ಚಿತ್ರ ಮಂಜರಿ

ಮಾಸಗಳು ಕಳೆದರೂ ಮಾಸದು ಹೃದಯದೊಳಗಿನ ಈ ಮಂದಹಾಸ : ಪತ್ನಿ ನೆನೆದು ಭಾವುಕ ಸಾಲುಗಳನ್ನು ಬರೆದ ವಿಜಯ್ ರಾಘವೇಂದ್ರ

ನಟ ವಿಜಯ್ ರಾಘವೇಂದ್ರ ಅವರು ಅಗಲಿದ ಪತ್ನಿ ಸ್ಪಂದನಾ ಅವರನ್ನು ನೆನಪಿಸಿಕೊಂಡು ಮತ್ತೆ ಭಾವುಕ ಸಾಲುಗಳನ್ನು ಬರೆದಿದ್ದಾರೆ. ಮಾಸಗಳು ಕಳೆದರೂ ಮಾಸದು ಹೃದಯದೊಳಗಿನ ಈ ಮಂದಹಾಸ… ಐ ಲವ್ ಯೂ ಚಿನ್ನಾ ಎಂದು ಭಾವುಕ ಸಾಲುಗಳನ್ನು ಬರೆದು, ಹೆಂಡತಿ ಜೊತೆಗಿನ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ.

ಈ ಹಿಂದೆಯೂ ವಿಜಯ ರಾಘವೇಂದ್ರ ತಮ್ಮ 16ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಈ ರೀತಿಯ ಭಾವುಕ ಸಾಲುಗಳನ್ನು ಬರೆದಿದ್ದರು. ಪ್ರತಿ ವರ್ಷವೂ ಸಂಭ್ರಮದಿಂದ ಆ ದಿನವನ್ನು ಬರಮಾಡಿಕೊಳ್ಳುತ್ತಿದ್ದವರು, ಸ್ಪಂದನಾ ಹೃದಯಾಘಾತದಿಂದ ನಿಧನರಾಗಿ, ವಿಜಯ್ ಅವರ ಎದೆಯಲ್ಲಿ ಆರದ ಗಾಯ ಮಾಡಿ ಹೋಗಿದ್ದಾರೆ. ಅಗಲಿದ ಪತ್ನಿಗೆ ವಿಜಯ ರಾಘವೇಂದ್ರ ಭಾವುಕ ಸಾಲುಗಳ ಮೂಲಕ ವಿಶ್ ಮಾಡಿದ್ದರು.

ಭಾವುಕ ಸಾಲುಗಳನ್ನು ಬರೆದು, ಅದಕ್ಕೆ ವಿಡಿಯೋ ಸ್ಪರ್ಶ ಕೂಡ ನೀಡಿರುವ ವಿಜಯ ರಾಘವೇಂದ್ರ ಚಿನ್ನ, ಇಣುಕು ನೋಟ ಬೀರಿ ಹೋದೆ ಬದುಕಿನ ಅಂಗಳದಲಿ ಎಲ್ಲೆ ಮೀರಿ ಒಲವ ನೀಡಿದೆ ಎದೆಯ ಅಂತರಾಳದಲಿ ಬದುಕನ್ನು ಕಟ್ಟಿ ಸರ್ವಸ್ವವಾದೆ ಉಸಿರಲ್ಲಿ ಬೆರೆತು ಜೀವಂತವಾದೆ ಮುದ್ದಾದ ನಗುವಿನಲ್ಲಿದ್ದ ಶಕ್ತಿ ಪರ್ವತದಷ್ಟು ಮರೆಯದೆ ತೊರೆಯದೆ ಎದೆಗೊತ್ತಿ ಪ್ರೀತಿಸುವೆ ಎಂದು ಬರೆದುಕೊಂಡಿದ್ದರು.

ಪತ್ನಿಯ ನಿಧನದಿಂದ ಮೌನಕ್ಕೆ ಶರಣಾಗಿದ್ದ ವಿಜಯ್ ಆನಂತರ ಸ್ಪಂದನಾ ಬಗ್ಗೆ ಭಾವುಕರಾಗಿ ವೀಡಿಯೋ ಮೂಲಕ ಮನದಾಳದ ಭಾವನೆಗಳನ್ನ ಅಕ್ಷರ ರೂಪಕ್ಕೆ ಇಳಿಸಿದ್ದರು. ಸ್ಪಂದನಾ ನೆನಪನ್ನ ತಮ್ಮೊಳಗಿನ ಪ್ರೀತಿಯನ್ನು ಅವರು ಬಿಚ್ಚಿಟ್ಟಿದ್ದರು. ಆ ಸಾಲುಗಳು ಕೂಡ ಅನೇಕರನ್ನು ಭಾವುಕರನ್ನಾಗಿಸಿದ್ದವು.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

1 hour ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago