ಚಿತ್ರ ಮಂಜರಿ

Etoile d’Or award ಪ್ರಶಸ್ತಿ ಪಡೆದ ಬಾಲಿವುಡ್ ನಟ ರಣ್​ವೀರ್ ಸಿಂಗ್

ಮರ್ಕೆಚ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ನಟ ರಣ್​ವೀರ್​ ಸಿಂಗ್ ಭಾಗಿಯಾಗಿ ಗೌರವಕ್ಕೆ ಪಾತ್ರರಾಗಿದ್ದಾರೆ. ಎಟೊಯಿಲ್ ಡಿ’ಓರ್ ಪ್ರಶಸ್ತಿ ( Etoile d’Or award) ಪಡೆದಿದ್ದಾರೆ.
ಮಾಹಿತಿ ಪ್ರಕಾರ, ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ, ರಣ್​ವೀರ್ ಸಿಂಗ್​​ ಅದ್ಭುತ ನೃತ್ಯ ಮಾಡಿದ್ದಾರೆ. ಬಳಿಕ ನಟನಿಗೆ ಮರ್ಕೆಚ್​​ನ ಎಟೊಯಿಲ್ ಡಿ’ಒರ್ ಟ್ರೋಫಿಯನ್ನು ನೀಡಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಅವರು, “ನಾನು ನನ್ನ ಸುತ್ತಲಿನ ಪ್ರಪಂಚವನ್ನು ನೋಡಿದಾಗ, ಅದು ಅತ್ಯಂತ ಕರಾಳ ಅವಧಿ ಎನಿಸಿತು. ನಾನು ಎಲ್ಲಾ ರೀತಿಯ ನೋವು ಮತ್ತು ಸಂಕಟಗಳನ್ನು ನೋಡಿದ್ದೇನೆ. ನನ್ನ ಸಾಮರ್ಥ್ಯದಲ್ಲಿ, ಮನೋರಂಜನಾಕಾರನಾಗಿ ನಾನು ಮಾಡಬಹುದಾದ ಅತ್ಯುತ್ತಮ ಕೆಲಸವೆಂದರೆ ಜನರ ಹೊರೆಯನ್ನು ಹಗುರಗೊಳಿಸುವುದು, ನಾನು ಆ ಕೆಲಸವನ್ನು ಮಾಡುತ್ತಿದ್ದೇನೆಂದು ನಂಬಿದ್ದೇನೆ” ಎಂದು ತಿಳಿಸಿದರು.ನಟ ರಣ್​ವೀರ್​ ಸಿಂಗ್ಉದ್ಘಾಟನಾ ಸಮಾರಂಭದ ನಂತರ ಅವರು ಮರ್ಕೆಚ್‌ನ ಪ್ರಸಿದ್ಧ ಜೆಮಾ ಎಲ್ ಎಫ್‌ನಾ ಸ್ಕ್ವೇರ್‌ಗೆ ತೆರಳಿದರು. ಅಲ್ಲಿ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ, ರಣ್​​​ವೀರ್​ ಅಭಿನಯದ ‘ಬಾಜಿರಾವ್ ಮಸ್ತಾನಿ’ ಚಿತ್ರವನ್ನು ಪ್ರದರ್ಶಿಸಲಾಯಿತು.

ಚಿತ್ರಕೃಪೆ : ಇಂಡಿಯಾ ಟಿವಿ

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

4 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

4 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

5 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

7 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

7 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

7 hours ago