ಚಿತ್ರ ಮಂಜರಿ

ಫೆಬ್ರವರಿಯಲ್ಲಿ ರಶ್ಮಿಕಾರೊಂದಿಗೆ ನಿಶ್ಚಿತಾರ್ಥ ವಿಚಾರ: ಕೊನೆಗೂ ಮೌನ ಮುರಿದ ದೇವರಕೊಂಡ

ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ನಡುವಿನ ನಿಶ್ಚಿತಾರ್ಥ ಇದೇ ಫೆಬ್ರವರಿಯಲ್ಲಿ ನಡೆಯಲಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಇದೀಗ ಈ ಬಗ್ಗೆ ಸ್ವತಃ ನಟ ವಿಜಯ್‌ ದೇವರಕೊಂಡ ಮೌನ ಮುರಿದಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ವಾಸವಿದ್ದಾರೆ, ಒಟ್ಟಿಗೆ ಸುತ್ತಾಡುತ್ತಿದ್ದಾರೆ ಎಂಬುದಕ್ಕೆ ಹಲವು ಸಾಕ್ಷಿಗಳು ಸಿಕ್ಕಿವೆ. ಆದರೆ, ಇದನ್ನು ಒಪ್ಪಿಕೊಳ್ಳೋಕೆ ಅವರು ರೆಡಿ ಇಲ್ಲ. ‘ನಾವು ಬೆಸ್ಟ್ ಫ್ರೆಂಡ್ಸ್’ ಎಂದೇ ಹೇಳುತ್ತಾ ಬರುತ್ತಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇವರಿಬ್ಬರ ಮದುವೆ ಬಗ್ಗೆ ಹಲವಾರು ಊಹಾಪೋಹಗಳು ಹರಿದಾಡುತ್ತಿದ್ದು, ಈ ಬಗ್ಗೆ ನಟ ಮೌನ ಮುರಿದು ಮಾತನಾಡಿದ್ದಾರೆ.

‘ನಾನು ಫೆಬ್ರವರಿಯಲ್ಲಿ ನಿಶ್ಚಿತಾರ್ಥವಾಗಲೀ, ಮದುವೆ ಆಗಲೀ ಆಗುತ್ತಿಲ್ಲ. ಮಾಧ್ಯಮದವರು ಎರಡು ವರ್ಷಕ್ಕೊಮ್ಮೆ ನನಗೆ ಮದುವೆ ಮಾಡಲು ಬಯಸುತ್ತಾರೆ ಅನಿಸುತ್ತಿದೆ. ಪ್ರತಿ ವರ್ಷ ಈ ವದಂತಿ ಕೇಳುತ್ತೇನೆ. ಅವರು ನನಗೆ ಮದುವೆ ಮಾಡಿಸಲು ಕಾಯುತ್ತಿರುತ್ತಾರೆ’ ಎಂದು ಹೇಳುವ ಮೂಲಕ ವಿಜಯ್‌ ದೇವರಕೊಂಡ ಎಲ್ಲಾ ವದಂತಿಗೆ ಬ್ರೇಕ್ ಹಾಕಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ದೇವರಕೊಂಡ ನಟಿಸುತ್ತಿರುವ ‘ಫ್ಯಾಮಿಲಿ ಸ್ಟಾರ್’ ಸಿನಿಮಾದಲ್ಲಿ ರಶ್ಮಿಕಾ ವಿಶೇಷ ಸಾಂಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

10 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

10 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

10 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

10 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

10 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

10 hours ago