ನಟ ವಿಜಯ್ ರಾಘವೇಂದ್ರ ಅವರು ಅಗಲಿದ ಪತ್ನಿ ಸ್ಪಂದನಾ ಅವರನ್ನು ನೆನಪಿಸಿಕೊಂಡು ಮತ್ತೆ ಭಾವುಕ ಸಾಲುಗಳನ್ನು ಬರೆದಿದ್ದಾರೆ. ಮಾಸಗಳು ಕಳೆದರೂ ಮಾಸದು ಹೃದಯದೊಳಗಿನ ಈ ಮಂದಹಾಸ… ಐ ಲವ್ ಯೂ ಚಿನ್ನಾ ಎಂದು ಭಾವುಕ ಸಾಲುಗಳನ್ನು ಬರೆದು, ಹೆಂಡತಿ ಜೊತೆಗಿನ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ.
ಈ ಹಿಂದೆಯೂ ವಿಜಯ ರಾಘವೇಂದ್ರ ತಮ್ಮ 16ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಈ ರೀತಿಯ ಭಾವುಕ ಸಾಲುಗಳನ್ನು ಬರೆದಿದ್ದರು. ಪ್ರತಿ ವರ್ಷವೂ ಸಂಭ್ರಮದಿಂದ ಆ ದಿನವನ್ನು ಬರಮಾಡಿಕೊಳ್ಳುತ್ತಿದ್ದವರು, ಸ್ಪಂದನಾ ಹೃದಯಾಘಾತದಿಂದ ನಿಧನರಾಗಿ, ವಿಜಯ್ ಅವರ ಎದೆಯಲ್ಲಿ ಆರದ ಗಾಯ ಮಾಡಿ ಹೋಗಿದ್ದಾರೆ. ಅಗಲಿದ ಪತ್ನಿಗೆ ವಿಜಯ ರಾಘವೇಂದ್ರ ಭಾವುಕ ಸಾಲುಗಳ ಮೂಲಕ ವಿಶ್ ಮಾಡಿದ್ದರು.
ಭಾವುಕ ಸಾಲುಗಳನ್ನು ಬರೆದು, ಅದಕ್ಕೆ ವಿಡಿಯೋ ಸ್ಪರ್ಶ ಕೂಡ ನೀಡಿರುವ ವಿಜಯ ರಾಘವೇಂದ್ರ ಚಿನ್ನ, ಇಣುಕು ನೋಟ ಬೀರಿ ಹೋದೆ ಬದುಕಿನ ಅಂಗಳದಲಿ ಎಲ್ಲೆ ಮೀರಿ ಒಲವ ನೀಡಿದೆ ಎದೆಯ ಅಂತರಾಳದಲಿ ಬದುಕನ್ನು ಕಟ್ಟಿ ಸರ್ವಸ್ವವಾದೆ ಉಸಿರಲ್ಲಿ ಬೆರೆತು ಜೀವಂತವಾದೆ ಮುದ್ದಾದ ನಗುವಿನಲ್ಲಿದ್ದ ಶಕ್ತಿ ಪರ್ವತದಷ್ಟು ಮರೆಯದೆ ತೊರೆಯದೆ ಎದೆಗೊತ್ತಿ ಪ್ರೀತಿಸುವೆ ಎಂದು ಬರೆದುಕೊಂಡಿದ್ದರು.
ಪತ್ನಿಯ ನಿಧನದಿಂದ ಮೌನಕ್ಕೆ ಶರಣಾಗಿದ್ದ ವಿಜಯ್ ಆನಂತರ ಸ್ಪಂದನಾ ಬಗ್ಗೆ ಭಾವುಕರಾಗಿ ವೀಡಿಯೋ ಮೂಲಕ ಮನದಾಳದ ಭಾವನೆಗಳನ್ನ ಅಕ್ಷರ ರೂಪಕ್ಕೆ ಇಳಿಸಿದ್ದರು. ಸ್ಪಂದನಾ ನೆನಪನ್ನ ತಮ್ಮೊಳಗಿನ ಪ್ರೀತಿಯನ್ನು ಅವರು ಬಿಚ್ಚಿಟ್ಟಿದ್ದರು. ಆ ಸಾಲುಗಳು ಕೂಡ ಅನೇಕರನ್ನು ಭಾವುಕರನ್ನಾಗಿಸಿದ್ದವು.
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…