೆ ಅನಿಸುತ್ತಿದೆ. ಪ್ರತಿ ವರ್ಷ ಈ ವದಂತಿ ಕೇಳುತ್ತೇನೆ. ಅವರು ನನಗೆ ಮದುವೆ ಮಾಡಿಸಲು ಕಾಯುತ್ತಿರುತ್ತಾರೆ’ ಎಂದು ಹೇಳುವ ಮೂಲಕ ವಿಜಯ್‌ ದೇವರಕೊಂಡ ಎಲ್ಲಾ ವದಂತಿಗೆ ಬ್ರೇಕ್ ಹಾಕಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ದೇವರಕೊಂಡ ನಟಿಸುತ್ತಿರುವ ‘ಫ್ಯಾಮಿಲಿ ಸ್ಟಾರ್’ ಸಿನಿಮಾದಲ್ಲಿ ರಶ್ಮಿಕಾ ವಿಶೇಷ ಸಾಂಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

andolanait

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

6 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

6 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

8 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

8 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

8 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

8 hours ago