ಚಿತ್ರ ಮಂಜರಿ

ಮಾಸಗಳು ಕಳೆದರೂ ಮಾಸದು ಹೃದಯದೊಳಗಿನ ಈ ಮಂದಹಾಸ : ಪತ್ನಿ ನೆನೆದು ಭಾವುಕ ಸಾಲುಗಳನ್ನು ಬರೆದ ವಿಜಯ್ ರಾಘವೇಂದ್ರ

ನಟ ವಿಜಯ್ ರಾಘವೇಂದ್ರ ಅವರು ಅಗಲಿದ ಪತ್ನಿ ಸ್ಪಂದನಾ ಅವರನ್ನು ನೆನಪಿಸಿಕೊಂಡು ಮತ್ತೆ ಭಾವುಕ ಸಾಲುಗಳನ್ನು ಬರೆದಿದ್ದಾರೆ. ಮಾಸಗಳು ಕಳೆದರೂ ಮಾಸದು ಹೃದಯದೊಳಗಿನ ಈ ಮಂದಹಾಸ… ಐ ಲವ್ ಯೂ ಚಿನ್ನಾ ಎಂದು ಭಾವುಕ ಸಾಲುಗಳನ್ನು ಬರೆದು, ಹೆಂಡತಿ ಜೊತೆಗಿನ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ.

ಈ ಹಿಂದೆಯೂ ವಿಜಯ ರಾಘವೇಂದ್ರ ತಮ್ಮ 16ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಈ ರೀತಿಯ ಭಾವುಕ ಸಾಲುಗಳನ್ನು ಬರೆದಿದ್ದರು. ಪ್ರತಿ ವರ್ಷವೂ ಸಂಭ್ರಮದಿಂದ ಆ ದಿನವನ್ನು ಬರಮಾಡಿಕೊಳ್ಳುತ್ತಿದ್ದವರು, ಸ್ಪಂದನಾ ಹೃದಯಾಘಾತದಿಂದ ನಿಧನರಾಗಿ, ವಿಜಯ್ ಅವರ ಎದೆಯಲ್ಲಿ ಆರದ ಗಾಯ ಮಾಡಿ ಹೋಗಿದ್ದಾರೆ. ಅಗಲಿದ ಪತ್ನಿಗೆ ವಿಜಯ ರಾಘವೇಂದ್ರ ಭಾವುಕ ಸಾಲುಗಳ ಮೂಲಕ ವಿಶ್ ಮಾಡಿದ್ದರು.

ಭಾವುಕ ಸಾಲುಗಳನ್ನು ಬರೆದು, ಅದಕ್ಕೆ ವಿಡಿಯೋ ಸ್ಪರ್ಶ ಕೂಡ ನೀಡಿರುವ ವಿಜಯ ರಾಘವೇಂದ್ರ ಚಿನ್ನ, ಇಣುಕು ನೋಟ ಬೀರಿ ಹೋದೆ ಬದುಕಿನ ಅಂಗಳದಲಿ ಎಲ್ಲೆ ಮೀರಿ ಒಲವ ನೀಡಿದೆ ಎದೆಯ ಅಂತರಾಳದಲಿ ಬದುಕನ್ನು ಕಟ್ಟಿ ಸರ್ವಸ್ವವಾದೆ ಉಸಿರಲ್ಲಿ ಬೆರೆತು ಜೀವಂತವಾದೆ ಮುದ್ದಾದ ನಗುವಿನಲ್ಲಿದ್ದ ಶಕ್ತಿ ಪರ್ವತದಷ್ಟು ಮರೆಯದೆ ತೊರೆಯದೆ ಎದೆಗೊತ್ತಿ ಪ್ರೀತಿಸುವೆ ಎಂದು ಬರೆದುಕೊಂಡಿದ್ದರು.

ಪತ್ನಿಯ ನಿಧನದಿಂದ ಮೌನಕ್ಕೆ ಶರಣಾಗಿದ್ದ ವಿಜಯ್ ಆನಂತರ ಸ್ಪಂದನಾ ಬಗ್ಗೆ ಭಾವುಕರಾಗಿ ವೀಡಿಯೋ ಮೂಲಕ ಮನದಾಳದ ಭಾವನೆಗಳನ್ನ ಅಕ್ಷರ ರೂಪಕ್ಕೆ ಇಳಿಸಿದ್ದರು. ಸ್ಪಂದನಾ ನೆನಪನ್ನ ತಮ್ಮೊಳಗಿನ ಪ್ರೀತಿಯನ್ನು ಅವರು ಬಿಚ್ಚಿಟ್ಟಿದ್ದರು. ಆ ಸಾಲುಗಳು ಕೂಡ ಅನೇಕರನ್ನು ಭಾವುಕರನ್ನಾಗಿಸಿದ್ದವು.

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago