ಚಿತ್ರ ಮಂಜರಿ

ಫೆಬ್ರವರಿಯಲ್ಲಿ ರಶ್ಮಿಕಾರೊಂದಿಗೆ ನಿಶ್ಚಿತಾರ್ಥ ವಿಚಾರ: ಕೊನೆಗೂ ಮೌನ ಮುರಿದ ದೇವರಕೊಂಡ

ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ನಡುವಿನ ನಿಶ್ಚಿತಾರ್ಥ ಇದೇ ಫೆಬ್ರವರಿಯಲ್ಲಿ ನಡೆಯಲಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಇದೀಗ ಈ ಬಗ್ಗೆ ಸ್ವತಃ ನಟ ವಿಜಯ್‌ ದೇವರಕೊಂಡ ಮೌನ ಮುರಿದಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ವಾಸವಿದ್ದಾರೆ, ಒಟ್ಟಿಗೆ ಸುತ್ತಾಡುತ್ತಿದ್ದಾರೆ ಎಂಬುದಕ್ಕೆ ಹಲವು ಸಾಕ್ಷಿಗಳು ಸಿಕ್ಕಿವೆ. ಆದರೆ, ಇದನ್ನು ಒಪ್ಪಿಕೊಳ್ಳೋಕೆ ಅವರು ರೆಡಿ ಇಲ್ಲ. ‘ನಾವು ಬೆಸ್ಟ್ ಫ್ರೆಂಡ್ಸ್’ ಎಂದೇ ಹೇಳುತ್ತಾ ಬರುತ್ತಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇವರಿಬ್ಬರ ಮದುವೆ ಬಗ್ಗೆ ಹಲವಾರು ಊಹಾಪೋಹಗಳು ಹರಿದಾಡುತ್ತಿದ್ದು, ಈ ಬಗ್ಗೆ ನಟ ಮೌನ ಮುರಿದು ಮಾತನಾಡಿದ್ದಾರೆ.

‘ನಾನು ಫೆಬ್ರವರಿಯಲ್ಲಿ ನಿಶ್ಚಿತಾರ್ಥವಾಗಲೀ, ಮದುವೆ ಆಗಲೀ ಆಗುತ್ತಿಲ್ಲ. ಮಾಧ್ಯಮದವರು ಎರಡು ವರ್ಷಕ್ಕೊಮ್ಮೆ ನನಗೆ ಮದುವೆ ಮಾಡಲು ಬಯಸುತ್ತಾರೆ ಅನಿಸುತ್ತಿದೆ. ಪ್ರತಿ ವರ್ಷ ಈ ವದಂತಿ ಕೇಳುತ್ತೇನೆ. ಅವರು ನನಗೆ ಮದುವೆ ಮಾಡಿಸಲು ಕಾಯುತ್ತಿರುತ್ತಾರೆ’ ಎಂದು ಹೇಳುವ ಮೂಲಕ ವಿಜಯ್‌ ದೇವರಕೊಂಡ ಎಲ್ಲಾ ವದಂತಿಗೆ ಬ್ರೇಕ್ ಹಾಕಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ದೇವರಕೊಂಡ ನಟಿಸುತ್ತಿರುವ ‘ಫ್ಯಾಮಿಲಿ ಸ್ಟಾರ್’ ಸಿನಿಮಾದಲ್ಲಿ ರಶ್ಮಿಕಾ ವಿಶೇಷ ಸಾಂಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

3 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

5 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

5 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

9 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

14 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

14 hours ago