ನಟ ವಿಜಯ್ ರಾಘವೇಂದ್ರ ಅವರು ಅಗಲಿದ ಪತ್ನಿ ಸ್ಪಂದನಾ ಅವರನ್ನು ನೆನಪಿಸಿಕೊಂಡು ಮತ್ತೆ ಭಾವುಕ ಸಾಲುಗಳನ್ನು ಬರೆದಿದ್ದಾರೆ. ಮಾಸಗಳು ಕಳೆದರೂ ಮಾಸದು ಹೃದಯದೊಳಗಿನ ಈ ಮಂದಹಾಸ… ಐ ಲವ್ ಯೂ ಚಿನ್ನಾ ಎಂದು ಭಾವುಕ ಸಾಲುಗಳನ್ನು ಬರೆದು, ಹೆಂಡತಿ ಜೊತೆಗಿನ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ.
ಈ ಹಿಂದೆಯೂ ವಿಜಯ ರಾಘವೇಂದ್ರ ತಮ್ಮ 16ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಈ ರೀತಿಯ ಭಾವುಕ ಸಾಲುಗಳನ್ನು ಬರೆದಿದ್ದರು. ಪ್ರತಿ ವರ್ಷವೂ ಸಂಭ್ರಮದಿಂದ ಆ ದಿನವನ್ನು ಬರಮಾಡಿಕೊಳ್ಳುತ್ತಿದ್ದವರು, ಸ್ಪಂದನಾ ಹೃದಯಾಘಾತದಿಂದ ನಿಧನರಾಗಿ, ವಿಜಯ್ ಅವರ ಎದೆಯಲ್ಲಿ ಆರದ ಗಾಯ ಮಾಡಿ ಹೋಗಿದ್ದಾರೆ. ಅಗಲಿದ ಪತ್ನಿಗೆ ವಿಜಯ ರಾಘವೇಂದ್ರ ಭಾವುಕ ಸಾಲುಗಳ ಮೂಲಕ ವಿಶ್ ಮಾಡಿದ್ದರು.
ಭಾವುಕ ಸಾಲುಗಳನ್ನು ಬರೆದು, ಅದಕ್ಕೆ ವಿಡಿಯೋ ಸ್ಪರ್ಶ ಕೂಡ ನೀಡಿರುವ ವಿಜಯ ರಾಘವೇಂದ್ರ ಚಿನ್ನ, ಇಣುಕು ನೋಟ ಬೀರಿ ಹೋದೆ ಬದುಕಿನ ಅಂಗಳದಲಿ ಎಲ್ಲೆ ಮೀರಿ ಒಲವ ನೀಡಿದೆ ಎದೆಯ ಅಂತರಾಳದಲಿ ಬದುಕನ್ನು ಕಟ್ಟಿ ಸರ್ವಸ್ವವಾದೆ ಉಸಿರಲ್ಲಿ ಬೆರೆತು ಜೀವಂತವಾದೆ ಮುದ್ದಾದ ನಗುವಿನಲ್ಲಿದ್ದ ಶಕ್ತಿ ಪರ್ವತದಷ್ಟು ಮರೆಯದೆ ತೊರೆಯದೆ ಎದೆಗೊತ್ತಿ ಪ್ರೀತಿಸುವೆ ಎಂದು ಬರೆದುಕೊಂಡಿದ್ದರು.
ಪತ್ನಿಯ ನಿಧನದಿಂದ ಮೌನಕ್ಕೆ ಶರಣಾಗಿದ್ದ ವಿಜಯ್ ಆನಂತರ ಸ್ಪಂದನಾ ಬಗ್ಗೆ ಭಾವುಕರಾಗಿ ವೀಡಿಯೋ ಮೂಲಕ ಮನದಾಳದ ಭಾವನೆಗಳನ್ನ ಅಕ್ಷರ ರೂಪಕ್ಕೆ ಇಳಿಸಿದ್ದರು. ಸ್ಪಂದನಾ ನೆನಪನ್ನ ತಮ್ಮೊಳಗಿನ ಪ್ರೀತಿಯನ್ನು ಅವರು ಬಿಚ್ಚಿಟ್ಟಿದ್ದರು. ಆ ಸಾಲುಗಳು ಕೂಡ ಅನೇಕರನ್ನು ಭಾವುಕರನ್ನಾಗಿಸಿದ್ದವು.
ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.…
ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬…
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…